AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬಸ್ಸಿನೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಗೂಳಿ; ಎದ್ನೋ ಬಿದ್ನೋ ಅಂತ ಓಡಿ ಹೋದ ಡ್ರೈವರ್‌-ಕಂಡಕ್ಟರ್

ಪ್ರಾಣಿಗಳ ಅವಾಂತರಗಳಿಗೆ ಸಂಬಂಧಿಸಿದ ಆಘಾತಕಾರಿ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಬೆಚ್ಚಿಬೀಳಿಸುವಂತಹ ದೃಶ್ಯ ವೈರಲ್‌ ಆಗಿದ್ದು, ಗೂಳಿಯೊಂದು ಬಸ್ಸಿನೊಳಗೆ ನುಗ್ಗಿ ದೊಡ್ಡ ಅವಾಂತರ ಸೃಷ್ಟಿಸಿದೆ. ಏಕಾಏಕಿ ಬಸ್ಸಿನೊಳಗೆ ಗೂಳಿ ನುಗ್ಗಿದ್ದು, ಭಯದಲ್ಲಿ ಕಂಡಕ್ಟರ್‌ ಮತ್ತು ಡ್ರೈವರ್‌ ಪ್ರಾಣ ಉಳಿದರೆ ಸಾಕೆನ್ನುತ್ತಾ ಬಸ್ಸಿನಿಂದ ಕೆಳ ಜಿಗಿದು ಓಡಿ ಹೋಗಿದ್ದಾರೆ.

Viral: ಬಸ್ಸಿನೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಗೂಳಿ; ಎದ್ನೋ ಬಿದ್ನೋ ಅಂತ ಓಡಿ ಹೋದ ಡ್ರೈವರ್‌-ಕಂಡಕ್ಟರ್
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Feb 13, 2025 | 3:55 PM

Share

ಮದವೇರಿದಾಗ ಆನೆ, ಗೂಳಿ ಸೇರಿದಂತೆ ಇನ್ನಿತರೆ ಪ್ರಾಣಿಗಳು ಎಲ್ಲೆಂದರಲ್ಲಿ ನುಗ್ಗಿ ದೊಡ್ಡ ಅವಾಂತರಗಳನ್ನೇ ಸೃಷ್ಟಿಸುತ್ತವೆ. ಹೀಗೆ ಹೆಚ್ಚಾಗಿ ಜನನಿಬಿಡ ಪ್ರದೇಶಗಳಿಗೆ ನುಗ್ಗಿ ಪ್ರಾಣಿಗಳು ಅವಾಂತರಗಳನ್ನು ಸೃಷ್ಟಿಸುವುದಕ್ಕೆ ಸಂಬಂಧಿಸಿ ಇಂತಹ ಸಾಕಷ್ಟು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ಏಕಾಏಕಿ ಬಸ್ಸಿನೊಳಗೆ ನುಗ್ಗಿದ ಗೂಳಿ ಕಿಟಕಿ ಗಾಜುಗಳನ್ನು ಪುಡಿ ಮಾಡಿ ಅವಾಂತರ ಸೃಷ್ಟಿಸಿದೆ. ಇದರಿಂದ ಭಯಭೀತರಾಗ ಕಂಡಕ್ಟರ್‌ ಮತ್ತು ಡ್ರೈವರ್‌ ಪ್ರಾಣ ಉಳಿದರೆ ಸಾಕೆನ್ನುತ್ತಾ ಬಸ್ಸಿನಿಂದ ಕೆಳ ಜಿಗಿದು ಓಡಿ ಹೋಗಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

ರಾಜಸ್ಥಾನದ ಜೈಪುರದಲ್ಲಿ ಈ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಏಕಾಏಕಿ ಬಸ್ಸಿನೊಳಗೆ ನುಗ್ಗಿದಂತಹ ಗೂಳಿಯೊಂದು ವಾಹನದ ಕಿಟಕಿ ಗಾಜುಗಳನ್ನು ಒದು ಹಾಕಿದೆ. ಮಾಧ್ಯಮ ವರದಿಗಳ ಪ್ರಕಾರ ಇಲ್ಲಿನ ತೋಡಿಮೋಡ್‌ ಕ್ರಾಸಿಂಗ್‌ ಬಳಿ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ಸಿನೊಳಗೆ ನುಗ್ಗಿದಂತಹ ಗೂಳಿಯೊಂದು ಹೊರ ಹೋಗಲು ಸಾಧ್ಯವಾಗದೆ ಕಿಟಕಿ ಗಾಜುಗಳನ್ನು ಒಡೆದು ಹಾಕಿದೆ. ಇದರಿಂದ ಗಾಬರಿಗೊಂಡ ಡ್ರೈವರ್‌ ಮತ್ತು ಕಂಡಕ್ಟರ್‌ ವಾಹನದಿಂದ ಕೆಳಜಿಗಿದು ಎದ್ನೋ ಬಿದ್ನೋ ಅಂತ ಪ್ರಾಣ ಉಳಿಸಿಕೊಳ್ಳಲು ಓಡಿ ಹೋಗಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ:

Hate Detector ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ವಿಡಿಯೋವನ್ನು ಶೇರ್‌ ಮಾಡಲಾಗಿದ್ದು, ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಬಸ್ಸಿನೊಳಗೆ ನುಗ್ಗಿದ ಗೂಳಿ ಕೋಪದಲ್ಲಿ ಕಿಟಕಿ ಗಾಜುಗಳನ್ನು ಪುಡಿ ಮಾಡುತ್ತಿರುವ ಬೆಚ್ಚಿ ಬೀಳಿಸುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಕುಂಭಮೇಳದಲ್ಲಿ ಚಹಾ ಮಾರಿ ಕೇವಲ ಒಂದು ದಿನದಲ್ಲಿ 5 ಸಾವಿರ ರೂ. ಲಾಭ ಗಳಿಸಿದ ಯುವಕ; ವಿಡಿಯೋ ವೈರಲ್‌

ಈ ಘಟನೆಯಿಂದ ಬಸ್ಸಿಗೆ ಒಂದಷ್ಟು ಹಾನಿಯಾಗಿದ್ದು ಬಿಟ್ಟರೆ ಇನ್ನು ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್