AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಫೋಟೋ ಶೂಟ್‌ ವೇಳೆ ಬಂದ ರೈಲು, ಪ್ರಾಣ ಉಳಿಸಿಕೊಳ್ಳಲು ಕಂದಕಕ್ಕೆ ಹಾರಿದ ದಂಪತಿ; ವಿಡಿಯೋ ವೈರಲ್‌

ಕೆಲವರಿಗೆ ಎಲ್ಲೆಂದರಲ್ಲಿ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಳ್ಳುವ ಕ್ರೇಜ್‌. ಕೆಲವೊಮ್ಮೆ ಈ ಫೋಟೋಶೂಟ್‌ ಪ್ರಾಣಕ್ಕೆ ಸಂಚಕಾರ ತಂದೊಡ್ಡುತ್ತವೆ. ಅಂತಹದೇ ಘಟನೆಯೊಂದು ಇದೀಗ ನಡೆದಿದ್ದು, ರೈಲು ಸೇತುವೆಯ ಮೇಲೆ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುವಾಗ, ಇದ್ದಕ್ಕಿದ್ದಂತೆ ರೈಲು ಬಂದಿದ್ದು, ಹೇಗಾದ್ರೂ ಪ್ರಾಣ ಉಳಿಸಿಕೊಂಡರೆ ಸಾಕೆಂದು ದಂಪತಿಗಳಿಬ್ಬರು ಕಂದಕಕ್ಕೆ ಜಿಗಿದಿದ್ದಾರೆ. ಈ ಭೀಕರ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ.

Viral Video: ಫೋಟೋ ಶೂಟ್‌ ವೇಳೆ ಬಂದ ರೈಲು, ಪ್ರಾಣ ಉಳಿಸಿಕೊಳ್ಳಲು ಕಂದಕಕ್ಕೆ ಹಾರಿದ ದಂಪತಿ; ವಿಡಿಯೋ ವೈರಲ್‌
ಮಾಲಾಶ್ರೀ ಅಂಚನ್​
| Edited By: |

Updated on: Jul 16, 2024 | 1:53 PM

Share

ಕೆಲವೊಬ್ಬರಿಗೆ ಎಲ್ಲೆಂದರಲ್ಲಿ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಳ್ಳುವುದೆಂದರೆ ವಿಪರೀತ ಕ್ರೇಜ್.‌ ಇನ್ನೂ ಕೆಲವರಂತೂ ತುಂಬಿ ಹರಿಯುವ ನದಿ, ಜಲಪಾತ ಮುಂತಾದ ಅಪಾಯಕಾರಿ ಸ್ಥಳಗಳಿಗೆ ಹೋಗಿ ಫೋಟೋ ಶೂಟ್‌ ಮಾಡಿಸಿಕೊಳ್ಳುತ್ತಾರೆ. ಹೀಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಅದೆಷ್ಟೋ ಘಟನೆಗಳು ನಡೆದಿವೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ದಂಪತಿಗಳಿಬ್ಬರು ರೈಲ್ವೆ ಹಳಿಯ ಮೇಲೆ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುವಾಗ, ಇದ್ದಕ್ಕಿದ್ದಂತೆ ರೈಲು ಬಂದಿದ್ದು, ಪ್ರಾಣ ಉಳಿದರೆ ಸಾಕೆಂದು ಈ ದಂಪತಿ 90 ಅಡಿ ಕಂದಕಕ್ಕೆ ಹಾರಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಈ ಘಟನೆ ರಾಜಸ್ಥಾನದ ಪಾಲಿ ಎಂಬಲ್ಲಿ ನಡೆದಿದ್ದು, ಇಲ್ಲಿನ ಗೋರ್ಮಾಘಾರ್‌ ರೈಲು ಸೇತುವೆಯ ಮೇಲೆ ದಂಪತಿಗಳಿಬ್ಬರು ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಇದ್ದಕ್ಕಿದ್ದಂತೆ ರೈಲು ಬಂದಿದ್ದು, ಈ ಅಪಾಯದಿಂದ ತಪ್ಪಿಸಿಕೊಳ್ಳಲು ದಂಪತಿ 90 ಅಡಿ ಆಳದ ಕಂದಕಕ್ಕೆ ಜಿಗಿದಿದ್ದಾರೆ. ಈ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಇಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರಲು ಸ್ಥಳೀಯ ಅಧಿಕಾರಿಗಳು ಯೋಜಿಸುತ್ತಿದ್ದಾರೆ.

ಮತ್ತಷ್ಟು ಓದಿ: ವಯಸ್ಸು ಕೇವಲ ಸಂಖ್ಯೆ ಅಷ್ಟೇ, ಆರೂವರೆ ಅಡಿ ಎತ್ತರದ ಗೇಟ್ ಹಾರಿ ವೃದ್ಧಾಶ್ರಮದಿಂದ ಪರಾರಿಯಾದ 92ರ ಅಜ್ಜಿ

TimesNow ಅಧೀಕೃತ ಎಕ್ಸ್‌ ಖಾತೆಯಲ್ಲಿ ಈ ಕುರಿತ ಪೋಸ್ಟ್‌ ಒಂದನ್ನು ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಗೋರ್ಮಾಘಾರ್‌ ರೈಲು ಸೇತುವೆಯ ಮೇಲೆ ನಿಂತು ದಂಪತಿಗಳಿಬ್ಬರು ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಇದ್ದಕ್ಕಿದ್ದಂತೆ ರೈಲು ಬಂದಿದ್ದು, ಆ ಸಂದರ್ಭದಲ್ಲಿ ಪ್ರಾಣ ಉಳಿದರೆ ಸಾಕು ಎಂದು ಇವರಿಬ್ಬರೂ ಒಂದು ಕ್ಷಣ ಯೋಚಿಸದೆ 90 ಅಡಿ ಆಳದ ಕಂದಕಕ್ಕೆ ಜಿಗಿಯುವ ಭೀಕರ ದೃಶ್ಯವನ್ನು ಕಾಣಬಹುದು.

ಜುಲೈ 15 ರಂದು ಹಂಚಿಕೊಳ್ಳಲಾದ ಈ ವಿಡಿಯೋ 399 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಇಂತಹ ಅಪಾಯಕಾರಿ ಸ್ಥಳಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಅವಶ್ಯಕತೆ ಇದೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ