AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಸಹಜ ಸೌಂದರ್ಯದಿಂದಲೇ ಇಂಟರ್‌ನೆಟ್‌ ಸೆನ್ಸೇಷನ್ ಆದ ರಾಜಸ್ಥಾನಿ ಯುವತಿ, ವಿಡಿಯೋ ವೈರಲ್

ಸಾಂಪ್ರದಾಯಿಕ ಉಡುಗೆ ತೊಟ್ಟ ರಾಜಸ್ಥಾನಿ ಸುಂದರಿಯೊಬ್ಬಳ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜ್ಯೋತಿ ಎಂಬ ಹೆಸರಿನ ಈ ಯುವತಿಯ ಸಾಂಪ್ರದಾಯಿಕ ಉಡುಪು ತೊಟ್ಟು ಯಾವುದೇ ಮೇಕಪ್ ಮಾಡಿಕೊಳ್ಳದೇ ತನ್ನ ಸಹಜ ಸೌಂದರ್ಯದಿಂದಲೇ ಮೋಡಿ ಮಾಡಿದ್ದಾಳೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ನೆಟ್ಟಿಗರಿಂದ ಮೆಚ್ಚುಗೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ.

Viral : ಸಹಜ ಸೌಂದರ್ಯದಿಂದಲೇ ಇಂಟರ್‌ನೆಟ್‌ ಸೆನ್ಸೇಷನ್ ಆದ ರಾಜಸ್ಥಾನಿ ಯುವತಿ, ವಿಡಿಯೋ ವೈರಲ್
Rajasthan Girl Jyothi
ಸಾಯಿನಂದಾ
| Edited By: |

Updated on:Jan 05, 2025 | 12:33 PM

Share

ಇತ್ತೀಚಿನ ದಿನಗಳಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಲೈಕ್ಸ್, ವೀವ್ಸ್‌ ಹಾಗೂ ಫೇಮಸ್‌ ಆಗಲು ಏನೇನೋ ಮಾಡುವುದನ್ನು ನೋಡಿರಬಹುದು. ಆದರೆ ಈ ರಾಜಸ್ತಾನಿ ಯುವತಿಯು ತನ್ನ ಸಹಜ ಸೌಂದರ್ಯದಿಂದಲೇ ಸೆನ್ಸೆಷನಲ್ ಆಗಿದ್ದಾಳೆ. ಸಾಂಪ್ರದಾಯಿಕ ಉಡುಗೆ ತೊಟ್ಟು ಮೇಕಪ್‌ ಮಾಡಿಕೊಳ್ಳದ ಜ್ಯೋತಿ ಎಂಬ ಈ ಯುವತಿ ವ್ಲಾಗರ್‌ ಜೊತೆಗೆ ಮಾತನಾಡಿದ್ದಾಳೆ. ರಾಜಸ್ಥಾನಿ ಉಡುಗೆಯೊಂದಿಗೆ ತನ್ನ ಸಹಜ ಸೌಂದರ್ಯದಿಂದಲೇ ನೆಟ್ಟಿಗರು ಈಕೆಯನ್ನು ಮೆಚ್ಚಿಕೊಂಡಿದ್ದಾಳೆ.

ಹೌದು, ರಾಜಸ್ಥಾನಿ ಸಾಂಪ್ರದಾಯಿಕ ಉಡುಪು ತೊಟ್ಟ ಜ್ಯೋತಿಯು ತನ್ನ ತಲೆಯನ್ನು ಘೂಂಘಾಟ್‌ನಿಂದ ಮುಚ್ಚಿಕೊಂಡಿರುವುದನ್ನು ನೋಡಬಹುದು. ಬಿಂದಿ, ಕಿವಿಯೋಲೆ, ಬಳೆಗಳನ್ನು ಧರಿಸಿರುವ ಈ ಯುವತಿ ಪಕ್ಕಾ ಸಾಂಪ್ರದಾಯಿಕ ಲುಕ್ ನಿಂದಲೇ ಗಮನ ಸೆಳೆದಿದ್ದಾಳೆ. ಈ ಯುವತಿ ವ್ಲಾಗರ್‌ ಜೊತೆಗೆ ಮಾತನಾಡುತ್ತಿದ್ದು, ಈ ವೇಳೆಯಲ್ಲಿ ಆಕೆಗೆ ನಗು ತಡೆಯಾಗುತ್ತಿಲ್ಲ. ನಾನು ಮಾತನಾಡುವುದನ್ನು ಇಲ್ಲಿಯವರೆಗೆ ಯಾರೂ ಕೂಡ ವಿಡಿಯೋ ರೆಕಾರ್ಡ್‌ ಮಾಡಿಲ್ಲ ಎಂದು ನಾಚುತ್ತಲೇ ಹೇಳಿದ್ದಾಳೆ.

View this post on Instagram

A post shared by Nk Choudhary (@nemu_.__)

ಇದನ್ನೂ ಓದಿ: ಚಪಾತಿ ಮಾಡುವುದರಿಂದ ಹಿಡಿದು ಪಾತ್ರೆ ತೊಳೆಯುವವರೆಗೆ ಹೆಣ್ಮಕ್ಕಳಿಗಿಂತ ಸೂಪರ್ ಆಗಿ ಮನೆ ಕೆಲಸ ಮಾಡುವ ಕೋತಿಯಿದು

Nemu ಹೆಸರಿನ ಖಾತೆಯಲ್ಲಿ ಆಕೆಯ ಮುದ್ದಾದ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆಯ ಸುರಿಮಳೆಗೈದಿದ್ದಾರೆ. ಬಳಕೆದಾರರೊಬ್ಬರು, ನಿಜವಾಗಿ ಇವಳು ತುಂಬಾ ಚಂದ ಇದ್ದಾಳೆ” ಎಂದಿದ್ದಾರೆ. ಮತ್ತೊಬ್ಬರು, ‘ಇದು ಭಾರತದ ಸೌಂದರ್ಯದ ಸಂಕೇತ. ಈ ಹಳ್ಳಿ ಜನರ ಮುಗ್ಧತೆ ನೋಡುವಾಗ ನಿಜಕ್ಕೂ ಸಂತೋಷವಾಗುತ್ತದೆ. ಇವರಿಗೆ ಮೋಸ, ವಂಚನೆಯ ಬಗ್ಗೆ ಅರಿವೇ ಇರುವುದಿಲ್ಲ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:21 pm, Sun, 5 January 25

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!