Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಗ್ಯಾಸ್‌ ಕಟರ್‌ ಬಳಸಿ ಎಟಿಎಂನಿಂದ 38 ಲಕ್ಷ ರೂ. ದೋಚಿ ಪರಾರಿಯಾದ ಖದೀಮರು

ಕಳ್ಳತನ, ದರೋಡೆ ಪ್ರಕರಣಗಳ ಸುದ್ದಿಗಳು ಪ್ರತಿನಿತ್ಯ ಕೇಳಿ ಬರುತ್ತಲೇ ಇರುತ್ತವೆ. ಇಲ್ಲೊಂದು ಅಂತಹದ್ದೇ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕಳ್ಳರ ಗುಂಪೊಂದು ಸಿನಿಮೀಯ ಶೈಲಿಯಲ್ಲಿ ಎಟಿಎಂನಲ್ಲಿದ್ದ 38 ಲಕ್ಷ ಹಣವನ್ನು ದೋಚಿದ್ದಾರೆ. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ಗೆ ಸೇರಿದ ಎಟಿಎಂಗೆ ನುಗ್ಗಿ, ಅಲ್ಲಿದ್ದ ಸಿಸಿ ಕ್ಯಾಮೆರಾಗಳಿಗೆ ಸ್ಪ್ರೇ ಹೊಡೆದು ಬಳಿಕ ಗ್ಯಾಸ್‌ ಕಟರ್‌ ಬಳಸಿ ಎಟಿಎಂನಿಂದ ಹಣ ದೋಚಿ ಪರಾರಿಯಾಗಿದ್ದಾರೆ.

Viral: ಗ್ಯಾಸ್‌ ಕಟರ್‌ ಬಳಸಿ ಎಟಿಎಂನಿಂದ 38 ಲಕ್ಷ ರೂ. ದೋಚಿ ಪರಾರಿಯಾದ ಖದೀಮರು
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 20, 2025 | 1:01 PM

ರಾಜಸ್ಥಾನ, ಮಾ. 17: ಅಂಗಡಿ ಮುಂಗಟ್ಟು, ಮನೆಗಳಿಗೆ ನುಗ್ಗಿ ಕಳ್ಳತನ (theft) ಮಾಡುವವರು ಒಂದು ಕಡೆಯಾದ್ರೆ, ಒಂದಷ್ಟು ಖದೀಮರು ಎಟಿಎಂ (ATM) ಹಾಗೂ ಬ್ಯಾಂಕ್‌ಗಳಿಗೆಯೇ (Bank) ನುಗ್ಗಿ ದೊಡ್ಡ ಮೊತ್ತದ ಹಣ, ಲಾಕರ್‌ನಲ್ಲಿದ್ದ ಚಿನ್ನವನ್ನು ದರೋಡೆ (Robbery) ಮಾಡುತ್ತಾರೆ. ಇಂತಹ ಬ್ಯಾಂಕ್ ದರೋಡೆಗಳಿಗೆ ಸಂಬಂಧಿಸಿದ ಸುದ್ದಿಗಳು ಕೇಳಿ ಬರುತ್ತಲೇ ಇರುತ್ತವೆ. ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ದರೋಡೆಕೋರರು ಸಿನಿಮೀಯ ಶೈಲಿಯಲ್ಲಿ ಎಟಿಎಂನಲ್ಲಿದ್ದ ನಗದು ಹಣವನ್ನು ದೋಚಿದ್ದಾರೆ. ಹೌದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (SBI) ಬ್ಯಾಂಕ್‌ಗೆ ಸೇರಿದ ಎಟಿಎಂ ಗೆ ನುಗ್ಗಿ ಮೊದಲು ಅಲ್ಲಿದ್ದ ಸಿಸಿ ಕ್ಯಾಮೆರಾಗಳಿಗೆ ಸ್ಪ್ರೇ ಹೊಡೆದು ಬಳಿಕ ಗ್ಯಾಸ್‌ ಕಟರ್‌ ಬಳಸಿ ಎಟಿಎಂ ಯಂತ್ರ ಕತ್ತರಿಸಿ ಹಣ ದೋಚಿ ಪರಾರಿಯಾಗಿದ್ದಾರೆ. ಕಳ್ಳತನಕ್ಕೂ ಮುಂಚಿನ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಈ ಘಟನೆ ರಾಜಸ್ಥಾನದ ಜುಂಝುನು ಎಂಬಲ್ಲಿ ನಡೆದಿದ್ದು, ಇಲ್ಲಿನ ಎಟಿಎಂ ಒಂದಕ್ಕೆ ನುಗ್ಗಿದ ದರೋಡೆಕೋರರು ಹಣ ದೋಚಿ ಪರಾರಿಯಾಗಿದ್ದಾರೆ. ಶನಿವಾರ (ಮಾ. 15) ಬೆಳಗಿನ ಜಾವ 3.11 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ಗೆ ಸೇರಿದ ಎಟಿಎಂಗೆ ನುಗ್ಗಿದ ಕಳ್ಳರು ಮೊದಲಿಗೆ ಅಲ್ಲಿದ್ದ ಸಿಸಿ ಟಿವಿ ಕ್ಯಾಮೆರಾಗಳಿಗೆ ಸ್ಪ್ರೇ ಹೊಡೆದು ನಂತರ ಗ್ಯಾಸ್‌ ಕಟರ್‌ ಬಳಸಿ ಎಟಿಎಂ ಯಂತ್ರ ಕತ್ತರಿಸಿದ ಅದರಲ್ಲಿದ್ದ ಬರೋಬ್ಬರಿ 38 ಲಕ್ಷ ರೂ. ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಎಟಿಎಂ ಯಂತ್ರ ಕತ್ತರಿಸುವಾಗ ಅದರೊಳಗಿದ್ದ 100 ರೂ. ನೋಟಿನ ಬಂಟಲ್‌ಗಳು ಸುಟ್ಟು ಹೋಗಿದ್ದು, ಕಳ್ಳರು ಅದನ್ನು ಅಲ್ಲೇ ಬಿಟ್ಟು ಇನ್ನುಳಿದ ಹಣವನ್ನು ದೋಚಿದ್ದಾರೆ.

ಇದನ್ನೂ ಓದಿ
Image
ವಯಸ್ಸು 108 ಆದ್ರೂ ಕುಂದದ ಜೀವನೋತ್ಸಾಹ
Image
ಸೂಪ್‌ಗೆ ಮೂತ್ರ ವಿಸರ್ಜನೆ ಮಾಡಿ ಹುಚ್ಚಾಟ ಮೆರೆದ ಯುವಕರು
Image
ತಮ್ಮ ಮಗುವಿನ ಸಲುವಾಗಿ ಸಹ ಪ್ರಯಾಣಿಕರಿಗೆ ಕ್ಯೂಟ್‌ ಪತ್ರದೊಂದಿಗೆ ಗಿಫ್ಟ್‌
Image
ಪ್ಲಾಸ್ಟಿಕ್‌ ಬಾಟಲಿಯಿಂದ ತಯಾರಾದ ಸನ್‌ಲೈಟ್‌ ಪವರ್ಡ್‌ ಬಲ್ಬ್‌ ಇದು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಮಾಹಿತಿಗಳ ಪ್ರಕಾರ ಮಾರ್ಚ್‌ 13 ರಂದು ಮಧ್ಯಾಹ್ನ 1 ಹಂಟೆಯ ಸುಮಾರಿಗೆ ಆ ಎಟಿಎಂಗೆ 39 ಲಕ್ಷಕ್ಕೂ ಹೆಚ್ಚಿನ ಹಣವನ್ನು ಲೋಡ್‌ ಮಾಡಲಾಗಿತ್ತು. ಮತ್ತು ಗ್ರಾಹಕರು 1 ಲಕ್ಷ ಹಣವನ್ನು ಮಾತ್ರ ವಿತ್‌ಡ್ರಾ ಮಾಡಿದ್ದರು. ಎರಡು ದಿನಗಳ ಬಳಿಕ ಮುಂಜಾನೆ ವೇಳೆ ಕಳ್ಳರು ಎಟಿಎಂನಲ್ಲಿದ್ದ ಹಣವನ್ನೆಲ್ಲಾ ದೋಚಿ ಪರಾರಿಯಾಗಿದ್ದಾರೆ. ಇದೀಗ ಪೊಲೀಸರು ಹಣ ದೋಚಿದ ಖದೀಮರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

timesofindia ಅಧೀಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಎಟಿಎಂಗೆ ನುಗ್ಗಿದ ಮುಸುಕುಧಾರಿ ಕಳ್ಳ ಕಳ್ಳತನಕ್ಕೂ ಮೊದಲು ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಿಗೆ ಸ್ಪ್ರೇ ಹೊಡೆಯುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಕಾಲ್‌ ಸೆಂಟರ್‌ಗೆ ನುಗ್ಗಿ ಲ್ಯಾಪ್‌ಟಾಪ್‌, ಮಾನಿಟರ್‌ ಸೇರಿದಂತೆ ಸಿಕ್ಕಿದ್ದನ್ನೆಲ್ಲಾ ದೋಚಿದ ಪಾಕಿಸ್ತಾನದ ಜನ; ವಿಡಿಯೋ ವೈರಲ್‌

ಮಾರ್ಚ್‌ 16 ರಂದು ಶೇರ್‌ ಮಾಡಲಾದ ಈ ವಿಡಿಯೋ 5.7 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಸಿಸಿ ಕ್ಯಾಮೆರಾದ ಬದಲು ಇಂತಹ ಸ್ಥಳಗಳಲ್ಲಿ ಹಿಡನ್‌ ಕ್ಯಾಮೆರಾಗಳನ್ನು ಅಳವಡಿಸುವುದು ಉತ್ತಮʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಕ್ಯಾಮೆರಾ ಅಳವಡಿಸಿದರೆ ಸಾಲದು, ಎಟಿಎಂ ಯಂತ್ರಗಳ ಬಳಿ ಕೆಲವೊಂದು ಅತ್ಯಾಧುನಿಕ ಎಚ್ಚರಿಕೆಯ ವ್ಯವಸ್ಥೆಯನ್ನು ಅಳವಡಿಸಬೇಕುʼ ಎಂದು ಹೇಳಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್