ಮಗುವನ್ನು ಟ್ರಾಲಿ ಬ್ಯಾಗ್​ನಲ್ಲಿರಿಸಿ 118 ಕಿ.ಮೀ ಪಾದಯಾತ್ರೆ ಹೊರಟ ದಂಪತಿ

ಮದುವೆಯಾಗಿ 12 ವರ್ಷಗಳ ಬಳಿಕ ಮನೆಯಲ್ಲಿ ಮಗುವಿನ ನಗು ಪ್ರತಿಧ್ವನಿಸಿದಾಗ ಪೋಷಕರ ಆನಂದಕ್ಕೆ ಪಾರವೇ ಇರಲಿಲ್ಲ. ಆಸೆ ಈಡೇರಿದ್ದು, ಮೊದಲೇ ಬೇಡಿಕೊಂಡಂತೆ ದೇವಸ್ಥಾನವೊಂದಕ್ಕೆ ದಂಪತಿ ಕಾಲ್ನಡಿಗೆಯಲ್ಲೇ ಪಯಣಿಸಿದ್ದಾರೆ. ಮಗುವನ್ನು ಟ್ರಾಲಿ ಬ್ಯಾಗ್​ಗೆ ಹಾಕಿ ಎಳೆದುಕೊಂಡು 118 ಕಿ.ಮೀ ಪಾದಯಾತ್ರೆ ಮಾಡಿದ್ದಾರೆ.

ಮಗುವನ್ನು ಟ್ರಾಲಿ ಬ್ಯಾಗ್​ನಲ್ಲಿರಿಸಿ 118 ಕಿ.ಮೀ ಪಾದಯಾತ್ರೆ ಹೊರಟ ದಂಪತಿ
ಮಗು
Follow us
|

Updated on: Oct 08, 2024 | 9:01 AM

ಮದುವೆಯಾಗಿ 12 ವರ್ಷಗಳ ಬಳಿಕ ಮನೆಯಲ್ಲಿ ಮಗುವಿನ ನಗು ಪ್ರತಿಧ್ವನಿಸಿದಾಗ ಪೋಷಕರ ಆನಂದಕ್ಕೆ ಪಾರವೇ ಇರಲಿಲ್ಲ. ಆಸೆ ಈಡೇರಿದ್ದು, ಮೊದಲೇ ಬೇಡಿಕೊಂಡಂತೆ ದೇವಸ್ಥಾನವೊಂದಕ್ಕೆ ದಂಪತಿ ಕಾಲ್ನಡಿಗೆಯಲ್ಲೇ ಪಯಣಿಸಿದ್ದಾರೆ. ಮಗುವನ್ನು ಟ್ರಾಲಿ ಬ್ಯಾಗ್​ಗೆ ಹಾಕಿ ಎಳೆದುಕೊಂಡು 118 ಕಿ.ಮೀ ಪಾದಯಾತ್ರೆ ಮಾಡಿದ್ದಾರೆ.

ಈ ಘಟನೆ ರಾಜಸ್ಥಾನದಲ್ಲಿ ನಡೆದಿದೆ, ಬಿಲ್ವಾರಾ-ಕೋಟಾ ಹೆದ್ದಾರಿಯಲ್ಲಿ ಟ್ರಾಲಿ ಬ್ಯಾಗ್​ನಲ್ಲಿ ಮಗುವನ್ನು ನೋಡಿದ ಜನರು ಆಶ್ಚರ್ಯಚಕಿತರಾದರು.

ಮಾಹಿತಿ ಪ್ರಕಾರ ಜಿಲ್ಲೆಯ ಬಾಗೂರು ಬಳಿ ವಾಸವಿದ್ದ ದಂಪತಿ ಹನ್ನೆರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ಅವರಿಗೆ ಮಗುವಾಗಿರಲಿಲ್ಲ. ಜೋಗನಿಯ ಮಾತೆಗೆ ಹರಕೆ ಕಟ್ಟಿಕೊಂಡಿದ್ದರು.

ಮಗು ಜನಿಸಿತು ಮತ್ತು ಅವರ ಆಸೆ ಈಡೇರಿದ ನಂತರ, ಅವರು ತಾಯಿಯ ಆಶೀರ್ವಾದ ಪಡೆಯಲು ನವರಾತ್ರಿಯಲ್ಲಿ ಕಾಲ್ನಡಿಗೆಯಲ್ಲಿ ಹೋಗಲು ನಿರ್ಧರಿಸಿದರು. ಮಗು ತುಂಬಾ ಚಿಕ್ಕದಾಗಿದೆ, ಅವನು ತನ್ನ ತಾಯಿ ಇಲ್ಲದೆ ಇರುವುದಿಲ್ಲ ಹಾಗಾಗಿ ಮಗುವನ್ನು ಕರೆದುಕೊಂಡು ಹೋಗಲು ಪ್ಲ್ಯಾನ್ ಮಾಡಿ ಟ್ರಾಲಿ ಬ್ಯಾಗ್​ನಲ್ಲಿ ಹಾಕಿದ್ದರು.

ಮತ್ತಷ್ಟು ಓದಿ: ಸಾಮೂಹಿಕ ವಿವಾಹವಾದ್ರೆ ಹಣ ಸಿಗುತ್ತೆ ಎಂದು ಅಣ್ಣ, ತಂಗಿಯೇ ಮದುವೆಯಾದ್ರು

ಜೋಗನಿಯಾ ಮಾತಾ ಬಾಗೋರ್‌ನಿಂದ 118 ಕಿಲೋಮೀಟರ್ ದೂರದಲ್ಲಿದೆ. ಶನಿವಾರ ಸಂಜೆ ದಂಪತಿಗಳು ಬಾಗೋರಿನಿಂದ ಹೊರಟರು. ಭಾನುವಾರ ಬೆಳಗ್ಗೆ ಭಿಲ್ವಾರಾ ತಲುಪಿದ್ದಾರೆ. ಸೋಮವಾರ ಸಂಜೆ ಜೋಗನಿಯಾ ಮಾತೆಯನ್ನು ತಲುಪಲಿದ್ದಾರೆ. ಪಾದಯಾತ್ರೆ ವೇಳೆ ಚಪ್ಪಲಿ, ಶೂ ಧರಿಸಿರಲಿಲ್ಲ. ಅವರು ಬರಿಗಾಲಿನಲ್ಲಿ ಮಾತೆಯ ಆಸ್ಥಾನಕ್ಕೆ ಹೋಗಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್