AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಊರಿನ ಪಾರಿವಾಳಗಳ ಹೆಸರಿನಲ್ಲಿದೆ ಕೋಟ್ಯಾಂತರ ರೂ.ಮೌಲ್ಯದ ಆಸ್ತಿ !

ಪಾರಿವಾಳಗಳ ಹೆಸರಿನಲ್ಲಿ 27 ಅಂಗಡಿಗಳು, 126 ದೊಡ್ಡ ಭೂಮಿ, ಬ್ಯಾಂಕ್​ನಲ್ಲಿ 30 ಲಕ್ಷ ರೂ ಹಣ ಸೇರಿದಂತೆ ಪಾರಿವಾಳಗಳ ಹೆಸರಿನಲ್ಲಿ 470 ಹಸುಗಳಿರುವ ಒಂದು ಗೋಶಾಲೆಯನ್ನೂ ನಡೆಸಲಾಗುತ್ತಿದೆ.

ಈ ಊರಿನ ಪಾರಿವಾಳಗಳ ಹೆಸರಿನಲ್ಲಿದೆ ಕೋಟ್ಯಾಂತರ ರೂ.ಮೌಲ್ಯದ ಆಸ್ತಿ !
ಪಾರಿವಾಳ
TV9 Web
| Edited By: |

Updated on: Jan 10, 2022 | 3:22 PM

Share

ರಾಜಸ್ಥಾನ: ಮನುಷ್ಯರ ಹೆಸರಿನಲ್ಲಿ ಕೋಟಿ ಕೋಟಿ ಆಸ್ತಿ ಮಾಡಿರುವುದನ್ನು ಕೇಳುತ್ತೇವೆ, ನೋಡುತ್ತೇವೆ. ಆದರೆ ಪಾರಿವಾಳಗಳ ಹೆಸರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಆಸ್ತಿ ಇದೆ ಎಂದರೆ ನಂಬುತ್ತೀರಾ? ಹೌದು. ನಂಬಲೇಬೇಕು. ರಾಜಸ್ಥಾನದ ನಾಗ್ಪುರ ಜಿಲ್ಲೆಯ ಜಸನಗರ್  ಊರಿನಲ್ಲಿರುವ ಪಾರಿವಾಳಗಳ ಹೆಸರಿನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಆಸ್ತಿ ಇದೆ. ಇಲ್ಲಿ ಪಾರಿವಾಳಗಳ ಹೆಸರಿನಲ್ಲಿ 27 ಅಂಗಡಿಗಳು, 126 ದೊಡ್ಡ ಭೂಮಿ, ಬ್ಯಾಂಕ್​ನಲ್ಲಿ 30 ಲಕ್ಷ ರೂ ಹಣ ಸೇರಿದಂತೆ ಪಾರಿವಾಳಗಳ ಹೆಸರಿನಲ್ಲಿ 470 ಹಸುಗಳಿರುವ ಒಂದು ಗೋಶಾಲೆಯನ್ನೂ ನಡೆಸಲಾಗುತ್ತಿದೆ. ಇದೀಗ ಈ ವಿಚಾರ ಎಲ್ಲರನ್ನೂ ಅಚ್ಚರಿಗೊಳಿಸಿದೆ. 

ಪಾರಿವಾಳಗಳ ರಕ್ಷಣೆಗಾಗಿ  40 ವರ್ಷಗಳ ಹಿಂದೆ ಗುರು ಮುರುಧರ್​ ಕೇಸರಿ ಎನ್ನುವ ಗುರುವಿನಿಂದ ಪ್ರೇರಣೆ ಪಡೆದ ಮಾಜಿ ಸರಪಂಚ್ ರಾಮದಿನ್ ಚೋಟಿಯಾ  ಕಬುವಾನ್​ ಎನ್ನುವ ಟ್ರಸ್ಟ್​ ಅನ್ನು ಸ್ಥಾಪಿಸಿದರು. ಅದರ ಮೂಲಕ ಪಾರಿವಾಗಳಿಗೆ ಪ್ರತಿದಿನ ನೀರು ಮತ್ತು ಆಹಾರ ಧಾನ್ಯಗಳ ಪೂರೈಕೆ ಮಾಡಲಾಗಿತ್ತದೆ. ಟ್ರಸ್ಟ್​ ಮೂಲಕ 27 ಅಂಗಡಿಗಳನ್ನು ನಿರ್ಮಿಸಿ ಅದರಿಂದ ಬಂದ ಆದಾಯದ ಮೂಲಕ ಪಾರಿವಾಳಗಳಿಗೆ 3 ಚೀಲ ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ.  3 ಚೀಲ ಭತ್ತವನ್ನು 4 ಸಾವಿರ ರೂ ಖರ್ಚಿನಲ್ಲಿ ಪಾರಿವಾಳಗಳಿಗೆ ನೀಡಲಾಗುತ್ತದೆ ಇನ್ನು 470 ಹಸುಗಳಿರುವ ಗೋಶಾಲೆಗೂ ಆಹಾರ ಪೂರೈಸಲಾಗುತ್ತದೆ.  ಟ್ರಸ್ಟ್​ಗೆ ಅಂಗಡಿಗಳ ಬಾಡಿಗೆಯಿಂದ ತಿಂಗಳಿಗೆ 80 ಸಾವಿರ ರೂ. ಆದಾಯ ಬರುತ್ತದೆ. ಅಲ್ಲದೆ 126 ಬಿಘಾ ಭೂಮಿ ಸ್ಥಿರಾಸ್ತಿಯಾಗಿದೆ. ಎಲ್ಲ ಖರ್ಚಿನ ಬಳಿಕ ಪಾರಿವಾಳಗಳ ರಕ್ಷಣೆಗೆ ಉಳಿಸಿರುವ ಹಣ ಈಗ ಒಟ್ಟು 30 ಲಕ್ಷ ರೂ ಆಗಿದೆ ಎಂದು ಟ್ರಸ್ಟ್​​ ಮಾಹಿತಿ ನೀಡಿದೆ.

ಟ್ರಸ್ಟ್​ನ ಕಾರ್ಯದರ್ಶಿ ಮಾತನಾಡಿ, ಊರಿನ ಜನ ಪಾರಿವಾಳಗಳ ರಕ್ಷಣೆಗೆ ಬಹಿರಂಗವಾಗಿಯೇ ದಾನ ಮಾಡುತ್ತಿದ್ದಾರೆ. ಅದೆಲ್ಲ ಹಣವನ್ನು ಪಾರಿವಾಳಗಳಿಗೆ  ನೀರಿನ ಕೊರತೆಯಾಗದಂತೆ  ಮಾಡಲು ನಿರ್ಮಿಸಿದ ಅಂಗಡಿಗಳಿಗೆ ವಿನಿಯೋಗಿಸಲಾಗಿದೆ. ಇಂದು ಈ ಅಂಗಡಿಗಳಿಂದ ತಿಂಗಳಿಗೆ 9 ಲಕ್ಷ ರೂ ಆದಾಯ ದೊರೆಯುತ್ತದೆ. ಅದನ್ನು ಸ್ಥಳೀಯವಾಗಿರುವ ಪಾರಿವಾಳಗಳಿಗೆ ನೀರುಣಿಸಲು ವ್ಯಯಿಸಲಾಗುತ್ತದೆ. ಈ ಊರಿನಲ್ಲಿರುವ ಎಲ್ಲ ಅಂಗಡಿಗಳೂ ಪಾರಿವಾಳಗಳಿಗೆ ನೀರುಣಿಸುವ ಕಾರ್ಯವನ್ನು ಮಾಡುತ್ತವೆ ಎಂದು ಮಾಹಿತಿ ನೀಡಿದ್ದಾರೆ. ಹೀಗಾಗಿ ಜಸನಗರದ ಪಾರಿವಾಳಗಳು ಕೋಟ್ಯಾಂತರ ರೂ ಆಸ್ತಿಯನ್ನು ಹೊಂದಿವೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ:

ಸಖತ್​ ಸ್ಟೆಪ್​ ಮೂಲಕ ಮದುವೆ ಮನೆಗೆ ಆಗಮಿಸಿದ ವಧು: ವಿಡಿಯೋ ವೈರಲ್​

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ