Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮನೆಗೆ ಬಂತು ಒಂಟೆ ಗಾಡಿಯ ಲೈಬ್ರರಿ; 1,500ಕ್ಕೂ ಹೆಚ್ಚಿನ ಪುಸ್ತಕಗಳನ್ನು ನೋಡಿ ರಾಜಸ್ಥಾನದ ಮಕ್ಕಳೆಲ್ಲಾ ಫುಲ್ ಖುಷ್

ಮಕ್ಕಳಿಗೆ ಆಕರ್ಷಣೆಯಾಗಿ ಕಾಣುವಂತೆ ಒಂಟೆ ಗಾಡಿಯ ಸುಲ್ಲಲೂ ಬಣ್ಣ ಬಣ್ಣದ ಬಲೂನುಗಳನ್ನು ಕಟ್ಟಿ ಅಲಂಕಾರ ಮಾಡಲಾಗಿದೆ. 1500 ಕ್ಕೂ ಹೆಚ್ಚು ಪುಸ್ತಕಗಳನ್ನು ಹೊತ್ತ ಒಂಟೆ ಗಾಡಿ ಹಳ್ಳಿ ಹಳ್ಳಿಯ ಮನೆಗಳ ಬಾಗಿಲಿಗೆ ತಲುಪುತ್ತದೆ.

ಮನೆ ಮನೆಗೆ ಬಂತು ಒಂಟೆ ಗಾಡಿಯ ಲೈಬ್ರರಿ; 1,500ಕ್ಕೂ ಹೆಚ್ಚಿನ ಪುಸ್ತಕಗಳನ್ನು ನೋಡಿ ರಾಜಸ್ಥಾನದ ಮಕ್ಕಳೆಲ್ಲಾ ಫುಲ್ ಖುಷ್
ಮನೆ ಮನೆಗೆ ಬಂತು ಒಂಟೆ ಗಾಡಿಯ ಲೈಬ್ರರಿ
Follow us
TV9 Web
| Updated By: shruti hegde

Updated on:Sep 03, 2021 | 11:06 AM

ಕೊರೊನಾ ಸಾಂಕ್ರಾಮಿಕದ ಮಧ್ಯೆ ಮಕ್ಕಳ ಶಿಕ್ಷಣಕ್ಕೆ ಯಾವುದೇ ಕೊರತೆ ಆಗಬಾರದೆಂದು ರಾಜಸ್ಥಾನದಲ್ಲಿ ಒಂಟೆ ಗಾಡಿಯ ಲೈಬ್ರರಿ ಆರಂಭಗೊಂಡಿದೆ. ಶಾಲೆಗಳನ್ನು ಮುಚ್ಚಿರುವ ಸಮಯದಲ್ಲಿ ಈ ಗ್ರಂಥಾಲಯವು ರಾಜಸ್ಥಾನದ ಮರುಭೂಮಿ ಪ್ರದೇಶದಲ್ಲಿರುವ ಹಳ್ಳಿ ಹಳ್ಳಿಗೆ ಆಕರ್ಷಣೆಯಾಗಿದೆ. ಮಕ್ಕಳಲ್ಲಿ ಓದುವ ಅಭ್ಯಾಸ ಎಂದೂ ನಿಲ್ಲಬಾರದು ಎಂಬ ಉದ್ದೇಶದಿಂದ ಮನೆ ಬಾಗಿಲಿಗೆ ಈ ಒಂಟೆ ಗಾಡಿಯ ಗ್ರಂಥಾಲಯ ತೆರಳುತ್ತಿದೆ.

ರಾಜ್ಯದ ದೂರದ ಹಳ್ಳಿಗಳಲ್ಲಿರುವ ಮಕ್ಕಳಿಗಾಗಿ ಒಂಟೆ ಗಾಡಿಯ ಗ್ರಂಥಾಲಯವಾದ ವಿಶಿಷ್ಟ ಉಪಕ್ರಮವನ್ನು ಆರಂಭಿಸಲಾಗಿದೆ. ಮಕ್ಕಳಿಗೆ ಆಕರ್ಷಣೆಯಾಗಿ ಕಾಣುವಂತೆ ಒಂಟೆ ಗಾಡಿಯ ಸುಲ್ಲಲೂ ಬಣ್ಣ ಬಣ್ಣದ ಬಲೂನುಗಳನ್ನು ಕಟ್ಟಿ ಅಲಂಕಾರ ಮಾಡಲಾಗಿದೆ. 1500 ಕ್ಕೂ ಹೆಚ್ಚು ಪುಸ್ತಕಗಳನ್ನು ಹೊತ್ತ ಒಂಟೆ ಗಾಡಿ ಹಳ್ಳಿ ಹಳ್ಳಿಯ ಮನೆಗಳ ಬಾಗಿಲಿಗೆ ತಲುಪುತ್ತದೆ.

ಎನ್​ಜಿಒ ರೂಮ್ ಟು ರೀಡ್ ವಿಭಾಗವು ಈ ಉಪಕ್ರಮವನ್ನು ಪ್ರಾರಂಭಿಸಿದೆ. ಆನ್​ಲೈನ್​ ತರಗತಿಗಳು ನಡೆಯುತ್ತಿದ್ದರೂ ಸಹ ಓದುವ ಅಭ್ಯಾಸ ಮಕ್ಕಳಲ್ಲಿ ಬೆಳೆಯಬೇಕು. ಮಕ್ಕಳು ಎಂದಿಗೂ ಓದುವ ಅಭ್ಯಾಸವನ್ನು ನಿಲ್ಲಿಸಬಾರದು ಎಂದು ಶಾಲಾ ಶಿಕ್ಷಣ ಜಂಟಿ ನಿರ್ದೇಶಕ ಪ್ರೇಮ್ ಚಂದ್​ ಸಾಖ್ಲಾ ಮಾಹಿತಿ ಹಂಚಿಕೊಂಡಿದ್ದಾರೆ.

ಇತರರ ವಾಹನಗಳು ದೂರದ ಮರುಭೂಮಿ ಪ್ರದೇಶಗಳನ್ನು ತಲುಪಲು ಸಾಧ್ಯವಾದ ಕಾರಣ ಒಂಟೆ ಗಾಡಿಯನ್ನು ಗ್ರಂಥಾಲಯವಾಗಿ ಸಿದ್ಧಪಡಿಸಲಾಯಿತು. ಇದು ಜೋದ್ಪುರದ 30 ಗ್ರಾಮಗಳನ್ನು ಇದು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ಒಂದು ಒಂಟೆ ಗಾಡಿಯಲ್ಲಿ ಒಬ್ಬ ಸವಾರ, ಇಬ್ಬರು ಎನ್​ಜಿಒ ಸದಸ್ಯರು ಮತ್ತು ಹತ್ತಿರ ಶಾಲೆಯ ಓರ್ವ ಶಿಕ್ಷಕರು ಇರುತ್ತಾರೆ. ಮಕ್ಕಳಿಗೆ ಅವರ ವಯಸ್ಸು ಮತ್ತು ಆಸಕ್ತಿಗೆ ಅನುಗುಣವಾಗಿ ಪುಸ್ತಕಗಳನ್ನು ನೀಡಲಾಗುತ್ತದೆ. ಈ ಪ್ರಯತ್ನದಿಂದ ಮಕ್ಕಳು ಓದುವಂತೆ ಮಾಡುವುದು ಮಾತ್ರವಲ್ಲದೆ ಅವರಲ್ಲಿ ಕಲಿಕೆಯ ಆಸಕ್ತಿಯನ್ನು ಹೆಚ್ಚಿಸುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಪುಸ್ತಕದಲ್ಲಿರುವ ಕಥೆಗಳನ್ನು ಶಿಕ್ಷಕರು, ಎನ್​ಜಿಒ ಸದಸ್ಯರು, ಸ್ಥಳೀಯ ವಿದ್ಯಾವಂತರ ಜತೆಗೆ ಗ್ರಾಮಸ್ಥರು ವಿವರಿಸುತ್ತಾರೆ. ಪುಸ್ಕ ಮಕ್ಕಳಿಗೆ ಇಷ್ಟವಾದರೆ ಆ ಪುಸ್ತಕಗಳನ್ನು ಮಕ್ಕಳಿಗೆ ನೀಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಶಾಲೆಗಳಿಲ್ಲದೆ ಒಂದೂವರೆ ವರ್ಷ ಕಳೆಯಬೇಕಾಯಿತು. ಶಿಕ್ಷಕರೊಂದಿಗೆ ಮತ್ತು ಅಭ್ಯಾಸದೊಂದಿಗೆ ಸಂಪರ್ಕವನ್ನು ಕಾಯ್ದುಕೊಳ್ಳಲು ಇದೊಂದು ಉಪಕ್ರಮವಾಗಿದೆ. ಮಕ್ಕಳೊಂದಿಗೆ ಪಾಲ್ಗೊಳ್ಳಲು ಮತ್ತು ಪ್ರತಿದಿನ 15 ರಿಂದ 20 ನಿಮಿಷಗಳ ಕಾಲ ಓದುವ ಮತ್ತು ಬರೆಯುವ ಅಭ್ಯಾಸ ಇರುವಂತೆ ನೋಡಿಕೊಳ್ಳಲು ಪೋಷಕರಿಗೆ ಹೇಳಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:

Award : ಲೇಖಕಿ ಕಾವ್ಯಾ ಕಡಮೆಗೆ ‘ಛಂದ ಪುಸ್ತಕ ಹಸ್ತಪ್ರತಿ ಪ್ರಶಸ್ತಿ‘

Kargil Vijay Diwas: ಲೆ. ಕರ್ನಲ್ ಅಜಿತ್ ವಿ.ಭಂಡಾರ್ಕರ್ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ

(Rajasthan unique mobile library and camel cart for village kids)

Published On - 11:06 am, Fri, 3 September 21

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್