AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಪದ್ಧತಿಯಂತೆ ಕೋತಿಯ ಅಂತ್ಯಕ್ರಿಯೆ, ರಾಜಸ್ಥಾನದ ಹಳ್ಳಿಯೊಂದರಲ್ಲಿ ನಡೆದ ಘಟನೆ ವೈರಲ್

Hindu Rituals : ‘ಅರೆ ಈಗ ಇದೇನಿದು, ಹೊಸ ಭಾರತವಾ?’ ನೆಟ್ಟಿಗರೊಬ್ಬರ ಪ್ರಶ್ನೆಗೆ, ‘ಹಳೆಯ ಭಾರತದಲ್ಲಿ ಕುರಿಯನ್ನು ಗೌರವದಿಂದ ಕಾಣುತ್ತಿದ್ದರು’ ಎಂದು ಪ್ರತಿಯಾಗಿ ಟ್ವೀಟಿಸಿದ್ದಾರೆ ಇನ್ನೊಬ್ಬರು. ನಿಮ್ಮ ಅಭಿಪ್ರಾಯವೇನು ಈ ವಿಷಯವಾಗಿ?

ಹಿಂದೂ ಪದ್ಧತಿಯಂತೆ ಕೋತಿಯ ಅಂತ್ಯಕ್ರಿಯೆ, ರಾಜಸ್ಥಾನದ ಹಳ್ಳಿಯೊಂದರಲ್ಲಿ ನಡೆದ ಘಟನೆ ವೈರಲ್
Rajasthan Village Holds Funeral Procession For Beloved Monkey Cremate Him As Per Hindu Rituals
TV9 Web
| Edited By: ಶ್ರೀದೇವಿ ಕಳಸದ|

Updated on:Oct 18, 2022 | 3:15 PM

Share

Viral Video : ಪ್ರಾಣಿಪ್ರಿಯರು ಸಾಕುಪ್ರಾಣಿಗಳನ್ನು ಮನೆಯ ಸದಸ್ಯರಂತೆಯೇ ಕಾಣುತ್ತಾರೆ ಎನ್ನುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಪುರಾವೆಗಳಿವೆ. ಪ್ರಾಣಿಗಳಿಗೆಂದೇ ಪ್ರತ್ಯೇಕ ಪುಟವನ್ನು ಸೃಷ್ಟಿಸಿ ಅವುಗಳ ಚಟುವಟಿಕೆಗಳನ್ನು ಅಪ್​ಡೇಟ್​ ಮಾಡುವುದನ್ನು ನಿತ್ಯವೂ ನೋಡುತ್ತೇವೆ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಕೋತಿಯೊಂದರ ಅಂತ್ಯಸಂಸ್ಕಾರವನ್ನು ಹಿಂದೂ ಪದ್ಧತಿಯಂತೆ ನೆರವೇರಿಸಿರುವುದು ಕಂಡುಬರುತ್ತದೆ. ಶನಿವಾರದಂದು ಅಕಸ್ಮಾತ್ ಆಗಿ ಕರೆಂಟ್​ ತಗುಲಿ ಮೃತಪಟ್ಟ ಈ ಕೋತಿಯನ್ನು ಹಳ್ಳಿಗರು ಮನುಷ್ಯ ಸಮಾನ ಗೌರವ ಸಲ್ಲಿಸಿ ಅದರ ಅಂತಿಮಯಾತ್ರೆಯನ್ನು ಸಂಪನ್ನಗೊಳಿಸಿದ್ದಾರೆ.

ನಿತ್ಯವೂ ಒಡನಾಡುವ ಕೋತಿಯು ಹೀಗೆ ಆಕಸ್ಮಿಕ ಅವಘಡದಿಂದ ಸಾವನ್ನಪ್ಪಿದಾಗ ರಾಜಸ್ಥಾನದ ಅಳ್ವರ್ ಗ್ರಾಮಸ್ಥರಿಗೆ ದುಃಖವಾಗಿದೆ. ಆಗ ಕೋತಿಯ ಶವವನ್ನು ಹೂ ಮತ್ತು ಗುಲಾಲಿನಿಂದ ಅಲಂಕರಿಸಿ, ಅದನ್ನು ಹೊತ್ತೊಯ್ಯುವ ಗಾಡಿಯನ್ನೂ ಹೂ, ಬಲೂನುಗಳಿಂದ ಚೆಂದಗೊಳಿಸಿ, ಬಾಜಾ ಭಜಂತ್ರಿಯೊಂದಿಗೆ ಹಳ್ಳಿಯ ತುಂಬಾ ಮೆರವಣಿಗೆ ಮಾಡಿ ಹಿಂದೂ ಪದ್ಧತಿಯ ಪ್ರಕಾರ ಅದರ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದಾರೆ.

ಟ್ವಿಟರ್​ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಕೆಲ ಹಳ್ಳಿಗರು ಈ ಅಂತಿಮಯಾತ್ರೆಯಲ್ಲಿ ಪಾಲ್ಗೊಂಡಿರುವುದನ್ನು ಕಾಣಬಹುದಾಗಿದೆ. ಭಾರತದಲ್ಲಿ ಕೆಲವೆಡೆ ಕೋತಿಯನ್ನು ಹನುಮಂತನ ಅಪರಾವತಾರ ಎಂದು ಪೂಜಿಸುವುದು ಚಾಲ್ತಿಯಲ್ಲಿದೆ ಎನ್ನುವುದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬಹುದು.

ನೆಟ್ಟಿಗರು ಈ ವಿಡಿಯೋ ಕುರಿತು ಮಿಶ್ರಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ‘ಅರೆ ಈಗ ಇದೇನಿದು? ಹೊಸ ಭಾರತವಾ’ ಎಂದು ಒಬ್ಬರು ಟೀಕಿಸಿದ್ದಾರೆ. ‘ಹಳೆಯ ಭಾರತದಲ್ಲಿ ಕುರಿಯನ್ನು ಗೌರವದಿಂದ ಕಾಣುತ್ತಿದ್ದರು’ ಎಂದು ಮತ್ತೊಬ್ಬರು ಈ ಟ್ವೀಟ್​ಗೆ ಪ್ರತಿಯಾಗಿ ಪ್ರತಿಕ್ರಿಯಿಸಿದ್ದಾರೆ.

ಹೀಗೆ ಕೋತಿಯನ್ನು ಅಂತ್ಯಸಂಸ್ಕಾರ ಮಾಡಿದ್ದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ  

Published On - 3:10 pm, Tue, 18 October 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು