AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1500 ಕೋಟಿ ರೂ. ಆಸ್ತಿ…ಕತ್ತಲೆಯಲ್ಲಿ ಅಣ್ಣ ಸಹಿ ಹಾಕಿಸಿದ ಎಂದ ತಂಗಿ

ಗುಜರಾತಿನ ಮಾಜಿ ಹಣಕಾಸು ಸಚಿವ ಮತ್ತು ಮಾಜಿ ರಾಜಕೋಟ್ ರಾಜಕುಮಾರ ಮನೋಹರ್ ಜಡೇಜಾ ಅವರ ಮರಣದ ನಂತರ, ಅವರ ಒಡಹುಟ್ಟಿದವರ ನಡುವೆ ಆಸ್ತಿಗೆ ಸಂಬಂಧಿಸಿದಂತೆ ವಿವಾದ ಏರ್ಪಟ್ಟಿದೆ.

1500 ಕೋಟಿ ರೂ. ಆಸ್ತಿ...ಕತ್ತಲೆಯಲ್ಲಿ ಅಣ್ಣ ಸಹಿ ಹಾಕಿಸಿದ ಎಂದ ತಂಗಿ
Rajkot Royal Family
TV9 Web
| Edited By: |

Updated on: Aug 25, 2021 | 8:23 PM

Share

ರಾಜಮನೆತನ ಎಂದರೇನೇ ಘನತೆ ಗಾಂಭೀರ್ಯತೆಯಿಂದ ಕೂಡಿರುತ್ತದೆ. ಅವರ ಬದುಕು ಕೂಡ ಸಖತ್ ರಾಯಲ್ ಆಗಿರುವುದರಿಂದ ರಾಯಲ್ ಫ್ಯಾಮಿಲಿ ಎನ್ನಲಾಗುತ್ತದೆ. ಆದರೆ ಗುಜರಾತ್​ನ ಈ ರಾಜ ಕುಟುಂಬ ಸಖತ್ ಸುದ್ದಿಯಾಗಿದ್ದು ಆಸ್ತಿ ವಿವಾದದಿಂದ. ಅದರಲ್ಲೂ ಅಣ್ಣನ ವಿರುದ್ದ ತಂಗಿ ಮಾಡಿದ ಆರೋಪದಿಂದ ಎಂಬುದು ವಿಶೇಷ. ಹೌದು, ಗುಜರಾತಿನ ರಾಜ್​ಕೋಟ್​ನ ರಾಜಮನೆತನದಲ್ಲೀಗ (Rajkot Royal Family) ಆಸ್ತಿ ವಿವಾದ ಏರ್ಪಟ್ಟಿದೆ. ಈ ವಿಚಾರ ಕೋರ್ಟ್ ಮೆಟ್ಟಿಲೇರಿದೆ. ಆದರೆ ಈ ವಿವಾದದ ವೇಳೆ ರಾಜಕುಮಾರಿ ಅಂಬಾಲಿಕಾ ದೇವಿ ನೀಡಿದ ಹೇಳಿಕೆಯೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಅದೇನೆಂದರೆ…ಅಣ್ಣ ತನ್ನನ್ನು ಕತ್ತಲೆಯಲ್ಲಿಟ್ಟು ಸಹಿ ಹಾಕಿಸಿಕೊಂಡ. ತನಗೆ ಅಪ್ಪನ ಆಸ್ತಿಯಲ್ಲಿ ಏನೂ ಬೇಡ ಎಂದು ಬರೆಯುವಂತೆ ಮಾಡಿದ್ದ ಎಂದು ಮಹಾರಾಜರ ಮಗಳು ಹೇಳಿದ್ದಾರೆ. ಅದು ಕೂಡ 1500 ಕೋಟಿ ಆಸ್ತಿ ವಿಚಾರದಲ್ಲಿ ಎಂಬುದು ಮತ್ತೊಂದು ವಿಶೇಷ.

ಹೌದು, ರಾಜ್​ಕೋಟ್​ನ ರಾಜಮನೆತನದ ರಾಜ ಮಾಂಧಾತ ಸಿಂಗ್ ಜಡೇಜಾ ಅವರೀಗ ಆಸ್ತಿ ಹಂಚಿಕೆ ವಿಚಾರದಲ್ಲಿ ಕಾನೂನು ಹೋರಾಟ ಎದುರಿಸುತ್ತಿದ್ದಾರೆ. ಹೀಗೆ ಆಸ್ತಿ ವಿಚಾರದಲ್ಲಿ ಕೋರ್ಟ್​ ಮೆಟ್ಟಿಲೇರಿರುವುದು ಸಹೋದರಿ/ರಾಜಕುಮಾರಿ ಅಂಬಾಲಿಕಾ ದೇವಿ. ಆಸ್ತಿ ಕಬಳಿಕೆ ವಿಚಾರದಲ್ಲಿ ಇದೀಗ ಉಪವಿಭಾಗದ ನ್ಯಾಯಾಲಯ ನೀಡಿದ ತೀರ್ಪು ಅಂಬಾಲಿಕಾ ಪರವಾಗಿದೆ. ಅದರಂತೆ ಕುಟುಂಬದಲ್ಲಿನ 1500 ಕೋಟಿಗಳ ಚರ ಮತ್ತು ಸ್ಥಿರ ಆಸ್ತಿ ವಿಭಜನೆಯಾಗುವ ಸಾಧ್ಯತೆಯಿದೆ.

ಪೂರ್ವಜರ ಆಸ್ತಿಯ ಹಂಚಿಕೆಯ ವಿಚಾರದಲ್ಲಿ ಅಣ್ಣ ನನಗೆ ಮೋಸ ಮಾಡಿದ್ದಾರೆ. ಅವರು ತನ್ನನ್ನು ಕತ್ತಲೆಯಲ್ಲಿಟ್ಟು ಸಹಿ ಹಾಕಿಸಿಕೊಂಡಿದ್ದರು. ತನಗೆ ಅಪ್ಪನ ಆಸ್ತಿಯಲ್ಲಿ ಏನೂ ಬೇಡ ಎಂದು ಬರೆಯುವಂತೆ ಮಾಡಿದ್ದರು ಎಂದು ರಾಜಕುಮಾರಿ ಪ್ರಕರಣ ದಾಖಲಿಸಿದ್ದರು. ಇದಕ್ಕೆ ಅಂಬಾಲಿಕಾ ನ್ಯಾಯಾಲಕ್ಕೆ ಸಾಕ್ಷ್ಯ ಒದಗಿಸಿದ್ದು, ಅದರಂತೆ ಕೋರ್ಟ್ ರಾಜಕುಮಾರಿ ಪರವಾಗಿ​ ತೀರ್ಪು ನೀಡಿದೆ.

ಇತ್ತ ಸಹೋದರಿಯ ಆರೋಪವನ್ನು ತಳ್ಳಿಹಾಕಿರುವ ರಾಜ ಮಾಧಾಂತ ಸಿಂಗ್, ಉಪವಿಭಾಗೀಯ ನ್ಯಾಯಾಲಯದ ಆದೇಶವನ್ನು ಕಲೆಕ್ಟರ್​ ಮುಂದೆ ಪ್ರಶ್ನಿಸಲು ನಿರ್ಧರಿಸಿದ್ದಾರೆ. ಪ್ರಾಂತೀಯ ಅಧಿಕಾರಿಯು ನೀಡಿದ ತೀರ್ಪಿನ ವಿರುದ್ಧ 60 ದಿನಗಳೊಳಗೆ ಕಲೆಕ್ಟರ್ ಮುಂದೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದು ರಾಜ ಕುಟುಂಬದ ಕಾನೂನು ಸಲಹೆಗಾರ ತಿಳಿಸಿದ್ದಾರೆ. ಇದಕ್ಕಾಗಿ ಮಧಾಂತ ಸಿಂಗ್​ ಅವರು ಸಿದ್ಧತೆಗಳನ್ನು ಆರಂಭಿಸಿದ್ದಾರೆ.

ರಾಜಕೀಯ-ರಾಜಕುಟುಂಬ: ಗುಜರಾತಿನ ಮಾಜಿ ಹಣಕಾಸು ಸಚಿವ ಮತ್ತು ಮಾಜಿ ರಾಜಕೋಟ್ ರಾಜಕುಮಾರ ಮನೋಹರ್ ಜಡೇಜಾ ಅವರ ಮರಣದ ನಂತರ, ಅವರ ಒಡಹುಟ್ಟಿದವರ ನಡುವೆ ಆಸ್ತಿಗೆ ಸಂಬಂಧಿಸಿದಂತೆ ವಿವಾದ ಏರ್ಪಟ್ಟಿದೆ. ರಾಜ ಮಾಂಧಾತ ಸಿಂಗ್ ತನ್ನ ಸಹೋದರನ ಆಸೆಯಂತೆ ತನ್ನ ಸಹೋದರಿ ಅಂಬಾಲಿಕಾ ದೇವಿಗೆ 1.5 ಕೋಟಿ ರೂಪಾಯಿಗಳನ್ನು ನೀಡಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ ರಾಣಿ ಅಂಬಾಲಿಕಾ ದೇವಿ ತನ್ನ ತಾಯಿ ಹಾಗೂ ಇಬ್ಬರು ಸಹೋದರಿಯರು ಸೇರಿದಂತೆ ನಾಲ್ಕು ಜನರ ವಿರುದ್ಧ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ರಾಜಮನೆತನ ಆಸ್ತಿ ವಿವಾದ ಭಾರೀ ಚರ್ಚೆಗೆ ಕಾರಣವಾಗಿದ್ದು, ಮೊದಲ ತೀರ್ಪು ಅಂಬಾಲಿಕಾ ದೇವಿ ಪರವಾಗಿ ಬಂದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ರಾಜಕುಮಾರಿ  ವಿರುದ್ಧ ರಾಜ ಕುಟುಂಬ ಯಾವ ರೀತಿಯ ಕಾನೂನು ಹೋರಾಟ ಕೈಗೊಳ್ಳಲಿದೆ ಎಂಬುದು ಸ್ಥಳೀಯರ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಹಾಕಬೇಕಿಲ್ಲ, ಚಾರ್ಜ್​ ಕೂಡ ಮಾಡಬೇಕಿಲ್ಲ: ಇದು ಮಾರುತಿ ಸುಜುಕಿ ಹೊಸ ಕಾರು

ಇದನ್ನೂ ಓದಿ: Video: ಒಂದೇ ಒಂದು ಬೌನ್ಸರ್ ಎಸೆದು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದ!

ಇದನ್ನೂ ಓದಿ: Crime News: ಅಶ್ಲೀಲ ವೀಡಿಯೋ ಕಳುಹಿಸುತ್ತಿದ್ದ ಆಂಟಿ ಅರೆಸ್ಟ್..!

(Rajkot Royal Family Fight Over Property)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ