Raksha Bandhan 2024 : ಇಲ್ಲಿ ರಕ್ತ ಸಂಬಂಧಕ್ಕೆ ಬೆಲೆಯಿಲ್ಲ ಅಣ್ಣನೊಂದಿಗೆ ತಂಗಿಯ ಮದುವೆ , ಏನಿದು ವಿಚಿತ್ರ ಸಂಪ್ರದಾಯ?

ಅಣ್ಣ ತಂಗಿಯರ ಬಂಧವೇ ಹಾಗೆ, ತಂದೆಯ ನಂತರ ಹೆಣ್ಣಿಗೆ ಅಣ್ಣನೇ ತಂದೆಯ ಸ್ಥಾನದಲ್ಲಿ ನಿಲ್ಲುತ್ತಾನೆ. ಹೀಗಾಗಿ ಸಹೋದರ ಸಹೋದರಿಯರ ನಡುವಿನ ಸಂಬಂಧವು ತುಂಬಾ ಪವಿತ್ರವಾದದ್ದು ಎಂದು ಭಾವಿಸಲಾಗುತ್ತದೆ. ಆದರೆ ಇಲ್ಲೊಂದು ಕಡೆಯಲ್ಲಿ ರಕ್ತ ಸಂಬಂಧಕ್ಕೆ ಬೆಲೆ ನೀಡದೇ ಅಣ್ಣನೊಂದಿಗೆ ತಂಗಿಯನ್ನೇ ಮದುವೆ ಮಾಡುವ ವಿಚಿತ್ರವಾದ ಸಂಪ್ರದಾಯವಿದೆ. ಇಲ್ಲಿನ ಜನರರು ಇವತ್ತಿಗೂ ಇದನ್ನು ಅನುಸರಿಸಿಕೊಂಡು ಬರುತ್ತಿದ್ದಾರೆ.

Raksha Bandhan 2024 : ಇಲ್ಲಿ ರಕ್ತ ಸಂಬಂಧಕ್ಕೆ ಬೆಲೆಯಿಲ್ಲ ಅಣ್ಣನೊಂದಿಗೆ ತಂಗಿಯ ಮದುವೆ , ಏನಿದು ವಿಚಿತ್ರ ಸಂಪ್ರದಾಯ?
Follow us
| Updated By: ಅಕ್ಷತಾ ವರ್ಕಾಡಿ

Updated on:Aug 18, 2024 | 11:39 AM

ಅಣ್ಣ ತಂಗಿಯರ ಈ ಬಂಧ ಜನುಮ ಜನುಮದ ಅನುಬಂಧ ಎನ್ನುವ ಹಾಡನ್ನು ಕೇಳಿರಬಹುದು. ಸೋದರ ಸೋದರಿಕೆಯ ಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಹೀಗಾಗಿ ಭಾರತೀಯರು ಸಹೋದರತ್ವದ ಬಂಧಕ್ಕೆ ವಿಶಿಷ್ಟವಾದ ಸ್ಥಾನಮಾನವನ್ನು ನೀಡಿದ್ದಾರೆ. ಆದರೆ ಭಾರತದ ಈ ಬುಡಕಟ್ಟು ಜನಾಂಗದಲ್ಲಿ ಸಹೋದರಿಯನ್ನೇ ಮದುವೆ ಆಗುವ ವಿಚಿತ್ರ ಸಂಪ್ರದಾಯವಿದೆ.

ಈ ಬುಡಕಟ್ಟಿನಲ್ಲಿ ಒಡಹುಟ್ಟಿದವರು ವಯಸ್ಸಿಗೆ ಬಂದ ನಂತರದಲ್ಲಿ ಗಂಡ ಹೆಂಡತಿಯಾಗುತ್ತಾರೆ. ಛತ್ತೀಸ್‌ಗಢದಲ್ಲಿ ಬಾಸ್ಟರ್ ಪ್ರಾಂತ್ಯದಲ್ಲಿ ಧುರ್ವಾ ಎಂಬ ಬುಡಕಟ್ಟು ಜನಾಂಗದವರು ಈ ಸಂಪ್ರದಾಯವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈ ಬುಡಕಟ್ಟು ಜನಾಂಗದವರು ತಮ್ಮದೇ ಅದ ಆಚಾರ ವಿಚಾರ, ವಿಚಿತ್ರ ಪದ್ಧತಿಯಿಂದಲೇ ಗಮನ ಸೆಳೆದಿದ್ದಾರೆ. ಈ ಬುಡಕಟ್ಟು ಜನಾಂಗದಲ್ಲಿ ಹೆತ್ತವರೇ ತಮ್ಮ ಇಬ್ಬರು ಮಕ್ಕಳಾದ ಅಣ್ಣ ತಂಗಿಯರಿಗೆ ಮದುವೆ ಮಾಡುತ್ತಾರೆ..

ಮಗಳನ್ನು ಮಗನಿಗೆ ಮದುವೆ ಮಾಡುವ ಪದ್ಧತಿ ಈ ಗ್ರಾಮದಲ್ಲಿ ಹಲವು ವರ್ಷಗಳಿಂದಲೇ ನಡೆಯುತ್ತಿದೆ. ಇದಕ್ಕೆ ಕಾರಣ ಈ ಧುರ್ವಾ ಬುಡಕಟ್ಟು ಜನರು ರಕ್ತ ಸಂಬಂಧಗಳ ಬಗ್ಗೆ ನಂಬಿಕೆಯನ್ನು ಇಟ್ಟಿಲ್ಲ. ಇದೇ ಕಾರಣದಿಂದಾಗಿ ಈ ಬುಡಕಟ್ಟಿನ ಜನರು ಮಗಳನ್ನೇ ಮಗನಿಗೆ ಧಾರೆಯೆರೆದು ಕೊಡುತ್ತಾರೆ.

ಇದನ್ನೂ ಓದಿ: 6 ತಿಂಗಳ ಬಳಿಕ ಕೋಮಾದಿಂದ ಎದ್ದ ಯುವಕ; ಆಸ್ಪತ್ರೆ ಬಿಲ್ ನೋಡಿ ಮತ್ತೆ ಪ್ರಜ್ಞೆ ತಪ್ಪೋದೊಂದು ಬಾಕಿ!

ಒಂದು ವೇಳೆ ಮಕ್ಕಳು ಈ ಮದುವೆಯನ್ನು ನಿರಾಕರಿಸಿದರೆ ಅವರಿಗೆ ಭಾರಿ ದಂಡವನ್ನು ವಿಧಿಸಲಾಗುತ್ತದೆಯಂತೆ. ಈ ಬುಡಕಟ್ಟು ತಮ್ಮ ತಮ್ಮ ಮಕ್ಕಳಿಗೆ ಮದುವೆ ಮಾಡಿಸಿಕೊಂಡು ಮನೆಯಲ್ಲಿ ಇರಿಸಿಕೊಳ್ಳುತ್ತಾರೆ. ಧುರ್ವಾ ಬುಡಕಟ್ಟಿನಲ್ಲಿ ಕಡಿಮೆ ಜನಸಂಖ್ಯೆಯ ಕಡಿಮೆಯಿರುವುದೇ ಈ ಪದ್ಧತಿಯನ್ನು ಅನುಸರಿಸಿಕೊಂಡು ಬರುವುದು ಎನ್ನಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:39 am, Sun, 18 August 24

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್