AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ

ಪ್ರತಿಯೊಬ್ಬ ಗಂಡು ಕೂಡಾ ತನ್ನ ಹೆಂಡತಿ ಸುಂದರವಾಗಿರಬೇಕು ಎಂದು ಬಯಸುತ್ತಾನೆ. ಆದ್ರೆ ಇಲ್ಲೊಂದು ಅದಕ್ಕೆ ತದ್ವಿರುದ್ಧವಾದ ಘಟನೆ ನಡೆದಿದ್ದು, ಪತ್ನಿ ನೋಡಲು ತುಂಬಾ ಸುಂದರವಾಗಿದ್ದಾಳೆ ಎಂಬ ಕಾರಣಕ್ಕೆ ಪತಿರಾಯ ತನ್ನ ಸ್ನೇಹಿತರ ಜೊತೆ ಸೇರಿ ಆಕೆಯ ಕಥೆಯನ್ನೇ ಮುಗಿಸಿದ್ದಾನೆ.

Viral: ಮುಳುವಾದ ಸೌಂದರ್ಯ... ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
ವೈರಲ್​
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 16, 2024 | 11:17 AM

Share

ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಅಂತಾರೆ. ಆದ್ರೆ ಕೆಲವು ಜಗಳಗಳು ವಿಚ್ಛೇದನದವರೆಗೂ ಹೋದ್ರೆ, ಇನ್ನೂ ಕೆಲವು ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಅದು ಕೊಲೆಯಲ್ಲಿ ಅಂತ್ಯಗೊಂಡ ಉದಾಹರಣೆಯೂ ಇವೆ. ಇದೀಗ ಇಲ್ಲೊಂದು ಅಂತಹದ್ದೇ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದ್ದು, ದಿನದಿಂದ ದಿನಕ್ಕೆ ಪತ್ನಿಯ ಸೌಂದರ್ಯ ಹೆಚ್ಚಾಗುತ್ತಿದೆ ಎಂಬ ಕಾರಣಕ್ಕೆ ಪತಿರಾಯ ತನ್ನ ಸ್ನೇಹಿತರ ಜೊತೆ ಸೇರಿ ಆಕೆಯ ಕಥೆಯನ್ನೇ ಮುಗಿಸಿದ್ದಾನೆ.

ಪ್ರತಿಯೊಬ್ಬ ಗಂಡು ಕೂಡಾ ತನ್ನ ಪತ್ನಿ ಸುಂದರವಾಗಿರಬೇಕು ಎಂದು ಬಯಸುತ್ತಾನೆ. ಆದ್ರೆ ರಾಮನಗರದ ಮಾಗಡಿಯಲ್ಲಿ ಇದಕ್ಕೆ ತದ್ವಿರುದ್ಧವಾದ ಆಘಾತಕಾರಿ ಘಟನೆಯೊಂದು ನಡೆದಿದ್ದು, ಹೆಂಡತಿಯ ಸೌಂದರ್ಯವನ್ನು ಸಹಿಸಲಾರದೆ ಗಂಡ ಆಕೆಯ ಕಥೆಯನ್ನೇ ಮುಗಿಸಿದ್ದಾನೆ.

ಇಲ್ಲಿನ ದಿವ್ಯಾ ಎಂಬ ಮಹಿಳೆ ಉಮೇಶ್ ಎಂಬವನನ್ನು ಮದುವೆಯಾಗಿರುತ್ತಾಳೆ. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ನಂತರದಲ್ಲಿ ಆಕೆ ಸುಂದರವಾಗಿ ಕಾಣಲು ಲಿಪ್ಸ್ಟಿಕ್ ಹಚ್ಚುತ್ತಾಳೆ, ಟ್ಯಾಟೂ ಹಾಕಿಸಿಕೊಳ್ಳುತ್ತಾಳೆ ಎಂಬ ಕಾರಣಕ್ಕೆ ಉಮೇಶ ಪದೇ ಪದೇ ಜಗಳವಾಡುತ್ತಿದ್ದ. ಆಕೆಯ ಮೇಲೆ ಅನುಮಾನ ಪಡುತ್ತಿದ್ದ. ಇದರಿಂದ ಬೇಸತ್ತ ದಿವ್ಯಾ ಕೆಲ ದಿನಗಳ ಹಿಂದೆ ಮಾಗಡಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಳು. ಈ ಪ್ರಕರಣದಲ್ಲಿ ಇಬ್ಬರೂ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಹಾಜರಾಗಿದ್ದರು. ಅಲ್ಲಿ ಡಿವೋರ್ಸ್ ಏನೂ ಬೇಡ ಇನ್ನು ಮುಂದೆ ಅನುಮಾನ ಪಡುವುದಿಲ್ಲ, ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ದಿವ್ಯಾಗೆ ಉಮೇಶ್ ಭರವಸೆ ನೀಡಿದ್ದಾನೆ. ಗಂಡ ಬದಲಾಗಿದ್ದಾನೆ ಎಂದುಕೊಂಡ ದಿವ್ಯಾ ಅವನ ಮಾತನ್ನು ನಂಬಿದಳು. ಹೀಗೆ ಆಕೆಯನ್ನು ನಂಬಿಸಿ ದೇವಸ್ಥಾನಕ್ಕೆ ಹೋಗೋಣ ಬಾ ಎಂದು ಹೇಳಿ ಜಿಲ್ಲೆಯ ಊಜಗಲ್ಲು ಬೆಟ್ಟಕ್ಕೆ ಕರೆದುಕೊಂಡು ಹೋಗಿ ಉಮೇಶ್ ತನ್ನ ಸ್ನೇಹಿತರೊಂದಿಗೆ ಸೇರಿ ದಿವ್ಯಾಳನ್ನು ಕೊಲೆಗೈದಿದ್ದಾನೆ. ಬಳಿಕ ಮೃತದೇಹವನ್ನು ಚೀಲೂರು ಅರಣ್ಯ ಪ್ರದೇಶದಲ್ಲಿ ಎಸೆದು ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ: ಈ ಪುಟ್ಟ ಪೋರನ ಪ್ರಕಾರ ಚಂದ್ರನಿಗಿಂತ ದೆಹಲಿಯೇ ಬಲು ದೂರವಂತೆ, ಅದು ಹೇಗೆಂದು ಅವನ ಮಾತಲ್ಲೇ ಕೇಳಿ

ಪೊಲೀಸರು ಈಗಾಗಲೇ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ತಲೆ ಮರೆಸಿಕೊಂಡಿರುವ ಪತಿ ಉಮೇಶ್ ಸೇರಿ ಮತ್ತೋರ್ವ ಆರೋಪಿಗಾಗಿ ಪೊಲೀರು ತಲಾಶ್ ನಡೆಸಿದ್ದಾರೆ. ಘಟನೆ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ