AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ

ಪ್ರತಿಯೊಬ್ಬ ಗಂಡು ಕೂಡಾ ತನ್ನ ಹೆಂಡತಿ ಸುಂದರವಾಗಿರಬೇಕು ಎಂದು ಬಯಸುತ್ತಾನೆ. ಆದ್ರೆ ಇಲ್ಲೊಂದು ಅದಕ್ಕೆ ತದ್ವಿರುದ್ಧವಾದ ಘಟನೆ ನಡೆದಿದ್ದು, ಪತ್ನಿ ನೋಡಲು ತುಂಬಾ ಸುಂದರವಾಗಿದ್ದಾಳೆ ಎಂಬ ಕಾರಣಕ್ಕೆ ಪತಿರಾಯ ತನ್ನ ಸ್ನೇಹಿತರ ಜೊತೆ ಸೇರಿ ಆಕೆಯ ಕಥೆಯನ್ನೇ ಮುಗಿಸಿದ್ದಾನೆ.

Viral: ಮುಳುವಾದ ಸೌಂದರ್ಯ... ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
ವೈರಲ್​
ಮಾಲಾಶ್ರೀ ಅಂಚನ್​
| Edited By: |

Updated on: Aug 16, 2024 | 11:17 AM

Share

ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಅಂತಾರೆ. ಆದ್ರೆ ಕೆಲವು ಜಗಳಗಳು ವಿಚ್ಛೇದನದವರೆಗೂ ಹೋದ್ರೆ, ಇನ್ನೂ ಕೆಲವು ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಅದು ಕೊಲೆಯಲ್ಲಿ ಅಂತ್ಯಗೊಂಡ ಉದಾಹರಣೆಯೂ ಇವೆ. ಇದೀಗ ಇಲ್ಲೊಂದು ಅಂತಹದ್ದೇ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದ್ದು, ದಿನದಿಂದ ದಿನಕ್ಕೆ ಪತ್ನಿಯ ಸೌಂದರ್ಯ ಹೆಚ್ಚಾಗುತ್ತಿದೆ ಎಂಬ ಕಾರಣಕ್ಕೆ ಪತಿರಾಯ ತನ್ನ ಸ್ನೇಹಿತರ ಜೊತೆ ಸೇರಿ ಆಕೆಯ ಕಥೆಯನ್ನೇ ಮುಗಿಸಿದ್ದಾನೆ.

ಪ್ರತಿಯೊಬ್ಬ ಗಂಡು ಕೂಡಾ ತನ್ನ ಪತ್ನಿ ಸುಂದರವಾಗಿರಬೇಕು ಎಂದು ಬಯಸುತ್ತಾನೆ. ಆದ್ರೆ ರಾಮನಗರದ ಮಾಗಡಿಯಲ್ಲಿ ಇದಕ್ಕೆ ತದ್ವಿರುದ್ಧವಾದ ಆಘಾತಕಾರಿ ಘಟನೆಯೊಂದು ನಡೆದಿದ್ದು, ಹೆಂಡತಿಯ ಸೌಂದರ್ಯವನ್ನು ಸಹಿಸಲಾರದೆ ಗಂಡ ಆಕೆಯ ಕಥೆಯನ್ನೇ ಮುಗಿಸಿದ್ದಾನೆ.

ಇಲ್ಲಿನ ದಿವ್ಯಾ ಎಂಬ ಮಹಿಳೆ ಉಮೇಶ್ ಎಂಬವನನ್ನು ಮದುವೆಯಾಗಿರುತ್ತಾಳೆ. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ನಂತರದಲ್ಲಿ ಆಕೆ ಸುಂದರವಾಗಿ ಕಾಣಲು ಲಿಪ್ಸ್ಟಿಕ್ ಹಚ್ಚುತ್ತಾಳೆ, ಟ್ಯಾಟೂ ಹಾಕಿಸಿಕೊಳ್ಳುತ್ತಾಳೆ ಎಂಬ ಕಾರಣಕ್ಕೆ ಉಮೇಶ ಪದೇ ಪದೇ ಜಗಳವಾಡುತ್ತಿದ್ದ. ಆಕೆಯ ಮೇಲೆ ಅನುಮಾನ ಪಡುತ್ತಿದ್ದ. ಇದರಿಂದ ಬೇಸತ್ತ ದಿವ್ಯಾ ಕೆಲ ದಿನಗಳ ಹಿಂದೆ ಮಾಗಡಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಳು. ಈ ಪ್ರಕರಣದಲ್ಲಿ ಇಬ್ಬರೂ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಹಾಜರಾಗಿದ್ದರು. ಅಲ್ಲಿ ಡಿವೋರ್ಸ್ ಏನೂ ಬೇಡ ಇನ್ನು ಮುಂದೆ ಅನುಮಾನ ಪಡುವುದಿಲ್ಲ, ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ದಿವ್ಯಾಗೆ ಉಮೇಶ್ ಭರವಸೆ ನೀಡಿದ್ದಾನೆ. ಗಂಡ ಬದಲಾಗಿದ್ದಾನೆ ಎಂದುಕೊಂಡ ದಿವ್ಯಾ ಅವನ ಮಾತನ್ನು ನಂಬಿದಳು. ಹೀಗೆ ಆಕೆಯನ್ನು ನಂಬಿಸಿ ದೇವಸ್ಥಾನಕ್ಕೆ ಹೋಗೋಣ ಬಾ ಎಂದು ಹೇಳಿ ಜಿಲ್ಲೆಯ ಊಜಗಲ್ಲು ಬೆಟ್ಟಕ್ಕೆ ಕರೆದುಕೊಂಡು ಹೋಗಿ ಉಮೇಶ್ ತನ್ನ ಸ್ನೇಹಿತರೊಂದಿಗೆ ಸೇರಿ ದಿವ್ಯಾಳನ್ನು ಕೊಲೆಗೈದಿದ್ದಾನೆ. ಬಳಿಕ ಮೃತದೇಹವನ್ನು ಚೀಲೂರು ಅರಣ್ಯ ಪ್ರದೇಶದಲ್ಲಿ ಎಸೆದು ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ: ಈ ಪುಟ್ಟ ಪೋರನ ಪ್ರಕಾರ ಚಂದ್ರನಿಗಿಂತ ದೆಹಲಿಯೇ ಬಲು ದೂರವಂತೆ, ಅದು ಹೇಗೆಂದು ಅವನ ಮಾತಲ್ಲೇ ಕೇಳಿ

ಪೊಲೀಸರು ಈಗಾಗಲೇ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ತಲೆ ಮರೆಸಿಕೊಂಡಿರುವ ಪತಿ ಉಮೇಶ್ ಸೇರಿ ಮತ್ತೋರ್ವ ಆರೋಪಿಗಾಗಿ ಪೊಲೀರು ತಲಾಶ್ ನಡೆಸಿದ್ದಾರೆ. ಘಟನೆ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ