AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್‌ ಪಾರ್ಟಿಯಲ್ಲಿ ರಾಮೇಶ್ವರಂ ಕೆಫೆ ಫುಡ್​

ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್ ಕ್ರೂಸ್ ಪಾರ್ಟಿ ಮೇ 29ರಿಂದ ಜೂ.1ರವರೆಗೆ ಅದ್ಧೂರಿಯಾಗಿ ನಡೆದಿದೆ. ಸುಮಾರು 800 ಅತಿಥಿಗಳನ್ನೊಳಗೊಂಡ ಈ ಕಾರ್ಯಕ್ರಮಕ್ಕೆ ಬೆಂಗಳೂರಿನ ರಾಮೇಶ್ವರಂ ಕೆಫೆ ಆಹಾರ ಪೂರೈಸಿದೆ. ಈ ಕುರಿತು ರಾಮೇಶ್ವರಂ ಕೆಫೆ ಮಾಲೀಕ ರಾಘವೇಂದ್ರ ರಾವ್ ಸಾಮಾಜಿಕ ಮಾಧ್ಯಮದಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್‌ ಪಾರ್ಟಿಯಲ್ಲಿ ರಾಮೇಶ್ವರಂ ಕೆಫೆ ಫುಡ್​
ಅಕ್ಷತಾ ವರ್ಕಾಡಿ
|

Updated on:Jun 02, 2024 | 12:02 PM

Share

ರಾಮೇಶ್ವರಂ ಕೆಫೆ ಶುರುವಾದ ಕೆಲವೇ ವರ್ಷಗಳಲ್ಲಿ ಭಾರತದಾದ್ಯಂತ ಬ್ರಾಂಚ್​ಗಳನ್ನ ತೆರೆದು ಜನರ ಮನೆ ಮಾತಾಗಿದೆ. ರಿಲಾಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಯ ಕಿರಿಯ ಪುತ್ರ ಅನಂತ್ ಅಂಬಾನಿಯ ಎರಡನೇ ಪ್ರೀ ವೆಡ್ಡಿಂಗ್‌ ಪಾರ್ಟಿ ಅದ್ಧೂರಿಯಾಗಿ ನಡೆದಿದ್ದು, ವಿಶೇಷ ಅಂದರೆ ಈ ಕಾರ್ಯಕ್ರಮಕ್ಕೆ ಬೆಂಗಳೂರಿನ ರಾಮೇಶ್ವರಂ ಕೆಫೆ ಆಹಾರ ಪೂರೈಸಿದೆ. ಈ ಕುರಿತು ಸಂತಸವನ್ನು ರಾಮೇಶ್ವರಂ ಕೆಫೆ ಮಾಲೀಕ ರಾಘವೇಂದ್ರ ರಾವ್ ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಂಡಿದ್ದಾರೆ.

ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್ ಕ್ರೂಸ್ ಪಾರ್ಟಿ ಮೇ 29ರಿಂದ ಜೂ.1ರವರೆಗೆ ಅದ್ಧೂರಿಯಾಗಿ ನಡೆದಿದೆ. ಸುಮಾರು 800 ಅತಿಥಿಗಳನ್ನೊಳಗೊಂಡ ಐಷಾರಾಮಿ ಹಡಗು ಮೇ 29ರಂದು ಇಟಲಿಯಿಂದ ಹೊರಟು ಜೂ.1 ಕ್ಕೆ ಸ್ವಿಜರ್‌ಲ್ಯಾಂಡ್ ತಲುಪಿದ್ದು, ಈ ಮೂರು ದಿನಗಳ ಐಷಾರಾಮಿ ಸಂಭ್ರಮದಲ್ಲಿ ಅಂಬಾನಿಯ ಕುಟುಂಬದ ಅತಿಥಿಗಳಿಗೆ ಬೆಂಗಳೂರಿನ ರಾಮೇಶ್ವರಂ ಕೆಫೆ ರುಚಿ ರುಚಿಯಾಗಿ ಆಹಾರವನ್ನು ಉಣಬಡಿಸಿದೆ. ಸದ್ಯ ಊಟದ ಗುಣಮಟ್ಟ, ಜನಪ್ರಿಯತೆ, ರುಚಿ, ವೆರೈಟಿ ಊಟದ ಬಗ್ಗೆ ಮನೆಯ ಮಾತಾಗಿರುವ ರಾಮೇಶ್ವರಂ ಕೆಫೆ,‌ ಮುಖೇಶ್ ಅಂಬಾನಿಯ ಮಗನ ಮದುವೆಯಲ್ಲಿಯೂ ತಮ್ಮ ರುಚಿಯ ಮೂಲಕ ಕಮಾಲ್‌ ಮಾಡಲಿದೆ ಎಂದು ವರದಿಯಾಗಿದೆ.‌

ಇದನ್ನೂ ಓದಿ: ಅನಂತ್ ಅಂಬಾನಿಯ 2ನೇ ಪ್ರೀ ವೆಡ್ಡಿಂಗ್ ಸಂಭ್ರಮದ ಐಷಾರಾಮಿ ಹಡಗು ಹೇಗಿದೆ ನೋಡಿ

2023ರ ಜನವರಿ 19ರಂದು ಅನಂತ್​​ ಅಂಬಾನಿ ಮತ್ತು ರಾಧಿಕ ಮರ್ಚೆಂಟ್ ಜೋಡಿ​​ ಮುಂಬೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಈ ಜೋಡಿಯ ಅದ್ಧೂರಿ ವಿವಾಹ ಕಾರ್ಯಕ್ರಮವು ಜುಲೈ 12 ರಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (ಬಿಕೆಸಿ) ಜಿಯೋ ವರ್ಲ್ಡ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಹಿಂದೂ ಸಂಪ್ರದಾಯದಂತೆ ನಡೆಯಲಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:01 pm, Sun, 2 June 24

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?