AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್‌ ಪಾರ್ಟಿಯಲ್ಲಿ ರಾಮೇಶ್ವರಂ ಕೆಫೆ ಫುಡ್​

ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್ ಕ್ರೂಸ್ ಪಾರ್ಟಿ ಮೇ 29ರಿಂದ ಜೂ.1ರವರೆಗೆ ಅದ್ಧೂರಿಯಾಗಿ ನಡೆದಿದೆ. ಸುಮಾರು 800 ಅತಿಥಿಗಳನ್ನೊಳಗೊಂಡ ಈ ಕಾರ್ಯಕ್ರಮಕ್ಕೆ ಬೆಂಗಳೂರಿನ ರಾಮೇಶ್ವರಂ ಕೆಫೆ ಆಹಾರ ಪೂರೈಸಿದೆ. ಈ ಕುರಿತು ರಾಮೇಶ್ವರಂ ಕೆಫೆ ಮಾಲೀಕ ರಾಘವೇಂದ್ರ ರಾವ್ ಸಾಮಾಜಿಕ ಮಾಧ್ಯಮದಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್‌ ಪಾರ್ಟಿಯಲ್ಲಿ ರಾಮೇಶ್ವರಂ ಕೆಫೆ ಫುಡ್​
ಅಕ್ಷತಾ ವರ್ಕಾಡಿ
|

Updated on:Jun 02, 2024 | 12:02 PM

Share

ರಾಮೇಶ್ವರಂ ಕೆಫೆ ಶುರುವಾದ ಕೆಲವೇ ವರ್ಷಗಳಲ್ಲಿ ಭಾರತದಾದ್ಯಂತ ಬ್ರಾಂಚ್​ಗಳನ್ನ ತೆರೆದು ಜನರ ಮನೆ ಮಾತಾಗಿದೆ. ರಿಲಾಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಯ ಕಿರಿಯ ಪುತ್ರ ಅನಂತ್ ಅಂಬಾನಿಯ ಎರಡನೇ ಪ್ರೀ ವೆಡ್ಡಿಂಗ್‌ ಪಾರ್ಟಿ ಅದ್ಧೂರಿಯಾಗಿ ನಡೆದಿದ್ದು, ವಿಶೇಷ ಅಂದರೆ ಈ ಕಾರ್ಯಕ್ರಮಕ್ಕೆ ಬೆಂಗಳೂರಿನ ರಾಮೇಶ್ವರಂ ಕೆಫೆ ಆಹಾರ ಪೂರೈಸಿದೆ. ಈ ಕುರಿತು ಸಂತಸವನ್ನು ರಾಮೇಶ್ವರಂ ಕೆಫೆ ಮಾಲೀಕ ರಾಘವೇಂದ್ರ ರಾವ್ ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಂಡಿದ್ದಾರೆ.

ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್ ಕ್ರೂಸ್ ಪಾರ್ಟಿ ಮೇ 29ರಿಂದ ಜೂ.1ರವರೆಗೆ ಅದ್ಧೂರಿಯಾಗಿ ನಡೆದಿದೆ. ಸುಮಾರು 800 ಅತಿಥಿಗಳನ್ನೊಳಗೊಂಡ ಐಷಾರಾಮಿ ಹಡಗು ಮೇ 29ರಂದು ಇಟಲಿಯಿಂದ ಹೊರಟು ಜೂ.1 ಕ್ಕೆ ಸ್ವಿಜರ್‌ಲ್ಯಾಂಡ್ ತಲುಪಿದ್ದು, ಈ ಮೂರು ದಿನಗಳ ಐಷಾರಾಮಿ ಸಂಭ್ರಮದಲ್ಲಿ ಅಂಬಾನಿಯ ಕುಟುಂಬದ ಅತಿಥಿಗಳಿಗೆ ಬೆಂಗಳೂರಿನ ರಾಮೇಶ್ವರಂ ಕೆಫೆ ರುಚಿ ರುಚಿಯಾಗಿ ಆಹಾರವನ್ನು ಉಣಬಡಿಸಿದೆ. ಸದ್ಯ ಊಟದ ಗುಣಮಟ್ಟ, ಜನಪ್ರಿಯತೆ, ರುಚಿ, ವೆರೈಟಿ ಊಟದ ಬಗ್ಗೆ ಮನೆಯ ಮಾತಾಗಿರುವ ರಾಮೇಶ್ವರಂ ಕೆಫೆ,‌ ಮುಖೇಶ್ ಅಂಬಾನಿಯ ಮಗನ ಮದುವೆಯಲ್ಲಿಯೂ ತಮ್ಮ ರುಚಿಯ ಮೂಲಕ ಕಮಾಲ್‌ ಮಾಡಲಿದೆ ಎಂದು ವರದಿಯಾಗಿದೆ.‌

ಇದನ್ನೂ ಓದಿ: ಅನಂತ್ ಅಂಬಾನಿಯ 2ನೇ ಪ್ರೀ ವೆಡ್ಡಿಂಗ್ ಸಂಭ್ರಮದ ಐಷಾರಾಮಿ ಹಡಗು ಹೇಗಿದೆ ನೋಡಿ

2023ರ ಜನವರಿ 19ರಂದು ಅನಂತ್​​ ಅಂಬಾನಿ ಮತ್ತು ರಾಧಿಕ ಮರ್ಚೆಂಟ್ ಜೋಡಿ​​ ಮುಂಬೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಈ ಜೋಡಿಯ ಅದ್ಧೂರಿ ವಿವಾಹ ಕಾರ್ಯಕ್ರಮವು ಜುಲೈ 12 ರಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (ಬಿಕೆಸಿ) ಜಿಯೋ ವರ್ಲ್ಡ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಹಿಂದೂ ಸಂಪ್ರದಾಯದಂತೆ ನಡೆಯಲಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:01 pm, Sun, 2 June 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ