ಹಿಮಾಚಲಪ್ರದೇಶದಲ್ಲಿ ಅಪರೂಪದ ಹಿಮಚಿರತೆ ಪತ್ತೆ; ವಿಡಿಯೋ ವೈರಲ್

Snow Leopard : ಹಿಮಾಚಲ ಪ್ರದೇಶದಲ್ಲಿ ವರ್ಷಾಂತ್ಯದ ದಿನಗಳಲ್ಲಿ ಹೆಚ್ಚು ಹಿಮಪಾತವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಮಧ್ಯೆಯೇ ಹಿಮಚಿರತೆಯೊಂದು ಕಾಣಿಸಿಕೊಂಡು ಪ್ರವಾಸಿಗರಲ್ಲಿ ಕುತೂಹಲ ಮೂಡಿಸಿದೆ.

ಹಿಮಾಚಲಪ್ರದೇಶದಲ್ಲಿ ಅಪರೂಪದ ಹಿಮಚಿರತೆ ಪತ್ತೆ; ವಿಡಿಯೋ ವೈರಲ್
ಹಿಮಚಿರತೆ
Follow us
| Updated By: ಶ್ರೀದೇವಿ ಕಳಸದ

Updated on:Dec 29, 2022 | 1:31 PM

Viral Video : ಈ ಡಿಸೆಂಬರ್​ನ ಅವಧಿಯಲ್ಲಿ ಪ್ರವಾಸಿಗರೆಲ್ಲ ಹಿಮಾಲಯದ ಸುಂದರ ತಾಣಗಳನ್ನು ಸುತ್ತುವುದರಲ್ಲಿ ಮಗ್ನರಾಗಿದ್ದಾರೆ. ಕೈಯಲ್ಲಿ ಮೊಬೈಲು, ಕ್ಯಾಮೆರಾಗಳಿದ್ದ ಮೇಲೆ ಒಂದೊಂದು ದೃಶ್ಯವೂ ಅಪರೂಪವೇ. ಹಿಮಾಚಲ ಪ್ರದೇಶದ ಲೌಹಾಲ್​-ಸ್ಪಿತಿಯ ಜಿಲ್ಲೆಯ ಕಾಝಾದ ಚಿಚಮ್​ ಎಂಬ ಹಳ್ಳಿಯಲ್ಲಿ ಕಲ್ಲುಬಂಡೆಗಳ ಮಧ್ಯೆ ವಿರಮಿಸುತ್ತಿದ್ದ ಅಪರೂಪದ ಹಿಮಚಿರತೆಯ (Snow leopard) ವಿಡಿಯೋ ಇದೀಗ ವೈರಲ್ ಆಗಿದೆ.

ಹಿಮಾಚಲ ಪ್ರದೇಶದ ಸಹಾಯಕ ಸಾರ್ವಜನಿಕ ಸಂಪರ್ಕ ಅಧಿಕಾರಿ ಅಜಯ್ ಬನ್ಯಾಲ್ ಎಂಬುವವರು ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ ಎಂದು ವರದಿಗಳ ಮೂಲಕ ತಿಳಿಯುತ್ತಿದೆ. ಹಿಮಚಿರತೆಗಳು ಅಪರೂಪದ ವನ್ಯಮೃಗಗಳು. ಇವುಗಳ ಚರ್ಮ, ಮೂಳೆ ಮತ್ತು ದೇಹದ ಭಾಗಗಳಿಗೆ ಹೆಚ್ಚು ‘ಬೇಡಿಕೆ’ ಇರುವುದರಿಂದ ಇವುಗಳ ಪ್ರಾಣಕ್ಕೆ ಸಂಚಕಾರ ಇದ್ದೇ ಇರುತ್ತದೆ. ಹಾಗಾಗಿ ಅಳಿವಿನ ಅಂಚಿನಲ್ಲಿರುವ ತಳಿಗಳ ಪಟ್ಟಿಯಲ್ಲಿ ಈ ಹಿಮಚಿರತೆಗಳೂ ಸೇರಿವೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಕ್ರಿಸ್​ಮಸ್ ರಜೆಯ​ ಪ್ರಯುಕ್ತ ಶಿಮ್ಲಾವು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಈ ವರ್ಷದ ಕೊನೆಯ ದಿನಗಳಲ್ಲಿ ಈ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಾರೀ ಹಿಮಪಾತವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:25 pm, Thu, 29 December 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ