AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Albino Fawn: ಅಪರೂಪದ ಬಿಳಿ ಬಣ್ಣದ ಜಿಂಕೆ ಪತ್ತೆ, ವೈರಲ್​ ಪೋಟೋ ಇಲ್ಲಿದೆ ನೋಡಿ

ಉತ್ತರ ಪ್ರದೇಶದ ಕತರ್ನಿಯಾ ಘಾಟ್ ವನ್ಯಜೀವಿ ಅಭಯಾರಣ್ಯದಲ್ಲಿ ಅಲ್ಬಿನೋ ಜಿಂಕೆ ಅಂದರೆ ಬಿಳಿ ಬಣ್ಣದ ಜಿಂಕೆ ಸೋಮವಾರ ಬೆಳಗ್ಗೆ ಕಾಣಿಸಿಕೊಂಡಿದೆ.

Albino Fawn: ಅಪರೂಪದ ಬಿಳಿ ಬಣ್ಣದ ಜಿಂಕೆ ಪತ್ತೆ, ವೈರಲ್​ ಪೋಟೋ ಇಲ್ಲಿದೆ ನೋಡಿ
ಬಿಳಿ ಬಣ್ಣದ ಜಿಂಕೆ Image Credit source: Twitter
ಅಕ್ಷತಾ ವರ್ಕಾಡಿ
|

Updated on:Mar 12, 2023 | 6:07 PM

Share

ಉತ್ತರ ಪ್ರದೇಶದ ಕತರ್ನಿಯಾ ಘಾಟ್ ವನ್ಯಜೀವಿ ಅಭಯಾರಣ್ಯದಲ್ಲಿ ಅಲ್ಬಿನೋ ಜಿಂಕೆ ಅಂದರೆ ಬಿಳಿ ಬಣ್ಣದ ಜಿಂಕೆ ಸೋಮವಾರ ಬೆಳಗ್ಗೆ ಕಾಣಿಸಿಕೊಂಡಿದೆ. ಅರಣ್ಯ ಅಧಿಕಾರಿಗಳು ಈ ಅಪರೂಪದ ಜಿಂಕೆಯ ಪೋಟೋವನ್ನು ಪೋಸ್ಟ್ ಮಾಡಿದ್ದು, ಇದೀಗಾ ಈ ಪೋಸ್ಟ್​​ ಸೋಶಿಯಲ್​​ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್​​ ಆಗಿದೆ.

ಭಾರತೀಯ ಅರಣ್ಯ ಅಧಿಕಾರಿಗಳು ವಿವಿಧ ಸಸ್ಯ ಮತ್ತು ಪ್ರಾಣಿಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸುವ ಮತ್ತು ಶಿಕ್ಷಣ ನೀಡುವ ಉದ್ದೇಶದಿಂದ ಸಾಮಾಜಿಕ ತಾಣಗಳಲ್ಲಿ ಸಕ್ರಿಯವಾಗಿರುವುದನ್ನು ಕಾಣಬಹುದು. ಈ ಬಾರಿ ಅಧಿಕಾರಿ ಆಕಾಶ್ ದೀಪ್ ಬಧವಾನ್ ಅವರು ಅಪರೂಪದ ಅಲ್ಬಿನೋ ಜಿಂಕೆಯ ಛಾಯಾಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ, ಇದು ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ಕುತೂಹಲ ಮೂಡಿಸಿದೆ. ಉತ್ತರ ಪ್ರದೇಶದ ಕತರ್ನಿಯಾ ಘಾಟ್ ವನ್ಯಜೀವಿ ಅಭಯಾರಣ್ಯದಲ್ಲಿ ಅಲ್ಬಿನೋ ಜಿಂಕೆ ಸೋಮವಾರ ಬೆಳಗ್ಗೆ ಕಾಣಿಸಿಕೊಂಡಿದೆ.

ಇದನ್ನೂ ಓದಿ: ಸೊಂಡಿಲಿನಿಂದ ನೀರಿನ ಪೈಪ್ ಹಿಡಿದು ಸ್ನಾನ ಮಾಡುತ್ತಿರುವ ಆನೆಯ ವಿಡಿಯೋ ಇಲ್ಲಿದೆ ನೋಡಿ

ಚಿತ್ರದಲ್ಲಿ, ಅಲ್ಬಿನೋ ಜಿಂಕೆ, ಇನ್ನೆರಡು ಜಿಂಕೆಯೊಂದಿಗೆ ಹುಲ್ಲು ವನ್ಯಜೀವಿ ಅಭಯಾರಣ್ಯದಲ್ಲಿ ಹೋಗುವುದನ್ನು ಕಾಣಬಹುದು. ಈ ಫೋಟೋ ಟ್ವಿಟರ್‌ನಲ್ಲಿ ವೈರಲ್ ಆಗುತ್ತಿದ್ದಂತೆ ಸಾಕಷ್ಟು ಬಳಕೆದಾರರು ಅಪರೂಪದ ಜೀವಿಯನ್ನು ನೋಡಿ ಆಶ್ಚರ್ಯಗೊಂಡಿದ್ದಾರೆ. ಇನ್ನು ಕೆಲವು ಬಳಕೆದಾರರು ಅದರ ಸುರಕ್ಷತೆಯ ಬಗ್ಗೆ ಕಾಳಜಿ ಎಂದು ಕಾಮೆಂಟ್​​ನಲ್ಲಿ ತಿಳಿಸಿದ್ದಾರೆ. ಈ ಪೋಸ್ಟ್​​ಗೆ ಐಎಫ್‌ಎಸ್ ಅಧಿಕಾರಿ ಸುಸಂತ ನಂದಾ ಪ್ರತಿಕ್ರಿಯಿಸಿದ್ದು, 15 ವರ್ಷಗಳ ಹಿಂದೆ ಒಡಿಶಾದ ಅಂಗುಲ್ ಜಿಲ್ಲೆಯ ಲಬಂಗಿ ಅತಿಥಿಗೃಹದಲ್ಲಿ ಇಂತದ್ದೇ ಜಿಂಕೆಯನ್ನು ಕಣ್ತುಂಬಿಸಿಕೊಂಡಿದ್ದೆ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:05 pm, Sun, 12 March 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ