AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಬಾಗಿಲಿಗೆ, ವಾಹನಗಳಲ್ಲಿ ಮೆಣಸಿನಕಾಯಿ ಜತೆಗೆ ನಿಂಬೆಹಣ್ಣು ನೇತುಹಾಕುವುದರ ಹಿಂದಿದೆ ಈ ಕಾರಣ

ನೀವು ಮನೆಯ ಬಾಗಿಲು ಹಾಗೂ ವಾಹನಗಳಲ್ಲಿ ಮೆಣಸಿನಕಾಯಿ ಹಾಗೂ ನಿಂಬೆ ಹಣ್ಣನ್ನು ನೇತು ಹಾಕಿರುವುದನ್ನು ನೀವು ನೋಡಿರುತ್ತೀರಿ. ಇದೊಂದು ಸಂಪ್ರದಾಯವಾಗಿಯೇ ಮುಂದುವರೆದಿದ್ದು, ಈ ರೀತಿಯ ಆಚರಣೆ ಯಾಕೆ ಬಂತು ಎಂಬ ಬಗ್ಗೆ ಯಾರು ಕೂಡ ಯೋಚನೆ ಮಾಡುವುದಿಲ್ಲ. ಆದರೆ ಮೆಣಸಿನಕಾಯಿ ಹಾಗೂ ನಿಂಬೆ ಹಣ್ಣನ್ನು ಕಟ್ಟುವುದರ ಹಿಂದೆ ನಂಬಿಕೆಯ ಜತೆಗೆ ಈ ವೈಜ್ಞಾನಿಕ ಕಾರಣವೂ ಇದೆ.

ಮನೆ ಬಾಗಿಲಿಗೆ, ವಾಹನಗಳಲ್ಲಿ ಮೆಣಸಿನಕಾಯಿ ಜತೆಗೆ ನಿಂಬೆಹಣ್ಣು ನೇತುಹಾಕುವುದರ ಹಿಂದಿದೆ ಈ ಕಾರಣ
ಮೆಣಸಿನಕಾಯಿ ಹಾಗೂ ನಿಂಬೆ ಹಣ್ಣು Image Credit source: Facebook
ಸಾಯಿನಂದಾ
|

Updated on: Sep 19, 2025 | 7:08 PM

Share

ನಮ್ಮ ಹಿರಿಯರು ಏನು ಆಚರಣೆಗಳನ್ನು ಮಾಡಿಕೊಂಡು ಬಂದಿದ್ದಾರೋ ಅದೆಲ್ಲವನ್ನು ನಾವುಗಳೂ ಚಾಚು ತಪ್ಪದೇ ಪಾಲಿಸಿಕೊಂಡು ಬಂದಿದ್ದೇವೆ. ಅದರಲ್ಲಿ ನಿಂಬೆಹಣ್ಣು (lemon) ಹಾಗೂ ಮೆಣಸಿನಕಾಯಿಯನ್ನು (chilly) ತೂಗು ಹಾಕುವುದು ಕೂಡ ಸೇರಿದೆ. ಈ ಸಂಪ್ರದಾಯವು ಬಹಳ ಹಳೆಯದು. ಹೀಗಾಗಿ ಈ ಬಗ್ಗೆ ಪ್ರಶ್ನೆ ಮಾಡದೇ ಇವತ್ತಿಗೂ ಅನುಸರಿಸಿಕೊಂಡು ಬರುತ್ತಿದ್ದೇವೆ. ಹೌದು, ಮನೆಯ ಮುಂಭಾಗದ ಬಾಗಿಲ ಮೇಲೆ, ಅಂಗಡಿಯ ಮುಂಭಾಗದಲ್ಲಿ, ವಾಹನಗಳಲ್ಲಿ ನಿಂಬೆಹಣ್ಣಿನ ಜೊತೆಗೆ ಮೆಣಸಿನಕಾಯಿ ನೇತು ಹಾಕುತ್ತಾರೆ. ಆದರೆ ಈ ರೀತಿ ಯಾಕೆ ನೇತು ಹಾಕುತ್ತಾರೆ ಎಂಬ ಬಗ್ಗೆ ಯಾವತ್ತಾದ್ರೂ ಯೋಚನೆ ಮಾಡಿದ್ದೀರಾ. ಈ ರೀತಿಯ ಆಚರಣೆಯೂ ವೈಜ್ಞಾನಿಕ ಕಾರಣವನ್ನು ಒಳಗೊಂಡಿದೆ. ಈ ಕುರಿತಾದ ಮಾಹಿತಿ ಇಲ್ಲಿದೆ.

ಇದರ ಹಿಂದಿನ ವೈಜ್ಞಾನಿಕ ಕಾರಣವೇನು?

ಮನೆಯ ಬಾಗಿಲಿಗೆ, ವಾಹನಗಳಿಗೆ ನಿಂಬೆಹಣ್ಣು ಹಾಗೂ ಮೆಣಸಿನಕಾಯಿಗಳನ್ನು ಕಟ್ಟುವುದರಿಂದ ದುಷ್ಟ ಕಣ್ಣಿನಿಂದ ರಕ್ಷಿಸುತ್ತದೆ. ಇದು ಅಪಘಾತಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ ಹಾಗೂ ವಾಹನವನ್ನು ರಕ್ಷಿಸುತ್ತದೆ ಎನ್ನಲಾಗಿದೆ. ವೈಜ್ಞಾನಿಕ ಕಾರಣದ ಬಗ್ಗೆ ನೋಡುವುದಾದರೆ ನಿಂಬೆ ಮತ್ತು ಮೆಣಸಿನಕಾಯಿಯ ಗುಣಲಕ್ಷಣಗಳು ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಹೊಸ ವಾಹನದ ಕೆಳಗೆ ನಿಂಬೆ ಹಣ್ಣು ಇಡೋದು ಯಾಕೆ ಗೊತ್ತಾ? ಇದೆ ನೋಡಿ ಕಾರಣ

ಇದನ್ನೂ ಓದಿ
Image
ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ನದಿಯಂತಾದ ಬೆಂಗಳೂರಿನ ಫ್ಲೈಓವರ್​!
Image
ಒಂಟಿತನ ಹೋಗಲಾಡಿಸಲು ಹೊಸ ಮಾರ್ಗ ಕಂಡುಕೊಂಡ ಸಾಫ್ಟ್‌ವೇರ್‌ ಇಂಜಿನಿಯರ್
Image
ಇದು ಮ್ಯಾಜಿಕ್ ಅಲ್ಲ ಮೋಸ, ಪಾರಿವಾಳ ಹೇಗೆ ಬಂತು ನೋಡಿ
Image
ಹೊಸ ವಾಹನದ ಕೆಳಗೆ ನಿಂಬೆ ಹಣ್ಣು ಇಡೋದು ಯಾಕೆ ಗೊತ್ತಾ? ಇದೆ ನೋಡಿ ಕಾರಣ

ಈ ನಿಂಬೆ ಮತ್ತು ಮೆಣಸಿನಕಾಯಿಯ ಬಲವಾದ ವಾಸನೆಯು ಸೊಳ್ಳೆಗಳು, ನೊಣಗಳು ಮತ್ತು ಇತರ ಕೀಟಗಳನ್ನು ದೂರವಿಡುತ್ತದೆ. ಇದು ಮನೆ ಅಥವಾ ವಾಹನದ ವಾತಾವರಣವನ್ನು ಸ್ವಚ್ಛವಾಗಿರಿಸುತ್ತದೆ. ಗಾಳಿಯಲ್ಲಿನ ಸೂಕ್ಷ್ಮಜೀವಿಗಳು ಮತ್ತು ನಕಾರಾತ್ಮಕ ಶಕ್ತಿಯನ್ನು ಹೀರಿಕೊಳ್ಳುತ್ತದೆ, ಇದರಿಂದ ವಾತಾವರಣವು ಸಕಾರಾತ್ಮಕವಾಗಿರುತ್ತದೆ ಎನ್ನಲಾಗಿದೆ. ಹೀಗಾಗಿ ಹೆಚ್ಚಿನವರು ಮನೆಯ ಬಾಗಿಲು ಅಥವಾ ವಾಹನಗಳಲ್ಲಿ ನಿಂಬೆ ಮತ್ತು ಮೆಣಸಿನಕಾಯಿ ತೂಗು ಹಾಕಲು ಇದುವೇ ಮುಖ್ಯ ಕಾರಣವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ