AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಸ್ನೇಕ್ ಮ್ಯಾನ್ ವಾವಾ ಸುರೇಶ್ ಅವರ ಆರೋಗ್ಯದಲ್ಲಿ ಚೇತರಿಕೆ; ಇನ್ನೂ ಎರಡು ದಿನ ನಿಗಾ

ನಾಗರಹಾವು ಕಡಿತದಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಕೇರಳದ ಖ್ಯಾತ ಉರಗ ರಕ್ಷಕ ವಾವಾ ಸುರೇಶ್ ಅವರನ್ನು ಗುರುವಾರ ವೆಂಟಿಲೇಟರ್‌ನಿಂದ ಹೊರತೆಗೆಯಲಾಗಿದೆ.

ಕೇರಳದ ಸ್ನೇಕ್ ಮ್ಯಾನ್ ವಾವಾ ಸುರೇಶ್ ಅವರ ಆರೋಗ್ಯದಲ್ಲಿ ಚೇತರಿಕೆ; ಇನ್ನೂ ಎರಡು ದಿನ ನಿಗಾ
ವಾವಾ ಸುರೇಶ್
TV9 Web
| Edited By: |

Updated on: Feb 03, 2022 | 2:02 PM

Share

ನಾಗರಹಾವು ಕಡಿತದಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಕೇರಳದ ಖ್ಯಾತ ಉರಗ ರಕ್ಷಕ ವಾವಾ ಸುರೇಶ್ ಅವರನ್ನು ಗುರುವಾರ ವೆಂಟಿಲೇಟರ್‌ನಿಂದ ಹೊರತೆಗೆಯಲಾಗಿದೆ. ಕೊಟ್ಟಾಯಂ ವೈದ್ಯಕೀಯ ಕಾಲೇಜು ಅಧೀಕ್ಷಕ ಟಿ.ಕೆ.ಜಯಕುಮಾರ್ ಅವರು ಮಾತನಾಡಿ, ಸುರೇಶ್ ಅವರು ಸ್ವತಃ ಉಸಿರಾಡಲು ಪ್ರಾರಂಭಿಸಿದ್ದಾರೆ ಮತ್ತು ಅವರ ಆರೋಗ್ಯ ಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆಯಾಗಿದೆ. ಇನ್ನು ಎರಡು ದಿನಗಳ ಕಾಲ ಸುರೇಶ್ ಅವರನ್ನು ನಿಗಾದಲ್ಲಿರಿಸಲಾಗುದು ಎಂದು ವೈದ್ಯರು ತಿಳಿಸಿದ್ದಾರೆ. ವಾವಾ ಸುರೇಶ್ ಆರೋಗ್ಯದ ಮೇಲೆ ನಿಗಾ ಇಡಲು ರಾಜ್ಯ ಆರೋಗ್ಯ ಇಲಾಖೆ ವಿಶೇಷ ವೈದ್ಯಕೀಯ ತಂಡವನ್ನು ರಚಿಸಲಾಗಿದೆ.

ಕೇರಳದಲ್ಲಿ ಮನೆಮಾತಾಗಿರುವ ಸುರೇಶ್, ಇದುವರೆಗೆ 50,000ಕ್ಕೂ ಹೆಚ್ಚು ಸರೀಸೃಪಗಳನ್ನು ರಕ್ಷಿಸಿದ್ದಾರೆ. ಅವರು ನ್ಯಾಷನಲ್ ಜಿಯಾಗ್ರಫಿಕ್ ಮತ್ತು ಅನಿಮಲ್ ಪ್ಲಾನೆಟ್ ಚಾನೆಲ್‌ಗಳಲ್ಲಿ ಕೂಡಾ ಕಾಣಿಸಿಕೊಂಡಿದ್ದಾರೆ. ಸುರೇಶ್ ಅವರನ್ನು ಪ್ರೀತಿಯಿಂದ ‘ಕೇರಳದ ಸ್ನೇಕ್ ಮ್ಯಾನ್’ (Snake man of Kerala) ಎಂದು ಕರೆಯಲಾಗುತ್ತೆ.  190 ಕ್ಕೂ ಹೆಚ್ಚು ಕಾಳಿಂಗ ಸರ್ಪಗಳನ್ನು ರಕ್ಷಿಸಿದ್ದಾರೆ. 48 ವರ್ಷದವರಾದ ವಾವಾ ಸುರೇಶ್ ಜನವರಿ 31 ರಂದು ಕೊಟ್ಟಾಯಂನ ಕುಚರಿ ಗ್ರಾಮಯೊಂದರಲ್ಲಿ ಹಾವನ್ನು ಹಿಡಿಯಲು ಹೋದಾಗ, ಗೋಣಿ ಚೀಲದಲ್ಲಿ ಹಾಕಲು ಯತ್ನಿಸುತ್ತಿದ್ದಾಗ ಬಲತೊಡೆಗೆ ಕಚ್ಚಿದೆ. ಹಾವು ಕಚ್ಚಿದರೂ ಸಹ ಸುರಕ್ಷಿತವಾಗಿ ಗೋಣಿಚೀಲದಲ್ಲಿ  ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕೆಲವು ನಿಮಿಷಗಳ ನಂತರ ಅವರು ಪ್ರಜ್ಞಾಹೀನರಾದರು, ”ಎಂದು ಗ್ರಾಮಸ್ಥರು ಹೇಳಿದ್ದಾರೆ.

250ಕ್ಕೂ ಹೆಚ್ಚು ಹಾವು ಕಡಿತಕ್ಕೆ ಒಳಗಾಗಿದ್ದೇನೆ ಎಂದು ಮಾಧ್ಯಮ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಸುರೇಶ್ ಹೇಳಿಕೊಂಡಿದ್ದಾರೆ. ಹಾವು ಕಡಿತದಿಂದ ಅವರು ತಮ್ಮ ತೋರುಬೆರಳು ಮತ್ತು ಬಲ ಮಣಿಕಟ್ಟಿನ ಚಲನೆಯನ್ನು ಸಹ ಕಳೆದುಕೊಂಡಿದ್ದಾರೆ. ಕೇರಳ ಅರಣ್ಯ ಇಲಾಖೆಯು ಅವರಿಗೆ ಉದ್ಯೋಗವನ್ನು ನೀಡುತ್ತೇವೆ ಎಂದು ಹೇಳಿದ್ದರು. ಆದರೆ ಅವರೇ ಅದನ್ನು ನಿರಾಕರಿಸಿದ್ದಾರಂತೆ.

ಇದನ್ನೂ ಓದಿ;

Allu Arjun: ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ ಅಲ್ಲು ಅರ್ಜುನ್; ಇಲ್ಲಿವೆ ಫೋಟೋಗಳು

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!