Sign In

By signing in or creating an account, you agree with Associated Broadcasting Company's Terms & Conditions and Privacy Policy.

Red stripe on medicines: ಮಾತ್ರೆ ಪ್ಯಾಕೆಟ್​​ ಮೇಲೆ ಕೆಂಪು ಗೆರೆ ಏಕೆ ಇರುತ್ತದೆ? ಇದರ ಅರ್ಥವೇನು?

ಸಾಮಾನ್ಯವಾಗಿ ಮಾತ್ರೆಗಳನ್ನು ಖರೀದಿಸುವಾಗ ಅದರ ಹಿಂಭಾಗದಲ್ಲಿ ಕೆಂಪು ಬಣ್ಣದ ದಪ್ಪಗಿನ ಗೆರೆಯನ್ನು ನೀವು ನೋಡಿರುತ್ತೀರಿ. ಆದರೆ ಈ ರೀತಿ ಕೆಂಪು ಗೆರೆ ಏಕೆ ಇರುತ್ತದೆ? ಇದರ ಅರ್ಥವೇನು? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Red stripe on medicines: ಮಾತ್ರೆ ಪ್ಯಾಕೆಟ್​​ ಮೇಲೆ ಕೆಂಪು ಗೆರೆ ಏಕೆ ಇರುತ್ತದೆ? ಇದರ ಅರ್ಥವೇನು?
Red stripe on medicines
Follow us
ಅಕ್ಷತಾ ವರ್ಕಾಡಿ
|

Updated on:Mar 12, 2024 | 11:09 AM

ಸಾಮಾನ್ಯವಾಗಿ ಸಾಕಷ್ಟು ಜನರು ಅನಾರೋಗ್ಯಕ್ಕೆ ಒಳಗಾದಾಗ ವೈದ್ಯರ ಬಳಿ ಹೋಗದೆ ನೇರವಾಗಿ ಮೆಡಿಕಲ್ ಸ್ಟೋರ್‌ಗೆ ಹೋಗಿ ಮಾತ್ರೆಗಳನ್ನು ಖರೀದಿಸುತ್ತಾರೆ. ಕೆಲವೊಮ್ಮೆ ಈ ಮಾತ್ರೆಗಳು ನಿಮ್ಮ ಸಮಸ್ಯೆಯನ್ನು ಗುಣಪಡಿಸಿದರೂ ಸಹ, ಕೆಲವೊಮ್ಮೆ ಇದರಿಂದ ಗಂಭೀರ ಪರಿಣಾಮಗಳನ್ನು ಅನುಭವಿಸಬೇಕಾಗುತ್ತದೆ. ತಕ್ಷಣಕ್ಕೆ ನೋವಿನಿಂದ ಪರಿಹಾರ ನೀಡಬಲ್ಲ ಪೈನ್​​ ಕಿಲ್ಲರ್​, ಆ್ಯಂಟಿ ಬಯೋಟಿಕ್​​​ಗಳಂತಹ ಮಾತ್ರೆಗಳನ್ನು ಖರೀದಿಸುವಾಗ ಮಾತ್ರೆಗಳ ಪ್ಯಾಕೆಟ್​​ ಮೇಲೆ ಕೆಂಪು ಬಣ್ಣದ ದಪ್ಪ ಗೆರೆಗಳನ್ನು ನೀವು ಗಮನಿಸಿರುತ್ತೀರಿ. ಆದರೆ ಈ ಗೆರೆಯ ಅರ್ಥವೇನು ಎಂದು ನಿಮಗೆ ತಿಳಿದಿದೆಯೇ?

ಮಾತ್ರೆಗಳ ಪ್ಯಾಕೆಟ್​​ ಮೇಲಿನ ಕೆಂಪು ಗೆರೆಯ ಅರ್ಥ?

ವಾಸ್ತವವಾಗಿ, ಮಾತ್ರೆಗಳ ಪ್ಯಾಕೆಟ್​​ ಮೇಲಿನ ಕೆಂಪು ಗೆರೆ ಅರ್ಥವೆನೇಂದರೆ ‘ಮಾತ್ರೆಯನ್ನು ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾರಾಟ ಮಾಡಲಾಗುವುದಿಲ್ಲ ಅಥವಾ ವೈದ್ಯರ ಸಲಹೆಯಿಲ್ಲದೆ ಬಳಸಲಾಗುವುದಿಲ್ಲ’ ಎಂಬ ಅರ್ಥವನ್ನು ನೀಡುತ್ತದೆ. ಆದ್ದರಿಂದ ಪ್ರತಿಜೀವಕಗಳ ದುರುಪಯೋಗವನ್ನು ತಡೆಗಟ್ಟಲು, ಔಷಧಿಗಳ ಮೇಲೆ ಕೆಂಪು ಗೆರೆಯನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯವು ತನ್ನ ಟ್ವಿಟರ್​​ ಖಾತೆಯಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದೆ.

ಆರೋಗ್ಯ ಸಚಿವಾಲಯ ಹಂಚಿಕೊಂಡ ಟ್ವಿಟರ್​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಾತ್ರೆಗಳನ್ನು ಅಲ್ಯೂಮಿನಿಯಂ ಫಾಯಿಲ್‌ನಲ್ಲಿ ಏಕೆ ಪ್ಯಾಕ್​​ ಮಾಡಲಾಗುತ್ತದೆ ಎಂದು ತಿಳಿದಿದೆಯೇ?

ಕೆಂಪು ಗೆರೆಯ ಹೊರತಾಗಿ, ಔಷಧದ ಮೇಲೆ ಬರೆಯಲಾದ ಅನೇಕ ಉಪಯುಕ್ತ ವಿಷಯಗಳಿವೆ, ಅದರ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಕೆಲವು ಔಷಧಿಗಳ ಪ್ಯಾಕೇಟ್​ ಮೇಲೆ Rx ಎಂದು ಬರೆಯಲಾಗಿದೆ, ಅಂದರೆ ಔಷಧಿಯನ್ನು ವೈದ್ಯರ ಸಲಹೆಯ ಮೇರೆಗೆ ತೆಗೆದುಕೊಳ್ಳಬೇಕು. ಇದಲ್ಲದೆ ಕೆಲವು ಔಷಧಿಗಳ ಪ್ಯಾಕೆಟ್​ ಮೇಲೆ XRx ಎಂದು ಬರೆಯಲಾಗಿದೆ ಮತ್ತು ಇದರರ್ಥ ಔಷಧಿಯನ್ನು ವೈದ್ಯರಿಂದ ಮಾತ್ರ ತೆಗೆದುಕೊಳ್ಳಬಹುದು. ವೈದ್ಯರು ಈ ಔಷಧಿಯನ್ನು ನೇರವಾಗಿ ರೋಗಿಗೆ ನೀಡಬಹುದು. ವೈದ್ಯರು ಬರೆದ ಪ್ರಿಸ್ಕ್ರಿಪ್ಷನ್ ಇದ್ದರೂ ರೋಗಿಯು ಅದನ್ನು ಯಾವುದೇ ಮೆಡಿಕಲ್ ಸ್ಟೋರ್‌ನಿಂದ ಖರೀದಿಸಲು ಸಾಧ್ಯವಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:09 am, Tue, 12 March 24

ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ