Red stripe on medicines: ಮಾತ್ರೆ ಪ್ಯಾಕೆಟ್​​ ಮೇಲೆ ಕೆಂಪು ಗೆರೆ ಏಕೆ ಇರುತ್ತದೆ? ಇದರ ಅರ್ಥವೇನು?

ಸಾಮಾನ್ಯವಾಗಿ ಮಾತ್ರೆಗಳನ್ನು ಖರೀದಿಸುವಾಗ ಅದರ ಹಿಂಭಾಗದಲ್ಲಿ ಕೆಂಪು ಬಣ್ಣದ ದಪ್ಪಗಿನ ಗೆರೆಯನ್ನು ನೀವು ನೋಡಿರುತ್ತೀರಿ. ಆದರೆ ಈ ರೀತಿ ಕೆಂಪು ಗೆರೆ ಏಕೆ ಇರುತ್ತದೆ? ಇದರ ಅರ್ಥವೇನು? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Red stripe on medicines: ಮಾತ್ರೆ ಪ್ಯಾಕೆಟ್​​ ಮೇಲೆ ಕೆಂಪು ಗೆರೆ ಏಕೆ ಇರುತ್ತದೆ? ಇದರ ಅರ್ಥವೇನು?
Red stripe on medicines
Follow us
|

Updated on:Mar 12, 2024 | 11:09 AM

ಸಾಮಾನ್ಯವಾಗಿ ಸಾಕಷ್ಟು ಜನರು ಅನಾರೋಗ್ಯಕ್ಕೆ ಒಳಗಾದಾಗ ವೈದ್ಯರ ಬಳಿ ಹೋಗದೆ ನೇರವಾಗಿ ಮೆಡಿಕಲ್ ಸ್ಟೋರ್‌ಗೆ ಹೋಗಿ ಮಾತ್ರೆಗಳನ್ನು ಖರೀದಿಸುತ್ತಾರೆ. ಕೆಲವೊಮ್ಮೆ ಈ ಮಾತ್ರೆಗಳು ನಿಮ್ಮ ಸಮಸ್ಯೆಯನ್ನು ಗುಣಪಡಿಸಿದರೂ ಸಹ, ಕೆಲವೊಮ್ಮೆ ಇದರಿಂದ ಗಂಭೀರ ಪರಿಣಾಮಗಳನ್ನು ಅನುಭವಿಸಬೇಕಾಗುತ್ತದೆ. ತಕ್ಷಣಕ್ಕೆ ನೋವಿನಿಂದ ಪರಿಹಾರ ನೀಡಬಲ್ಲ ಪೈನ್​​ ಕಿಲ್ಲರ್​, ಆ್ಯಂಟಿ ಬಯೋಟಿಕ್​​​ಗಳಂತಹ ಮಾತ್ರೆಗಳನ್ನು ಖರೀದಿಸುವಾಗ ಮಾತ್ರೆಗಳ ಪ್ಯಾಕೆಟ್​​ ಮೇಲೆ ಕೆಂಪು ಬಣ್ಣದ ದಪ್ಪ ಗೆರೆಗಳನ್ನು ನೀವು ಗಮನಿಸಿರುತ್ತೀರಿ. ಆದರೆ ಈ ಗೆರೆಯ ಅರ್ಥವೇನು ಎಂದು ನಿಮಗೆ ತಿಳಿದಿದೆಯೇ?

ಮಾತ್ರೆಗಳ ಪ್ಯಾಕೆಟ್​​ ಮೇಲಿನ ಕೆಂಪು ಗೆರೆಯ ಅರ್ಥ?

ವಾಸ್ತವವಾಗಿ, ಮಾತ್ರೆಗಳ ಪ್ಯಾಕೆಟ್​​ ಮೇಲಿನ ಕೆಂಪು ಗೆರೆ ಅರ್ಥವೆನೇಂದರೆ ‘ಮಾತ್ರೆಯನ್ನು ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾರಾಟ ಮಾಡಲಾಗುವುದಿಲ್ಲ ಅಥವಾ ವೈದ್ಯರ ಸಲಹೆಯಿಲ್ಲದೆ ಬಳಸಲಾಗುವುದಿಲ್ಲ’ ಎಂಬ ಅರ್ಥವನ್ನು ನೀಡುತ್ತದೆ. ಆದ್ದರಿಂದ ಪ್ರತಿಜೀವಕಗಳ ದುರುಪಯೋಗವನ್ನು ತಡೆಗಟ್ಟಲು, ಔಷಧಿಗಳ ಮೇಲೆ ಕೆಂಪು ಗೆರೆಯನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯವು ತನ್ನ ಟ್ವಿಟರ್​​ ಖಾತೆಯಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದೆ.

ಆರೋಗ್ಯ ಸಚಿವಾಲಯ ಹಂಚಿಕೊಂಡ ಟ್ವಿಟರ್​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಾತ್ರೆಗಳನ್ನು ಅಲ್ಯೂಮಿನಿಯಂ ಫಾಯಿಲ್‌ನಲ್ಲಿ ಏಕೆ ಪ್ಯಾಕ್​​ ಮಾಡಲಾಗುತ್ತದೆ ಎಂದು ತಿಳಿದಿದೆಯೇ?

ಕೆಂಪು ಗೆರೆಯ ಹೊರತಾಗಿ, ಔಷಧದ ಮೇಲೆ ಬರೆಯಲಾದ ಅನೇಕ ಉಪಯುಕ್ತ ವಿಷಯಗಳಿವೆ, ಅದರ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಕೆಲವು ಔಷಧಿಗಳ ಪ್ಯಾಕೇಟ್​ ಮೇಲೆ Rx ಎಂದು ಬರೆಯಲಾಗಿದೆ, ಅಂದರೆ ಔಷಧಿಯನ್ನು ವೈದ್ಯರ ಸಲಹೆಯ ಮೇರೆಗೆ ತೆಗೆದುಕೊಳ್ಳಬೇಕು. ಇದಲ್ಲದೆ ಕೆಲವು ಔಷಧಿಗಳ ಪ್ಯಾಕೆಟ್​ ಮೇಲೆ XRx ಎಂದು ಬರೆಯಲಾಗಿದೆ ಮತ್ತು ಇದರರ್ಥ ಔಷಧಿಯನ್ನು ವೈದ್ಯರಿಂದ ಮಾತ್ರ ತೆಗೆದುಕೊಳ್ಳಬಹುದು. ವೈದ್ಯರು ಈ ಔಷಧಿಯನ್ನು ನೇರವಾಗಿ ರೋಗಿಗೆ ನೀಡಬಹುದು. ವೈದ್ಯರು ಬರೆದ ಪ್ರಿಸ್ಕ್ರಿಪ್ಷನ್ ಇದ್ದರೂ ರೋಗಿಯು ಅದನ್ನು ಯಾವುದೇ ಮೆಡಿಕಲ್ ಸ್ಟೋರ್‌ನಿಂದ ಖರೀದಿಸಲು ಸಾಧ್ಯವಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:09 am, Tue, 12 March 24

ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್