AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೀಲ್ಸ್‌ ಮಾಡಿ ಹೊಸ ಸ್ಕೂಟಿ ಖರೀದಿಸಿದ ರೀಲ್ಸ್‌ ಸ್ಟಾರ್ ಮಂಗಳ ಅರುಣ್; ಫೋಟೋ ವೈರಲ್‌

ಸೋಷಿಯಲ್‌ ಮೀಡಿಯಾ ಬಳಕೆದಾರರಿಗೆ ರೀಲ್ಸ್‌ ಸ್ಟಾರ್‌ ಮಂಗಳ ಅರುಣ್‌ ಚಿರಪರಿಚಿತರ. ಇವರು ಮೂರು ಮಕ್ಕಳ ತಾಯಿಯಾಗಿದ್ದರೂ, ಭರ್ಜರಿಯಾಗಿ ನೃತ್ಯ ಮಾಡುವ ಮೂಲಕವೇ ಪಡ್ಡೆ ಹುಡುಗರ ಹೃದಯ ಗೆದ್ದವರು. ಇದೀಗ ಇವರು ಹೊಸ ಸ್ಕೂಟಿಯೊಂದನ್ನು ಖರೀದಿಸಿದ್ದಾರೆ. ಈ ಕುರಿತ ಫೋಟೋಸ್‌ ಇದೀಗ ವೈರಲ್‌ ಆಗುತ್ತಿದ್ದು, ನೆಟ್ಟಗರು ಅಭಿನಂದನೆಗಳನ್ನು ತಿಳಿಸಿದ್ದಾರೆ.

Viral Video: ರೀಲ್ಸ್‌ ಮಾಡಿ ಹೊಸ ಸ್ಕೂಟಿ ಖರೀದಿಸಿದ ರೀಲ್ಸ್‌ ಸ್ಟಾರ್ ಮಂಗಳ ಅರುಣ್; ಫೋಟೋ ವೈರಲ್‌
ಮಾಲಾಶ್ರೀ ಅಂಚನ್​
| Edited By: |

Updated on: Jul 08, 2024 | 6:29 PM

Share

ಈಗಂತೂ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ತೆರೆದರೆ ಸಾಕು ರೀಲ್ಸ್‌ಗಳದ್ದೇ ಹವಾ. ಈ ರೀಲ್ಸ್‌ ವಿಡಿಯೋಗಳಿಂದಲೇ ಹಲವು ಜನರು ಫೇಮಸ್‌ ಆಗಿದ್ದಾರೆ ಜೊತೆಗೆ ಯಶಸ್ಸನ್ನು ಕಂಡಿದ್ದಾರೆ. ಅದೇ ರೀತಿ ತನ್ನ ಅದ್ಭುತ ಪ್ರತಿಭೆಯಿಂದಲೇ ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆದವರು ಮಂಗಳ ಅರುಣ್.‌ ಇವರು ತಮ್ಮ ಅದ್ಭುತ ಡಾನ್ಸ್‌, ಟ್ರಾನ್ಸಿಶನ್‌ ರೀಲ್ಸ್‌ಗಳಿಂದಲೇ ಖ್ಯಾತಿಯನ್ನು ಪಡೆದಿದ್ದಾರೆ. ಸೋಷಿಯಲ್‌ ಮೀಡಿಯಾ ಬಳಕೆದಾರರಿಗೆ ರೀಲ್ಸ್‌ ಸ್ಟಾರ್‌ ಮಂಗಳ ಅರುಣ್‌ ಚಿರಪರಿಚಿತ ಅಂತಾನೇ ಹೇಳ್ಬಹುದು. ರೀಲ್ಸ್‌ ಮಾಡ್ತಾ ಮಾಡ್ತಾ ಇದೀಗ ಇವರು ಹೊಸ ಸ್ಕೂಟಿಯನ್ನು ಖರೀದಿ ಮಾಡಿದ್ದು, ಈ ಖುಷಿಯ ವಿಚಾರವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಉತ್ತಮ ಡಾನ್ಸರ್‌ ಆಗಿರುವ ಮಂಗಳ ಮೂಲತಃ ಚಿಕ್ಕಮಗಳೂರಿನ ಕಡೂರಿನವರು. ಮೂರು ಮಕ್ಕಳಿದ್ದರೂ ಮನೆಯಲ್ಲಿ ಸುಮ್ಮನೆ ಕೂರದೆ ತನ್ನ ಪ್ರತಿಭೆಯನ್ನು ಅನಾವರಣಗೊಳಿಸಲು ಉತ್ತಮ ವೇದಿಕೆಯನ್ನು ಹುಡುಕಿ, ಇನ್‌ಸ್ಟಾಗ್ರಾಮ್‌ನಲ್ಲಿ ಡಾನ್ಸ್‌, ಟ್ರಾನ್ಸಿಶನ್‌ ರೀಲ್ಸ್‌ ಮಾಡುವ ಮೂಲಕ ಸ್ಟಾರ್‌ ಆದವರು. ರೀಲ್ಸ್‌ ಮಾಡ್ತಾ ಮಾಡ್ತಾ ಇದೀಗ ಇವರು ಹೊಸ ಸ್ಕೂಟಿಯನ್ನೇ ಖರೀಸಿದ್ದಾರೆ.

ವೈರಲ್​​ ಪೋಸ್ಟ್​​

ಈ ಕುರಿತ ಪೋಸ್ಟ್‌ ಒಂದನ್ನು ಮಂಗಳ ಅರುಣ್‌ (arunmangalaa) ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡು “ಹೊಸ ಸ್ಕೂಟಿ ಖರೀದಿಸಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ಫೋಟೋದಲ್ಲಿ ಮಂಗಳಾ ಅವರು ಹೊಸ ಹೋಂಡಾ ಆಕ್ಟಿವಾದಲ್ಲಿ ಕುಳಿತು ಸ್ಟೈಲ್‌ ಆಗಿ ಪೋಸ್‌ ಕೊಟ್ಟಿರುವ ಕ್ಯೂಟ್‌ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ, ಭರ್ಜರಿ ಹಣ ಸಂಪಾದಿಸಿ; ಜಾಹೀರಾತು ವೈರಲ್

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ಪೋಸ್ಟ್‌ 23 ಸಾವಿರಕ್ಕೂ ಅಧಿಕ ಲೈಕ್ಸ್‌ಗಳನ್ನು ಪಡೆದುಕೊಂಡಿದ್ದು, ಅಭಿನಂದನೆಗಳು, ಇದೇ ರೀತಿ ಇನ್ನೂ ಎತ್ತರಕ್ಕೆ ಬೆಳೆಯಿರಿ ಎಂದು ನೆಟ್ಟಿಗರು ಕಾಮೆಂಟ್ಸ್‌ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?