AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪನೀರ್ ಮಟರ್ ಮಸಾಲದಲ್ಲಿ ಪನೀರ್ ಇಲ್ಲ! ಮದುವೆ ಮನೆಯಲ್ಲಿ ಘನಘೋರ ಯುದ್ಧ  

ಈ ಸಮಾಜದಲ್ಲಿ ಎಂತೆಂತಹ ಕಾರಣಗಳಿಗೆಲ್ಲಾ ಜಗಳಗಳು ನಡೆದಿವೆ, ಯುದ್ಧಗಳು ನಡೆದಿವೆ. ಆದ್ರೆ ಇಲ್ಲೊಂದು ಮದುವೆಯಲ್ಲಿ ಮಾತ್ರ ಪನೀರ್ ಮಟರ್ ಮಸಾಲದಲ್ಲಿ ಪನೀರ್ ಇಲ್ಲ ಎಂಬ ಕಾರಣಕ್ಕೆ ದೊಡ್ಡ ರಂಪಾಟ ನಡೆದಿದೆ. ಈ ಜಗಳದ ವಿಡಿಯೋ ಇದೀಗ ವೈರಲ್ ಆಗಿದ್ದು, ಇನ್ನು ಮೂರನೇ ಮಹಾಯುದ್ಧ ಈ ಪನೀರ್ ಕಾರಣದಿಂದಲೇ  ನಡೆಯಬಹುದು ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.

Viral Video: ಪನೀರ್ ಮಟರ್ ಮಸಾಲದಲ್ಲಿ ಪನೀರ್ ಇಲ್ಲ! ಮದುವೆ ಮನೆಯಲ್ಲಿ ಘನಘೋರ ಯುದ್ಧ  
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Dec 20, 2023 | 6:13 PM

Share

ಪನೀರ್ ಮಟರ್ ಮಸಾಲ ಕರಿಯಲ್ಲಿ ಪನೀರ್ ಇಲ್ಲ ಎಂಬ ಕಾರಣಕ್ಕೆ ಯಾರಾದ್ರೂ ಜಗಳ ಮಾಡ್ತಾರಾ? ಅರೇ ಇಷ್ಟು ಸಣ್ಣ ವಿಷ್ಯಕ್ಕೆ ಯಾರು ಜಗಳವಾಡ್ತಾರೆ ಅಂತ ನೀವು ಭಾವಿಸಬಹುದು, ಆದ್ರೆ ಇಲ್ಲೊಂದು ಉತ್ತರ ಭಾರತದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಈ ರೀತಿಯ ಘಟನೆ ನಡೆದಿದೆ. ಹೌದು ಮದುವೆ ಮನೆಯಲ್ಲಿ ಪನೀರ್ ಮಟರ್ ಮಸಾಲದಲ್ಲಿ ಪನೀರ್ ಇರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ  ಮಧು ಮತ್ತು ವರನ ಕುಟುಂಬ ಸದಸ್ಯರ ಮಧ್ಯೆ ಜಗಳ ಏರ್ಪಟ್ಟಿದೆ.  ಈ ಜಗಳದ ವಿಡಿಯೋ ಇದೀಗ ಎಲ್ಲೆಡೆ ವೈರಲ್  ಆಗಿದ್ದು, ಇನ್ನು ಮುಂದಿನ ದಿನಗಳಲ್ಲಿ ಈ ಪನೀರ್ ಕಾರಣದಿಂದಲೇ ಜಗತ್ತಿನಲ್ಲಿ ಮೂರನೇ ಮಹಾಯುದ್ಧ ನಡೆದರೂ ನಡೆಯಬಹುದು ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಈ ವಿಡಿಯೋವನ್ನು @gharkekalesh ಎಂಬ   X ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ʼಪನೀರ್ ಮಟರ್ ಕರಿಯಲ್ಲಿ ಪನೀರ್ ಇಲ್ಲ ಎಂಬ ಕಾರಣಕ್ಕೆ ಮಧು ಮತ್ತು ವರನ ಕಡೆಯವರು ಮದುವೆ ಸಮಯದಲ್ಲಿ ಜಗಳಕ್ಕೆ ನಿಂತಿರುವ ದೃಶ್ಯʼ ಎಂಬ ಶೀರ್ಷಿಕೆಯನ್ನು ಸಹ ಬರೆಯಲಾಗಿದೆ.  ವಿಡಿಯೋದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಯುವಕರ ಗುಂಪೊಂದು ಮದುವೆ ಮನೆಯಲ್ಲಿ ಪರಸ್ಪರ ಕಿತ್ತಾಡುತ್ತಿರುವುದದು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ:

ವಿಡಿಯೋದಲ್ಲಿ ಮದುವೆ ಕಾರ್ಯಕ್ರಮದಲ್ಲಿ  ಪನೀರ್ ಮಟರ್ ಮಸಾಲದಲ್ಲಿ ಪನೀರ್ ಇರಲಿಲ್ಲ ಎಂಬ ಕಾರಣಕ್ಕೆ ಊಟದ ಹಾಲ್ನಲ್ಲಿಯೇ ವರ ಮತ್ತು ವಧುವಿನ ಸಂಬಂಧಿಕರ ನಡುವೆ ದೊಡ್ಡ ರಂಪಾಟವೇ ನಡೆದಿದೆ.   ಯುವಕರ ಗುಂಪೊಂದು ಪರಸ್ಪರ ಕುರ್ಚಿಗಳಲ್ಲಿ ಹೊಡೆದಾಡಿಕೊಂಡು ಜಗಳವಾಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಈ ಮನುಷ್ಯ ಯಾಕಿಷ್ಟು ಕ್ರೂರಿ? ಪಂಜರದಲ್ಲಿ ಬಂಧಿಯಾಗಿದ್ದ ಕಂದನನ್ನು ರಕ್ಷಿಸಲು ತಾಯಿ ಕೋತಿ ಪಟ್ಟ ಪಾಡು ನೋಡಿ 

ಡಿಸೆಂಬರ್ 20 ರಂದು ಹಂಚಿಕೊಳ್ಳಲಾದ ಈ ವಿಡಿಯೋ 26.7K ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಾಗೂ  ಹಲವಾರು ಕಮೆಂಟ್ಸ್ಗಳೂ ಹರಿದುಬಂದಿವೆ.  ಒಬ್ಬ ಬಳಕೆದಾರರು ʼಪನೀರ್ ಇಲ್ಲ ಅಂದ್ರೆ ಮದುವೆ ಕೂಡಾ ಇಲ್ಲʼ ಎಂದು ತಮಾಷೆ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಮೂರನೇ ಮಹಾಯುದ್ಧ ಈ ಪನೀರ್ ಕಾರಣದಿಂದಲೇ ನಡೆಯಬಹುದುʼ ಎಂದು ತಮಾಷೆಯ ಕಮೆಂಟ್ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು  ಪನೀರ್ ಕಾರಣಕ್ಕೂ ಜಗಳವಾಡುವುದುಂಟಾ, ಇದು ತುಂಬಾ ತಮಾಷೆಯಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ:

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ