AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪನೀರ್ ಮಟರ್ ಮಸಾಲದಲ್ಲಿ ಪನೀರ್ ಇಲ್ಲ! ಮದುವೆ ಮನೆಯಲ್ಲಿ ಘನಘೋರ ಯುದ್ಧ  

ಈ ಸಮಾಜದಲ್ಲಿ ಎಂತೆಂತಹ ಕಾರಣಗಳಿಗೆಲ್ಲಾ ಜಗಳಗಳು ನಡೆದಿವೆ, ಯುದ್ಧಗಳು ನಡೆದಿವೆ. ಆದ್ರೆ ಇಲ್ಲೊಂದು ಮದುವೆಯಲ್ಲಿ ಮಾತ್ರ ಪನೀರ್ ಮಟರ್ ಮಸಾಲದಲ್ಲಿ ಪನೀರ್ ಇಲ್ಲ ಎಂಬ ಕಾರಣಕ್ಕೆ ದೊಡ್ಡ ರಂಪಾಟ ನಡೆದಿದೆ. ಈ ಜಗಳದ ವಿಡಿಯೋ ಇದೀಗ ವೈರಲ್ ಆಗಿದ್ದು, ಇನ್ನು ಮೂರನೇ ಮಹಾಯುದ್ಧ ಈ ಪನೀರ್ ಕಾರಣದಿಂದಲೇ  ನಡೆಯಬಹುದು ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.

Viral Video: ಪನೀರ್ ಮಟರ್ ಮಸಾಲದಲ್ಲಿ ಪನೀರ್ ಇಲ್ಲ! ಮದುವೆ ಮನೆಯಲ್ಲಿ ಘನಘೋರ ಯುದ್ಧ  
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Dec 20, 2023 | 6:13 PM

Share

ಪನೀರ್ ಮಟರ್ ಮಸಾಲ ಕರಿಯಲ್ಲಿ ಪನೀರ್ ಇಲ್ಲ ಎಂಬ ಕಾರಣಕ್ಕೆ ಯಾರಾದ್ರೂ ಜಗಳ ಮಾಡ್ತಾರಾ? ಅರೇ ಇಷ್ಟು ಸಣ್ಣ ವಿಷ್ಯಕ್ಕೆ ಯಾರು ಜಗಳವಾಡ್ತಾರೆ ಅಂತ ನೀವು ಭಾವಿಸಬಹುದು, ಆದ್ರೆ ಇಲ್ಲೊಂದು ಉತ್ತರ ಭಾರತದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಈ ರೀತಿಯ ಘಟನೆ ನಡೆದಿದೆ. ಹೌದು ಮದುವೆ ಮನೆಯಲ್ಲಿ ಪನೀರ್ ಮಟರ್ ಮಸಾಲದಲ್ಲಿ ಪನೀರ್ ಇರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ  ಮಧು ಮತ್ತು ವರನ ಕುಟುಂಬ ಸದಸ್ಯರ ಮಧ್ಯೆ ಜಗಳ ಏರ್ಪಟ್ಟಿದೆ.  ಈ ಜಗಳದ ವಿಡಿಯೋ ಇದೀಗ ಎಲ್ಲೆಡೆ ವೈರಲ್  ಆಗಿದ್ದು, ಇನ್ನು ಮುಂದಿನ ದಿನಗಳಲ್ಲಿ ಈ ಪನೀರ್ ಕಾರಣದಿಂದಲೇ ಜಗತ್ತಿನಲ್ಲಿ ಮೂರನೇ ಮಹಾಯುದ್ಧ ನಡೆದರೂ ನಡೆಯಬಹುದು ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಈ ವಿಡಿಯೋವನ್ನು @gharkekalesh ಎಂಬ   X ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ʼಪನೀರ್ ಮಟರ್ ಕರಿಯಲ್ಲಿ ಪನೀರ್ ಇಲ್ಲ ಎಂಬ ಕಾರಣಕ್ಕೆ ಮಧು ಮತ್ತು ವರನ ಕಡೆಯವರು ಮದುವೆ ಸಮಯದಲ್ಲಿ ಜಗಳಕ್ಕೆ ನಿಂತಿರುವ ದೃಶ್ಯʼ ಎಂಬ ಶೀರ್ಷಿಕೆಯನ್ನು ಸಹ ಬರೆಯಲಾಗಿದೆ.  ವಿಡಿಯೋದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಯುವಕರ ಗುಂಪೊಂದು ಮದುವೆ ಮನೆಯಲ್ಲಿ ಪರಸ್ಪರ ಕಿತ್ತಾಡುತ್ತಿರುವುದದು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ:

ವಿಡಿಯೋದಲ್ಲಿ ಮದುವೆ ಕಾರ್ಯಕ್ರಮದಲ್ಲಿ  ಪನೀರ್ ಮಟರ್ ಮಸಾಲದಲ್ಲಿ ಪನೀರ್ ಇರಲಿಲ್ಲ ಎಂಬ ಕಾರಣಕ್ಕೆ ಊಟದ ಹಾಲ್ನಲ್ಲಿಯೇ ವರ ಮತ್ತು ವಧುವಿನ ಸಂಬಂಧಿಕರ ನಡುವೆ ದೊಡ್ಡ ರಂಪಾಟವೇ ನಡೆದಿದೆ.   ಯುವಕರ ಗುಂಪೊಂದು ಪರಸ್ಪರ ಕುರ್ಚಿಗಳಲ್ಲಿ ಹೊಡೆದಾಡಿಕೊಂಡು ಜಗಳವಾಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಈ ಮನುಷ್ಯ ಯಾಕಿಷ್ಟು ಕ್ರೂರಿ? ಪಂಜರದಲ್ಲಿ ಬಂಧಿಯಾಗಿದ್ದ ಕಂದನನ್ನು ರಕ್ಷಿಸಲು ತಾಯಿ ಕೋತಿ ಪಟ್ಟ ಪಾಡು ನೋಡಿ 

ಡಿಸೆಂಬರ್ 20 ರಂದು ಹಂಚಿಕೊಳ್ಳಲಾದ ಈ ವಿಡಿಯೋ 26.7K ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಾಗೂ  ಹಲವಾರು ಕಮೆಂಟ್ಸ್ಗಳೂ ಹರಿದುಬಂದಿವೆ.  ಒಬ್ಬ ಬಳಕೆದಾರರು ʼಪನೀರ್ ಇಲ್ಲ ಅಂದ್ರೆ ಮದುವೆ ಕೂಡಾ ಇಲ್ಲʼ ಎಂದು ತಮಾಷೆ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಮೂರನೇ ಮಹಾಯುದ್ಧ ಈ ಪನೀರ್ ಕಾರಣದಿಂದಲೇ ನಡೆಯಬಹುದುʼ ಎಂದು ತಮಾಷೆಯ ಕಮೆಂಟ್ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು  ಪನೀರ್ ಕಾರಣಕ್ಕೂ ಜಗಳವಾಡುವುದುಂಟಾ, ಇದು ತುಂಬಾ ತಮಾಷೆಯಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ:

ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ