AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಡರ್ ಮಾಡಿದ್ದು ಮಟರ್ ಪನೀರ್, ಪಾರ್ಸೆಲ್​ನಲ್ಲಿ ಬಂದದ್ದು ಚಿಕನ್ ಕರಿ; ಹೊಟೇಲ್​ಗೆ 20,000 ರೂಪಾಯಿ ದಂಡ

ಸಸ್ಯಹಾರಿ ಗ್ರಾಹಕರಿಗೆ ಮಟರ್ ಪನೀರ್ ಬದಲಿಗೆ ಚಿಕನ್ ಕರಿ ವಿತರಿಸಿದ ಗ್ವಾಲಿಯರ್‌ನಲ್ಲಿರುವ ಜಿವಾಜಿ ಕ್ಲಬ್ ಎಂಬ ರೆಸ್ಟೋರೆಂಟ್​ಗೆ 20,000 ರೂಪಾಯಿ ದಂಡ ವಿಧಿಸಲಾಗಿದೆ.

ಆರ್ಡರ್ ಮಾಡಿದ್ದು ಮಟರ್ ಪನೀರ್, ಪಾರ್ಸೆಲ್​ನಲ್ಲಿ ಬಂದದ್ದು ಚಿಕನ್ ಕರಿ; ಹೊಟೇಲ್​ಗೆ 20,000 ರೂಪಾಯಿ ದಂಡ
ಮಟರ್ ಪನೀರ್ ಮತ್ತು ಚಿಕನ್ ಕರಿ
TV9 Web
| Edited By: Rakesh Nayak Manchi|

Updated on: Jul 18, 2022 | 6:54 PM

Share

ಆಹಾರ ವಿತರಣಾ ಅಪ್ಲಿಕೇಶನ್‌ಗಳು ನಮ್ಮ ಜೀವನವನ್ನು ತುಲನಾತ್ಮಕವಾಗಿ ಸುಲಭಗೊಳಿಸಿದರೂ ಕೆಲವೊಮ್ಮೆ ಆಗುವ ತಪ್ಪುಗಳು ಗಂಭೀರವಾಗಿ ಪರಿಣಮಿಸುತ್ತದೆ. ಆರ್ಡರ್ ಮಾಡುವುದು ಒಂದು, ಕೈಗೆ ತಲುಪುದು ಇನ್ನೊಂದು, ಈ ರೀತಿಯ ಘಟನೆಗಳು ಆಗಾಗೆ ನಡೆಯುತ್ತಿರುತ್ತದೆ. ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಇಂತಹದ್ದೇ ಒಂದು ಘಟನೆ ನಡೆದಿದ್ದು, ಪರಿಣಾಮವಾಗಿ ಹೊಟೇಲ್​ಗೆ 20ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಗ್ವಾಲಿಯರ್‌ನಲ್ಲಿರುವ ಜಿವಾಜಿ ಕ್ಲಬ್ ಎಂಬ ರೆಸ್ಟೋರೆಂಟ್​ ಸಸ್ಯಹಾರಿ ಗ್ರಾಹಕರಿಗೆ ಮಟರ್ ಪನೀರ್ ಬದಲಿಗೆ ಚಿಕನ್ ಕರಿ ವಿತರಿಸಿ ತಕ್ಷ ಶಿಕ್ಷೆಯನ್ನು ಅನುಭವಿಸಿದೆ. 

ವಕೀಲ ಸಿದ್ಧಾರ್ಥ್ ಶ್ರೀವಾಸ್ತವ ಎಂಬವರು ಜಿವಾಜಿ ಕ್ಲಬ್ ರೆಸ್ಟೋರೆಂಟ್​ನಿಂದ ಝೋಮ್ಯಾಟೊ ಮೂಲಕ ಮಟರ್ ಪನೀರ್ ಅನ್ನು ಆರ್ಡರ್ ಮಾಡಿದ್ದರು. ಅದರಂತೆ ಆರ್ಡರ್ ಬಂದು ಕೈಸೇರಿದಾಗ ಮಟರ್ ಪನೀರ್ ಬದಲಿಗೆ ಚಿಕನ್ ಕರಿಯನ್ನು ತಪ್ಪಾಗಿ ನೀಡಿರುವುದು ತಿಳಿದುಬಂದಿದೆ. ಇದರಿಂದ ಅಸಮಧಾನಗೊಂಡ ಸಿದ್ಧಾರ್ಥ್, ಗ್ರಾಹಕರ ವೇದಿಕೆಯ ಬಾಗಿಲು ತಟ್ಟಿದರು. ಕ್ಲಬ್‌ನ ಅಧಿಕಾರಿಗಳು ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಸಿದ್ಧಾರ್ಥ್ ಆರೋಪಿಸಿದ್ದು, ಗ್ರಾಹಕರ ವೇದಿಕೆಯಲ್ಲಿ ದೂರು ದಾಖಲಾಗಿದೆ.

ಘಟನೆಯಿಂದ ಕುಟುಂಬಕ್ಕೆ ಮಾನಸಿಕ ಮತ್ತು ದೈಹಿಕವಾಗಿ ತೊಂದರೆಯಾಗಿದೆ ಎಂದು ಹೇಳಿದ ಗ್ರಾಹಕರ ವೇದಿಕೆ, ದೂರುದಾರರು ಕಾನೂನು ಹೋರಾಟದ ಸಂದರ್ಭದಲ್ಲಿ ಮಾಡಿದ ವೆಚ್ಚವನ್ನು ಮರುಪಾವಿತಿಸುವಂತೆ ಸೂಚಿಸಿ 20,000 ರೂ. ದಂಡ ವಿಧಿಸಿ ನಿರ್ದೇಶನ ಹೊರಡಿಸಿದೆ.

ವೇದಿಕೆಯ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಫ್ರೀ ಪ್ರೆಸ್ ಜರ್ನಲ್ ವರದಿ ಮಾಡಿದ್ದು, “ಇದು ಸೇವೆಯ ಕೊರತೆಯಾಗಿದ್ದು, ನಿರ್ಲಕ್ಷ್ಯದ ಪ್ರಕರಣವೂ ಆಗಿದೆ. ದೂರುದಾರರಿಗೆ ಮಾನಸಿಕ ಮತ್ತು ದೈಹಿಕ ತೊಂದರೆಯಾಗಿದ್ದು, ದಂಡದ ಮೊತ್ತದ ಜೊತೆಗೆ ದೂರುದಾರರು ವೇದಿಕೆ ಮೂಲಕ ಮಾಡಿದ ಕಾನೂನು ಹೋರಾಟಕ್ಕೆ ವ್ಯಯಿಸಿದ ವೆಚ್ಚವನ್ನು ಸಹ ಕ್ಲಬ್ ಪಾವತಿಸಬೇಕಾಗುತ್ತದೆ.

Follow Us
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ