AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಡರ್ ಮಾಡಿದ್ದು ಮಟರ್ ಪನೀರ್, ಪಾರ್ಸೆಲ್​ನಲ್ಲಿ ಬಂದದ್ದು ಚಿಕನ್ ಕರಿ; ಹೊಟೇಲ್​ಗೆ 20,000 ರೂಪಾಯಿ ದಂಡ

ಸಸ್ಯಹಾರಿ ಗ್ರಾಹಕರಿಗೆ ಮಟರ್ ಪನೀರ್ ಬದಲಿಗೆ ಚಿಕನ್ ಕರಿ ವಿತರಿಸಿದ ಗ್ವಾಲಿಯರ್‌ನಲ್ಲಿರುವ ಜಿವಾಜಿ ಕ್ಲಬ್ ಎಂಬ ರೆಸ್ಟೋರೆಂಟ್​ಗೆ 20,000 ರೂಪಾಯಿ ದಂಡ ವಿಧಿಸಲಾಗಿದೆ.

ಆರ್ಡರ್ ಮಾಡಿದ್ದು ಮಟರ್ ಪನೀರ್, ಪಾರ್ಸೆಲ್​ನಲ್ಲಿ ಬಂದದ್ದು ಚಿಕನ್ ಕರಿ; ಹೊಟೇಲ್​ಗೆ 20,000 ರೂಪಾಯಿ ದಂಡ
ಮಟರ್ ಪನೀರ್ ಮತ್ತು ಚಿಕನ್ ಕರಿ
TV9 Web
| Edited By: |

Updated on: Jul 18, 2022 | 6:54 PM

Share

ಆಹಾರ ವಿತರಣಾ ಅಪ್ಲಿಕೇಶನ್‌ಗಳು ನಮ್ಮ ಜೀವನವನ್ನು ತುಲನಾತ್ಮಕವಾಗಿ ಸುಲಭಗೊಳಿಸಿದರೂ ಕೆಲವೊಮ್ಮೆ ಆಗುವ ತಪ್ಪುಗಳು ಗಂಭೀರವಾಗಿ ಪರಿಣಮಿಸುತ್ತದೆ. ಆರ್ಡರ್ ಮಾಡುವುದು ಒಂದು, ಕೈಗೆ ತಲುಪುದು ಇನ್ನೊಂದು, ಈ ರೀತಿಯ ಘಟನೆಗಳು ಆಗಾಗೆ ನಡೆಯುತ್ತಿರುತ್ತದೆ. ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಇಂತಹದ್ದೇ ಒಂದು ಘಟನೆ ನಡೆದಿದ್ದು, ಪರಿಣಾಮವಾಗಿ ಹೊಟೇಲ್​ಗೆ 20ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಗ್ವಾಲಿಯರ್‌ನಲ್ಲಿರುವ ಜಿವಾಜಿ ಕ್ಲಬ್ ಎಂಬ ರೆಸ್ಟೋರೆಂಟ್​ ಸಸ್ಯಹಾರಿ ಗ್ರಾಹಕರಿಗೆ ಮಟರ್ ಪನೀರ್ ಬದಲಿಗೆ ಚಿಕನ್ ಕರಿ ವಿತರಿಸಿ ತಕ್ಷ ಶಿಕ್ಷೆಯನ್ನು ಅನುಭವಿಸಿದೆ. 

ವಕೀಲ ಸಿದ್ಧಾರ್ಥ್ ಶ್ರೀವಾಸ್ತವ ಎಂಬವರು ಜಿವಾಜಿ ಕ್ಲಬ್ ರೆಸ್ಟೋರೆಂಟ್​ನಿಂದ ಝೋಮ್ಯಾಟೊ ಮೂಲಕ ಮಟರ್ ಪನೀರ್ ಅನ್ನು ಆರ್ಡರ್ ಮಾಡಿದ್ದರು. ಅದರಂತೆ ಆರ್ಡರ್ ಬಂದು ಕೈಸೇರಿದಾಗ ಮಟರ್ ಪನೀರ್ ಬದಲಿಗೆ ಚಿಕನ್ ಕರಿಯನ್ನು ತಪ್ಪಾಗಿ ನೀಡಿರುವುದು ತಿಳಿದುಬಂದಿದೆ. ಇದರಿಂದ ಅಸಮಧಾನಗೊಂಡ ಸಿದ್ಧಾರ್ಥ್, ಗ್ರಾಹಕರ ವೇದಿಕೆಯ ಬಾಗಿಲು ತಟ್ಟಿದರು. ಕ್ಲಬ್‌ನ ಅಧಿಕಾರಿಗಳು ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಸಿದ್ಧಾರ್ಥ್ ಆರೋಪಿಸಿದ್ದು, ಗ್ರಾಹಕರ ವೇದಿಕೆಯಲ್ಲಿ ದೂರು ದಾಖಲಾಗಿದೆ.

ಘಟನೆಯಿಂದ ಕುಟುಂಬಕ್ಕೆ ಮಾನಸಿಕ ಮತ್ತು ದೈಹಿಕವಾಗಿ ತೊಂದರೆಯಾಗಿದೆ ಎಂದು ಹೇಳಿದ ಗ್ರಾಹಕರ ವೇದಿಕೆ, ದೂರುದಾರರು ಕಾನೂನು ಹೋರಾಟದ ಸಂದರ್ಭದಲ್ಲಿ ಮಾಡಿದ ವೆಚ್ಚವನ್ನು ಮರುಪಾವಿತಿಸುವಂತೆ ಸೂಚಿಸಿ 20,000 ರೂ. ದಂಡ ವಿಧಿಸಿ ನಿರ್ದೇಶನ ಹೊರಡಿಸಿದೆ.

ವೇದಿಕೆಯ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಫ್ರೀ ಪ್ರೆಸ್ ಜರ್ನಲ್ ವರದಿ ಮಾಡಿದ್ದು, “ಇದು ಸೇವೆಯ ಕೊರತೆಯಾಗಿದ್ದು, ನಿರ್ಲಕ್ಷ್ಯದ ಪ್ರಕರಣವೂ ಆಗಿದೆ. ದೂರುದಾರರಿಗೆ ಮಾನಸಿಕ ಮತ್ತು ದೈಹಿಕ ತೊಂದರೆಯಾಗಿದ್ದು, ದಂಡದ ಮೊತ್ತದ ಜೊತೆಗೆ ದೂರುದಾರರು ವೇದಿಕೆ ಮೂಲಕ ಮಾಡಿದ ಕಾನೂನು ಹೋರಾಟಕ್ಕೆ ವ್ಯಯಿಸಿದ ವೆಚ್ಚವನ್ನು ಸಹ ಕ್ಲಬ್ ಪಾವತಿಸಬೇಕಾಗುತ್ತದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್