AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಅಂದು ಅಮೆರಿಕದಿಂದ ಭಾರತದತ್ತ ಪ್ರಯಾಣ; ತನ್ನ ಈ ನಿರ್ಧಾರದ ಬಗ್ಗೆ ಖುಷಿ ವ್ಯಕ್ತಪಡಿಸಿದ ಟೆಕ್ಕಿ

ಕೆಲವರಿಗೆ ವಿದೇಶ ಅಂದ್ರೆ ಅದೇನೋ ವ್ಯಾಮೋಹ. ಕೈ ತುಂಬಾ ಸಂಬಳ ಸಿಗುವ ಉದ್ಯೋಗ ಅರಸುತ್ತ ವಿದೇಶಕ್ಕೆ ತೆರಳುತ್ತಾರೆ. ಆದರೆ, ಅಮೆರಿಕದಲ್ಲಿ ನೆಲೆಸಿದ್ದ ಟೆಕ್ಕಿಯೊಬ್ಬರು ಮೂರು ವರ್ಷಗಳ ಬಳಿಕ ಭಾರತಕ್ಕೆ ಮರಳಿದ್ದಾರೆ. ತನ್ನ ಈ ನಿರ್ಧಾರವು ಸಂಬಳಕ್ಕಿಂತ ಹೆಚ್ಚಿನದನ್ನು ನನಗೆ ನೀಡಿದೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಅಂದು ಅಮೆರಿಕದಿಂದ ಭಾರತದತ್ತ ಪ್ರಯಾಣ; ತನ್ನ ಈ ನಿರ್ಧಾರದ ಬಗ್ಗೆ ಖುಷಿ ವ್ಯಕ್ತಪಡಿಸಿದ ಟೆಕ್ಕಿ
ಸಾಂದರ್ಭಿಕ ಚಿತ್ರImage Credit source: Getty Images
ಸಾಯಿನಂದಾ
|

Updated on: Sep 05, 2026 | 12:43 PM

Share

ಓದು ಮುಗಿಯುತ್ತಿದ್ದಂತೆ ಹೆಚ್ಚಿನವರು ವಿದೇಶದತ್ತ (foreign) ಮುಖ ಮಾಡುತ್ತಾರೆ. ವರ್ಷಗಳು ಉರುಳಿದ್ದಂತೆ ಮತ್ತೆ ತಾಯ್ನಾಡಿಗೆ ಮರಳಬೇಕೆನ್ನುವ ಆಸೆ ಆಗೋದು ಸಹಜ. ಇಲ್ಲೊಬ್ಬರು ಟೆಕ್ಕಿ ಮೂರು ವರ್ಷಗಳ ಹಿಂದೆ ಅಮೆರಿಕದ ಉದ್ಯೋಗ ತೊರೆದು ಭಾರತ ಮರಳಿದ್ದಾರೆ. ಭಾರತಕ್ಕೆ ಬಂದ ನಂತರದ ತನಗಾದ ಅನುಭವದ ಹಂಚಿಕೊಂಡಿದ್ದಾರೆ. ಸದ್ಯಕ್ಕೆ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲೋ ವೈರಲ್ ಆಗಿದೆ.

ಅಮೆರಿಕದಿಂದ ಭಾರತಕ್ಕೆ ಮರಳಿ ಖುಷಿ ವ್ಯಕ್ತಪಡಿಸಿದ ಟೆಕ್ಕಿ

ಉಜ್ವಲ್ ಚಡ್ಡಾ (Ujjwal Chada) ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ಮೈಕ್ರೋಸಾಫ್ಟ್‌ನಲ್ಲಿಉತ್ತಮ ಪ್ಯಾಕೇಜ್‌ನೊಂದಿಗೆ ಕೆಲಸ ಮಾಡುತ್ತಿದ್ದ ನಾನು ಅಮೆರಿಕವನ್ನು ಬಿಟ್ಟು ಭಾರತಕ್ಕೆ ಮರಳಿದೆ. ವಿದೇಶಕ್ಕಿಂತ ಭಾರತದಲ್ಲಿ ಕಡಿಮೆ ಸಂಪಾದಿಸುತ್ತೇನೆ. ನನ್ನ ಸಂಬಳ ನಿಮಗೆ ತೋರಿಸಲು ಸಾಧ್ಯವಾಗದಷ್ಟು ನಾನು ಗಳಿಸಿದ್ದು ಇಲ್ಲಿದೆ ಎಂದು ಬರೆದುಕೊಂಡಿದ್ದಾರೆ.

ವೈರಲ್ ಪೋಸ್ಟ್ ಇಲ್ಲಿದೆ

ಸಂಬಳಕ್ಕಿಂತ ನೆಮ್ಮದಿ ಮುಖ್ಯ ಎಂದ ಟೆಕ್ಕಿ

ಅಮೆರಿಕದಲ್ಲಿ ನೆಲೆಸಿದ್ದಾಗ ವೀಸಾ, ಗ್ರೀನ್ ಕಾರ್ಡ್ ಹಾಗೂ ಕೆಲಸದ ಅಭದ್ರತೆಯ ಬಗ್ಗೆ ಚಿಂತೆ ಕಾಡಿತ್ತು. ಆದರೆ ನನ್ನ ನಿರ್ಧಾರವು ಕೆಲಸ ಮಾಡಲು ಸ್ವಾತಂತ್ರ್ಯ ನೀಡಿದೆ. ಅಮೆರಿಕದಲ್ಲಿ ನೆಲೆಸಿದ್ದಾಗ ವರ್ಷಕ್ಕೆ ಒಮ್ಮೆ ಬಂದು ಒಂದು ವಾರ ಹೆತ್ತವರ ಜತೆಗೆ ಕಳೆಯಬೇಕಾಗಿತ್ತು. ದುಡ್ಡು ಯಾವಾಗ ಬೇಕಾದ್ರು ಮಾಡ್ಬಹುದು. ಆದರೆ ಕಳೆದು ಹೋದ ಸಮಯ ಮತ್ತೆ ಬರಲ್ಲ ಎಂದು ಹೇಳಿದ್ದಾರೆ. ಈ ತಕ್ಷಣವೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿದೆ. ಆದರೆ ಇಲ್ಲಿ ನಾನು ಅಂದುಕೊಂಡಂತೆ ಬದುಕುತ್ತಿದ್ದೇನೆ. ಎಲ್ಲವನ್ನು ಪೂರ್ಣಗೊಳಿಸುತ್ತಿದ್ದೇನೆ. ಸಂಬಳ ಕಡಿಮೆಯಿದ್ರೂ ಮನಸ್ಸಿಗೆ ನೆಮ್ಮದಿ ಬಹಳ ಮುಖ್ಯ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ಸರಿಯಿಲ್ಲ, ವರ್ಕ್ ಫ್ರಮ್ ಹೋಮ್ ಮಾಡ್ತೇನೆ; ಉದ್ಯೋಗಿಯ ಮಾತಿಗೆ ಮ್ಯಾನೇಜರ್ ಏನಂದ್ರು ನೋಡಿ

ಈ ಪೋಸ್ಟ್ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಿಮ್ಮ ಮಾತು ನಿಜ, ಎಲ್ಲೇ ಇರಲಿ ನೆಮ್ಮದಿ ಮುಖ್ಯ ಎಂದಿದ್ದಾರೆ. ಮತ್ತೊಬ್ಬರು, ಕಡಿಮೆ ದುಡಿದ್ರೂ ಹುಟ್ಟೂರಿನಲ್ಲಿ ಇರುವ ಖುಷಿ ಬೇರೆಲ್ಲೂ ಸಿಗಲ್ಲ ಎಂದು ಹೇಳಿದ್ದಾರೆ. ಇನ್ನೊಬ್ಬರು, ನಿಮ್ಮ ನಿರ್ಧಾರ ನಿಮ್ಗೆ ಖುಷಿ ನೀಡಿದರೆ ಸಾಕು ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶ್ರಾವಣ ಶನಿವಾರ: ದೊಡ್ಡಪೇಟೆ ವೆಂಕಟರಮಣಸ್ವಾಮಿ ದೇಗುಲದಲ್ಲಿ ಅದ್ದೂರಿ ಪೂಜೆ
ಶ್ರಾವಣ ಶನಿವಾರ: ದೊಡ್ಡಪೇಟೆ ವೆಂಕಟರಮಣಸ್ವಾಮಿ ದೇಗುಲದಲ್ಲಿ ಅದ್ದೂರಿ ಪೂಜೆ
10 ದಿನಗಳ ಮೊದಲೇ ಬೆಳಗಾವಿಯಲ್ಲಿ ಗಣೇಶೋತ್ಸವದ ಸಂಭ್ರಮ!
10 ದಿನಗಳ ಮೊದಲೇ ಬೆಳಗಾವಿಯಲ್ಲಿ ಗಣೇಶೋತ್ಸವದ ಸಂಭ್ರಮ!
‘ಟಾಕ್ಸಿಕ್’ ಸಿನಿಮಾಗಾಗಿ ಯಶ್ ವರ್ಕೌಟ್ ಎಷ್ಟು ಕಠಿಣವಾಗಿತ್ತು ನೋಡಿ
‘ಟಾಕ್ಸಿಕ್’ ಸಿನಿಮಾಗಾಗಿ ಯಶ್ ವರ್ಕೌಟ್ ಎಷ್ಟು ಕಠಿಣವಾಗಿತ್ತು ನೋಡಿ
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!