AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೀಪ್ ನೋಡಿ ಅಟ್ಟಿಸಿಕೊಂಡು ಬಂದ ದೈತ್ಯ ಘೇಂಡಾಮೃಗ; ವಿಡಿಯೊ ನೋಡಿ

ದೈತ್ಯ ಘೇಂಡಾಮೃಗವು ಜೀಪನ್ನು ಹಿಂಬಾಲಿಸಿಕೊಂಡು ಬಂದಿದೆ. ಈ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವಿಡಿಯೊ ನೋಡಿ.

Viral Video: ಜೀಪ್ ನೋಡಿ ಅಟ್ಟಿಸಿಕೊಂಡು ಬಂದ ದೈತ್ಯ ಘೇಂಡಾಮೃಗ; ವಿಡಿಯೊ ನೋಡಿ
ಘೇಂಡಾಮೃಗ
TV9 Web
| Edited By: |

Updated on:Oct 28, 2021 | 10:01 AM

Share

ಸಾಮಾನ್ಯವಾಗಿ ರಸ್ತೆಯಲ್ಲಿ ಸಾಗುತ್ತಿರುವಾಗ ದೈತ್ಯಾಕಾರದ ಪ್ರಾಣಿಗಳು ಕಂಡರೆ ಭಯವಾಗುವುದು ಸಹಜ. ಇದೀಗ ವೈರಲ್ ಆಗಿರುವ ವಿಡಿಯೊದಲ್ಲಿ ಗಮನಿಸುವಂತೆ ದೈತ್ಯ ಘೇಂಡಾಮೃಗವು ಜೀಪನ್ನು ಹಿಂಬಾಲಿಸಿಕೊಂಡು ಬಂದಿದೆ. ಈ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಕೆಲವುರು ತಮ್ಮ ಅಭಿಪ್ರಾಯವನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದು ನಮ್ಮ ಜೀವವನ್ನು ಕೆಲವು ಬಾರಿ ನಾವೇ ಅಪಾಯಕ್ಕೆ ಸಿಲುಕಿಸಿಕೊಳ್ಳುತ್ತೇವೆ ಎಂದಿದ್ದಾರೆ.

ಕಾಡಿನಲ್ಲಿ ಸಾಗುತ್ತಿದ್ದಾಗ ಜೀಪಿನ ಎದುರು ಘೇಂಡಾಮೃಗವೊಂದು ಬಂದು ನಿಂತಿದೆ. ಆ ಸಮಯದಲ್ಲಿ ಜೀಪಿನ ಚಾಲಕನು ಹಿಂಭಾಗದಿಂದಲೇ ಅಂದರೆ ರಿವರ್ಸ್​ನಲ್ಲಿ ಜೀಪನ್ನು ಓಡಿಸುತ್ತಾ ಸಾಗಿದ್ದಾನೆ. ಎದುರಿನಲ್ಲೇ ಇದ್ದ ಘೆಂಡಾಮೃಗ ಜೀಪನ್ನೇ ಹಿಂಬಾಲಿಸಿಕೊಂಡು ಬಂದಿದೆ. ಜೀಪಿನಲ್ಲಿ ಕುಳಿತಿದ್ದ ಓರ್ವರು ಈ ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

ಜೀಪನ್ನು ವೇಗವಾಗಿ ಓಡಿಸಿದಂತೆಯೇ ಘೇಂಡಾಮೃಗವೂ ಸಹ ವೇಗವಾಗಿ ಓಡಿ ಬಂದಿದೆ. ಕೆಲ ಸಮಯದ ಬಳಿಕ ಕಾಡಿನ ಒಳಕ್ಕೆ ಹೋಗಿದೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೊವನ್ನು ಫೆಸ್ಬುಕ್​ನಲ್ಲಿ ಹಂಚಿಕೊಳ್ಳಲಾಗಿದ್ದು ಕೆಲವರು ಭಯಾನಕ ದೃಶ್ಯವಿದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವಿಡಿಯೊ ನೋಡಿದ ಕೆಲವರು, ಘೇಂಡಾಮೃಗ ತುಂಬಾ ವೇಗದಲ್ಲಿ ಓಡಿ ಬರುತ್ತಿದೆ. ನಿಮ್ಮ ಜೀವದೊಂದಿಗೆ ಆಟವಾಡಿಬೇಡಿ ಎಂದು ಎಚ್ಚರಿಸಿದ್ದಾರೆ. ಹಿಮ್ಮುಖವಾಗಿ ಚಲಿಸುತ್ತಿದ್ದಾಗ ಹಿಂದೆ ಬಂದಿದ್ದ ಆನೆಗೆ ಡಿಕ್ಕಿ ಹೊಡೆದಿದ್ದರೆ ಏನಾಗಿರಬಹುದು ಕಲ್ಪಿಸಿಕೊಳ್ಳಿ? ಎದುರು ಘೇಂಡಾಮೃಗ, ಹಿಂದೆ ಆನೆ! ಎಂದು ಮತ್ತೋರ್ವರು ಹೇಳಿದ್ದಾರೆ.

ಇದನ್ನೂ ಓದಿ:

Viral Video: ಕುಚ್ ಕುಚ್ ಹೋತಾ ಹೈ ಚಿತ್ರದ ಹಾಡಿಗೆ ಅಮ್ಮ, ಅತ್ತೆಯ ಜೊತೆಗೂಡಿ ಸಕತ್ ಸ್ಟೆಪ್ ಹಾಕಿದ ವರ; ವಿಡಿಯೊ ನೋಡಿ

Viral Video: ಹೊಟೆಲ್​ನಲ್ಲಿ ಪಾತ್ರೆ ತೊಳೆದ ಕೋತಿ ನೋಡಿ; ವಿಡಿಯೊ ವೈರಲ್​

Published On - 10:01 am, Thu, 28 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ