AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಏನು ಹುಡುಕಿಕೊಂಡು ಇಲ್ಲಿಗೆ ಬಂದಿತೋ ಈ ಘೇಂಡಾಮೃಗ

Rhino Viral Video : ಇದ್ದಕ್ಕಿದ್ದ ಹಾಗೆ ನಿಮ್ಮ ಬೀದಿಯಲ್ಲಿ ಘೇಂಡಾಮೃಗವೊಂದು ಬಂದರೆ ಹೇಗಿರುತ್ತದೆ? ಕಲ್ಪಿಸಿಕೊಳ್ಳಬೇಡಿ, ವಿಡಿಯೋ ನೋಡಿಬಿಡಿ.

Viral Video: ಏನು ಹುಡುಕಿಕೊಂಡು ಇಲ್ಲಿಗೆ ಬಂದಿತೋ ಈ ಘೇಂಡಾಮೃಗ
ಊರೊಳಗೆ ಬಂದ ಘೇಂಡಾಮೃಗ
TV9 Web
| Edited By: |

Updated on: Aug 08, 2022 | 10:16 AM

Share

Viral Video of Rhino: ಕಾಡು ಬಿಟ್ಟು ನಾಡಿಗೆ ಓಡಿಬಂದ ಘೇಂಡಾಮೃಗದ ವಿಡಿಯೋ ಈಗ ವೈರಲ್ ಆಗಿದೆ. ಈಗಾಗಲೇ ಸಾಕಷ್ಟು ಕಾಡುಪ್ರಾಣಿಗಳ ಅಪರೂಪದ ವಿಡಿಯೋ ಟ್ವಿಟರ್​ಗೆ ಅಪ್​ಲೋಡ್ ಮಾಡಿದ ಐಎಫ್​ಎಸ್ ಅಧಿಕಾರಿ ಸುಸಾಂತ ನಂದಾ ಅವರೇ ಈ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಕೆಲವೊಮ್ಮೆ ಕಾಡುಪ್ರಾಣಿಗಳು ವಿಹರಿಸುತ್ತ ದಾರಿತಪ್ಪಿಬಿಡುತ್ತವೆ. ತಾವಿದ್ದ ಪ್ರದೇಶಗಳಿಗೆ ಮರಳುವಾಗ ಹೀಗೆ ದಿಕ್ಕುತಪ್ಪಿ ನಾಡಿನೊಳಗೆ ಪ್ರವೇಶಿಸುತ್ತವೆ. ಅದಕ್ಕಾಗಿ ಗೊಂದಲಕ್ಕೊಳಗಾಗಬೇಕಿಲ್ಲ. ಅವುಗಳ ಪಾಡಿಗೆ ಅವುಗಳನ್ನು ಬಿಟ್ಟರೆ ದಾರಿ ಹುಡುಕಿಕೊಂಡು ಹೋಗುತ್ತಿರುತ್ತವೆ ಅಥವಾ ಅರಣ್ಯ ಇಲಾಖೆಯವರೇ ಬಂಧಿಸಿ ಮರಳಿ ಕಾಡಿಗೆ ಬಿಡುತ್ತಾರೆ.

ಈ ವಿಡಿಯೋದಲ್ಲಿ ಖಾಲೀ ರಸ್ತೆಯಲ್ಲಿ ಘೇಂಡಾ ಓಡಿಬರುತ್ತಿದ್ದುದನ್ನು ನೋಡಿ ಕಪ್ಪುನಾಯಿಯೊಂದು ಹೆದರಿ ಪಕ್ಕಕ್ಕೆ ಸರಿಯುತ್ತದೆ. ಅದು ಓಡುವ ವೇಗಕ್ಕೆ ಆಟೋನಲ್ಲಿದ್ದ ಡ್ರೈವರ್ ಗಾಬರಿಯಿಂದ ಆಚೆ ಬಂದು ತನ್ನನ್ನು ತಾ ರಕ್ಷಿಸಿಕೊಳ್ಳುವತ್ತ ಧಾವಿಸುತ್ತಾನೆ. ಯಾರಿಗೂ ಇದು ಭಯತರಿಸುವಂಥ ದೃಶ್ಯವೇ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈ ವಿಡಿಯೋ 74, 000 ಕ್ಕೂ ಹೆಚ್ಚು ವೀಕ್ಷಣೆಗೆ ಒಳಪಟ್ಟಿದೆ. ಹಲವಾರು ಮಂದಿ ಘೇಂಡಾಮೃಗ ಸುರಕ್ಷಿತವಾಗಿ ಕಾಡು ತಲುಪಿದರೆ ಸಾಕು ಎಂದು ನೆಟ್ಟಿಗರು ಹಾರೈಸಿದ್ದಾರೆ. ಈ ಘಟನೆಯ ನಂತರ ಸ್ಥಳೀಯವಾಗಿ ಯಾವುದೇ ಅಪಾಯ ಸಂಭವಿಸಿಲ್ಲ ತಾನೆ? ಎಂದೂ ಪ್ರತಿಕ್ರಿಯೆಗಳ ಮೂಲಕ ಕೆಲವರು ವಿಚಾರಿಸಿಕೊಂಡಿದ್ದಾರೆ.

ಇಂಥ ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ