ಮಕ್ಕಳ ನಡವಳಿಕೆಗೆ ನೊಂದು ಸಾಕು ಪ್ರಾಣಿಯ ಹೆಸರಿಗೆ ಕೋಟಿಗಟ್ಟಲೆ ಆಸ್ತಿ ವರ್ಗಾವಣೆ ಮಾಡಿದ ವೃದ್ಧೆ

ಮಕ್ಕಳ ವರ್ತನೆಯಿಂದ ನೊಂದಿದ್ದ ವೃದ್ಧೆ ತನ್ನ ಒಟ್ಟು 23 ಕೋಟಿ ರೂ. ಆಸ್ತಿಯನ್ನು ತಾನು ಮುದ್ದಿನಿಂದ ಸಾಕಿದ್ದ ನಾಯಿ ಮತ್ತು ಬೆಕ್ಕಿನ ಹೆಸರಿಗೆ ಆಸ್ತಿ ವರ್ಗಾವಣೆ ಮಾಡಿದ್ದಾರೆ.

ಮಕ್ಕಳ ನಡವಳಿಕೆಗೆ ನೊಂದು ಸಾಕು ಪ್ರಾಣಿಯ ಹೆಸರಿಗೆ ಕೋಟಿಗಟ್ಟಲೆ ಆಸ್ತಿ ವರ್ಗಾವಣೆ ಮಾಡಿದ ವೃದ್ಧೆ
ಸಾಂದರ್ಭಿಕ ಚಿತ್ರImage Credit source: Pinterest
Follow us
|

Updated on:Jan 26, 2024 | 11:39 AM

ಲಿಯು ಎಂಬ ವಯೋವೃದ್ಧೆ ತನ್ನ ಮಕ್ಕಳಿಗೆ ಪಾಠ ಕಲಿಸಲು ತನ್ನ 23 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಯನ್ನು ತನ್ನ ಸಾಕುನಾಯಿ, ಬೆಕ್ಕಿನ ಹೆಸರಿಗೆ ವರ್ಗಾಯಿಸಿದ್ದಾರೆ. ಈ ಆಘಾತಕಾರಿ ಪ್ರಕರಣ ಚೀನಾದ ಶಾಂಘೈನಲ್ಲಿ ನಡೆದಿದೆ. ಕೆಲ ದಿನಗಳಿಂದ ವೃದ್ಧೆ ಅನಾರೋಗ್ಯದಿಂದ ಬಳುತ್ತಿದ್ದರೂ ಕೂಡ ಆಕೆಯ ಮಕ್ಕಳು ಭೇಟಿಯಾಗಲು ಬಂದಿಲ್ಲ,ಫೋನ್‌ನಲ್ಲಿಯೂ ಮಾತನಾಡಿರಲ್ಲಿಲ್ಲ. ಈ ಕಾರಣದಿಂದ ನೊಂದಿದ್ದ ವೃದ್ಧೆ ತನ್ನ ಒಟ್ಟು 23 ಕೋಟಿ ರೂ. ಆಸ್ತಿಯನ್ನು ತಾನು ಮುದ್ದಿನಿಂದ ಸಾಕಿದ್ದ ನಾಯಿ ಮತ್ತು ಬೆಕ್ಕಿನ ಹೆಸರಿಗೆ ವರ್ಗಾವಣೆ ಮಾಡಿದ್ದಾರೆ.

ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಪ್ರಕಾರ, ಪ್ರಾಣಿಗಳ ಹೆಸರಿನಲ್ಲಿ ಉಯಿಲು ಬಿಡಲು ಚೀನಾದಲ್ಲಿ ಯಾವುದೇ ಕಾನೂನು ಇಲ್ಲ. ಅಂತಹ ಪರಿಸ್ಥಿತಿ ನಿರ್ಮಾಣವಾದರೆ, ಅಧಿಕಾರಿಗಳ ಸಲಹೆಯ ಮೇರೆಗೆ, ಸ್ಥಳೀಯ ಪಶುವೈದ್ಯಕೀಯ ಚಿಕಿತ್ಸಾಲಯಕ್ಕೆ ಆಸ್ತಿ ವರ್ಗಾವಣೆ ಮಾಡಲಾಗುತ್ತದೆ. ಈ ಮೂಲಕ ವೃದ್ಧೆಯ ಮರಣದ ನಂತರ ಆಕೆಯ ಸಾಕುಪ್ರಾಣಿಗಳನ್ನು ಪಶುವೈದ್ಯಕೀಯ ಚಿಕಿತ್ಸಾಲಯ ನೋಡಿಕೊಳ್ಳುವ ಸಂಪೂರ್ಣ ಜವಬ್ದಾರಿಯನ್ನು ತೆಗೆದುಕೊಳ್ಳುತ್ತದೆ.

ಇದನ್ನೂ ಓದಿ: ಡೋಲೋ 650 ಶಶಿರೇಖಾ ಈಗ ಸಿನಿಮಾ ಹೀರೋಯಿನ್​​; ವಿಡಿಯೋ ವೈರಲ್​​

‘ನಾನು ಅನಾರೋಗ್ಯದಿಂದ ಬಳಲುತ್ತಿದ್ದೆ. ನನ್ನ ಯೋಗಕ್ಷೇಮವನ್ನೂ ಕೇಳಲಿಲ್ಲ. ಭೇಟಿಯಾಗಲು ಬರದಿದ್ದರೆ, ಕನಿಷ್ಠ ಫೋನ್‌ನಲ್ಲಿ ಮಾತನಾಡಬಹುದಿತ್ತು. ಆದರೆ ಅದನ್ನೂ ಮಾಡಲಿಲ್ಲ. ಪ್ರತೀ ಕ್ಷಣ ನನಗೆ ಸಂತೋಷ ಕೊಡುವುದು ನಾನು ಸಾಕಿದ ನನ್ನ ನಾಯಿ, ಬೆಕ್ಕು. ಈ ಮೂಕ ಜೀವಿ ಸದಾ ನನ್ನೊಂದಿಗೆ ಇರುತ್ತದೆ. ಆದ್ದರಿಂದ ಸಂಪೂರ್ಣ ಆಸ್ತಿಯನ್ನು ಈ ಮೂಕ ಜೀವಿಯ ಹೆಸರಿಗೆ ವರ್ಗಾವಣೆ ಮಾಡುತ್ತಿದ್ದೇನೆ. ತನ್ನ ನಾಯಿ ,ಬೆಕ್ಕನ್ನು ಸಾಕುವವರಿಗೆ ಈ ಆಸ್ತಿ ಸೇರುತ್ತದೆ ಎಂದು ವಿಲ್​​ನಲ್ಲಿ ಬರೆದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:39 am, Fri, 26 January 24

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ