AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ ರಸ್ತೆ ದಾಟುತ್ತಿರುವಾಗ ಅಡ್ಡ ಬಂದ ಈ ಬೈಕ್, ಮುಂದೇನಾಯಿತು?

Accident : ಈ ಮಹಿಳೆ ಹೀಗೆ ಗಾಡಿ ಓಡಿಸುತ್ತ ಹೋಗುವಾಗ ಬಲಬದಿಯಿಂದ ಆನೆ ರಸ್ತೆ ದಾಟಲು ಹೊರಟಿದೆ. ನಿಯಂತ್ರಣ ತಪ್ಪಿದೆ. ಮುಂದೇನಾಗಿದೆ ನೋಡಿ ವಿಡಿಯೋ.

ಆನೆ ರಸ್ತೆ ದಾಟುತ್ತಿರುವಾಗ ಅಡ್ಡ ಬಂದ ಈ ಬೈಕ್, ಮುಂದೇನಾಯಿತು?
Rider almost hits elephant crossing road
TV9 Web
| Edited By: ಶ್ರೀದೇವಿ ಕಳಸದ|

Updated on:Oct 13, 2022 | 4:19 PM

Share

Viral Video : ಮಹಿಳೆಯೊಬ್ಬರು ಬೈಕ್​ ಸವಾರಿ ಮಾಡುತ್ತಿದ್ದಾರೆ. ಆನೆಯೊಂದು ತನ್ನ ಪಾಡಿಗೆ ತಾನು ರಸ್ತೆ ದಾಟುತ್ತಿದೆ. ಸ್ವಲ್ಪ ನಿಯಂತ್ರಣ ತಪ್ಪಿದ್ದರೆ ಅನಾಹುತವಾಗುತ್ತಿತ್ತು. ಆದರೆ ಆನೆ ಸಾವರಿಸಿಕೊಂಡು ರಸ್ತೆ ದಾಟಿಕೊಂಡಿದೆ. ಬೈಕ್ ಸವಾರಿ ಮಾಡುತ್ತಿರುವ ಮಹಿಳೆಯೂ ಮುಗ್ಗರಿಸದೆ ಪಾರಾಗಿದ್ದಾರೆ. ಬಲಿಷ್ಠ ಮತ್ತು ಚಾಣಾಕ್ಷ ಆನೆ ತಾನೂ ಘಾಸಿಗೊಳಗಾಗದೆ ಮಹಿಳೆಗೂ ಏನೂ ತೊಂದರೆ ಮಾಡದೆ ದಾಟಿದೆ. ಪರಸ್ಪರರ ಜೀವ ಉಳಿದಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಐಎಫ್ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋ 16,000ಕ್ಕಿಂತಲೂ ಹೆಚ್ಚು ಜನರನ್ನು ತಲುಪಿದೆ. ಧುತ್ತನೆ ಹೀಗೆ ಬಲಬದಿಯಿಂದ ಆನೆ ಪ್ರತ್ಯಕ್ಷವಾದಾಗ ಮಹಿಳೆಗೆ ಗಾಡಿ ನಿಯಂತ್ರಿಸುವುದು ಕಷ್ಟವಾಗಿದೆ. ಆದರೂ ಸದ್ಯ ಏನೂ ಅವಘಡ ಸಂಭವಿಸಿಲ್ಲ. ಅಕ್ಕ ಪಕ್ಕ ಅಥವಾ ಮುಂದೆ ಹಿಂದೆ ಯಾವ ಗಾಡಿಗಳೂ ಇಲ್ಲದಿದುದರಿಂದ ಅದೃಷ್ಟವಶಾತ್​ ಈಕೆ ಪಾರಾಗಿದ್ದಾರೆ. ಇನ್ನು ಆನೆ ಬಲವುಳ್ಳ ಪ್ರಾಣಿಯಾಗಿರುವುದರಿಂದ ಅದಕ್ಕೂ ಏನು ಹೆಚ್ಚು ತೊಂದರೆಯಾಗಿರಲಾರದು ಎಂಬ ಊಹೆ.

ಪ್ರತೀ ವರ್ಷ ವನ್ಯಮೃಗಗಳ ವಲಯದಲ್ಲಿ ನೂರಾರು ಅಪಘಾತಗಳು ವಾಹನ ಸಂಚಾರದಿಂದಲೇ ಸಂಭವಿಸುತ್ತಿವೆ. ಹಾಗಾಗಿ ವಾಹನ ಸವಾರರು ನಿಧಾನವಾಗಿ ಸಂಚರಿಸಬೇಕೆಂದು ಅರಣ್ಯ ಇಲಾಖೆ ಆಗಾಗ ಎಚ್ಚರಿಸುತ್ತಲೇ ಇರುತ್ತದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:13 pm, Thu, 13 October 22

Follow Us
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ