AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ ರಸ್ತೆ ದಾಟುತ್ತಿರುವಾಗ ಅಡ್ಡ ಬಂದ ಈ ಬೈಕ್, ಮುಂದೇನಾಯಿತು?

Accident : ಈ ಮಹಿಳೆ ಹೀಗೆ ಗಾಡಿ ಓಡಿಸುತ್ತ ಹೋಗುವಾಗ ಬಲಬದಿಯಿಂದ ಆನೆ ರಸ್ತೆ ದಾಟಲು ಹೊರಟಿದೆ. ನಿಯಂತ್ರಣ ತಪ್ಪಿದೆ. ಮುಂದೇನಾಗಿದೆ ನೋಡಿ ವಿಡಿಯೋ.

ಆನೆ ರಸ್ತೆ ದಾಟುತ್ತಿರುವಾಗ ಅಡ್ಡ ಬಂದ ಈ ಬೈಕ್, ಮುಂದೇನಾಯಿತು?
Rider almost hits elephant crossing road
Follow us
TV9 Web
| Updated By: ಶ್ರೀದೇವಿ ಕಳಸದ

Updated on:Oct 13, 2022 | 4:19 PM

Viral Video : ಮಹಿಳೆಯೊಬ್ಬರು ಬೈಕ್​ ಸವಾರಿ ಮಾಡುತ್ತಿದ್ದಾರೆ. ಆನೆಯೊಂದು ತನ್ನ ಪಾಡಿಗೆ ತಾನು ರಸ್ತೆ ದಾಟುತ್ತಿದೆ. ಸ್ವಲ್ಪ ನಿಯಂತ್ರಣ ತಪ್ಪಿದ್ದರೆ ಅನಾಹುತವಾಗುತ್ತಿತ್ತು. ಆದರೆ ಆನೆ ಸಾವರಿಸಿಕೊಂಡು ರಸ್ತೆ ದಾಟಿಕೊಂಡಿದೆ. ಬೈಕ್ ಸವಾರಿ ಮಾಡುತ್ತಿರುವ ಮಹಿಳೆಯೂ ಮುಗ್ಗರಿಸದೆ ಪಾರಾಗಿದ್ದಾರೆ. ಬಲಿಷ್ಠ ಮತ್ತು ಚಾಣಾಕ್ಷ ಆನೆ ತಾನೂ ಘಾಸಿಗೊಳಗಾಗದೆ ಮಹಿಳೆಗೂ ಏನೂ ತೊಂದರೆ ಮಾಡದೆ ದಾಟಿದೆ. ಪರಸ್ಪರರ ಜೀವ ಉಳಿದಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಐಎಫ್ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋ 16,000ಕ್ಕಿಂತಲೂ ಹೆಚ್ಚು ಜನರನ್ನು ತಲುಪಿದೆ. ಧುತ್ತನೆ ಹೀಗೆ ಬಲಬದಿಯಿಂದ ಆನೆ ಪ್ರತ್ಯಕ್ಷವಾದಾಗ ಮಹಿಳೆಗೆ ಗಾಡಿ ನಿಯಂತ್ರಿಸುವುದು ಕಷ್ಟವಾಗಿದೆ. ಆದರೂ ಸದ್ಯ ಏನೂ ಅವಘಡ ಸಂಭವಿಸಿಲ್ಲ. ಅಕ್ಕ ಪಕ್ಕ ಅಥವಾ ಮುಂದೆ ಹಿಂದೆ ಯಾವ ಗಾಡಿಗಳೂ ಇಲ್ಲದಿದುದರಿಂದ ಅದೃಷ್ಟವಶಾತ್​ ಈಕೆ ಪಾರಾಗಿದ್ದಾರೆ. ಇನ್ನು ಆನೆ ಬಲವುಳ್ಳ ಪ್ರಾಣಿಯಾಗಿರುವುದರಿಂದ ಅದಕ್ಕೂ ಏನು ಹೆಚ್ಚು ತೊಂದರೆಯಾಗಿರಲಾರದು ಎಂಬ ಊಹೆ.

ಪ್ರತೀ ವರ್ಷ ವನ್ಯಮೃಗಗಳ ವಲಯದಲ್ಲಿ ನೂರಾರು ಅಪಘಾತಗಳು ವಾಹನ ಸಂಚಾರದಿಂದಲೇ ಸಂಭವಿಸುತ್ತಿವೆ. ಹಾಗಾಗಿ ವಾಹನ ಸವಾರರು ನಿಧಾನವಾಗಿ ಸಂಚರಿಸಬೇಕೆಂದು ಅರಣ್ಯ ಇಲಾಖೆ ಆಗಾಗ ಎಚ್ಚರಿಸುತ್ತಲೇ ಇರುತ್ತದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:13 pm, Thu, 13 October 22

ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು