AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ ರಸ್ತೆ ದಾಟುತ್ತಿರುವಾಗ ಅಡ್ಡ ಬಂದ ಈ ಬೈಕ್, ಮುಂದೇನಾಯಿತು?

Accident : ಈ ಮಹಿಳೆ ಹೀಗೆ ಗಾಡಿ ಓಡಿಸುತ್ತ ಹೋಗುವಾಗ ಬಲಬದಿಯಿಂದ ಆನೆ ರಸ್ತೆ ದಾಟಲು ಹೊರಟಿದೆ. ನಿಯಂತ್ರಣ ತಪ್ಪಿದೆ. ಮುಂದೇನಾಗಿದೆ ನೋಡಿ ವಿಡಿಯೋ.

ಆನೆ ರಸ್ತೆ ದಾಟುತ್ತಿರುವಾಗ ಅಡ್ಡ ಬಂದ ಈ ಬೈಕ್, ಮುಂದೇನಾಯಿತು?
Rider almost hits elephant crossing road
TV9 Web
| Edited By: ಶ್ರೀದೇವಿ ಕಳಸದ|

Updated on:Oct 13, 2022 | 4:19 PM

Share

Viral Video : ಮಹಿಳೆಯೊಬ್ಬರು ಬೈಕ್​ ಸವಾರಿ ಮಾಡುತ್ತಿದ್ದಾರೆ. ಆನೆಯೊಂದು ತನ್ನ ಪಾಡಿಗೆ ತಾನು ರಸ್ತೆ ದಾಟುತ್ತಿದೆ. ಸ್ವಲ್ಪ ನಿಯಂತ್ರಣ ತಪ್ಪಿದ್ದರೆ ಅನಾಹುತವಾಗುತ್ತಿತ್ತು. ಆದರೆ ಆನೆ ಸಾವರಿಸಿಕೊಂಡು ರಸ್ತೆ ದಾಟಿಕೊಂಡಿದೆ. ಬೈಕ್ ಸವಾರಿ ಮಾಡುತ್ತಿರುವ ಮಹಿಳೆಯೂ ಮುಗ್ಗರಿಸದೆ ಪಾರಾಗಿದ್ದಾರೆ. ಬಲಿಷ್ಠ ಮತ್ತು ಚಾಣಾಕ್ಷ ಆನೆ ತಾನೂ ಘಾಸಿಗೊಳಗಾಗದೆ ಮಹಿಳೆಗೂ ಏನೂ ತೊಂದರೆ ಮಾಡದೆ ದಾಟಿದೆ. ಪರಸ್ಪರರ ಜೀವ ಉಳಿದಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಐಎಫ್ಎಸ್​ ಅಧಿಕಾರಿ ಸುಸಾಂತ ನಂದಾ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋ 16,000ಕ್ಕಿಂತಲೂ ಹೆಚ್ಚು ಜನರನ್ನು ತಲುಪಿದೆ. ಧುತ್ತನೆ ಹೀಗೆ ಬಲಬದಿಯಿಂದ ಆನೆ ಪ್ರತ್ಯಕ್ಷವಾದಾಗ ಮಹಿಳೆಗೆ ಗಾಡಿ ನಿಯಂತ್ರಿಸುವುದು ಕಷ್ಟವಾಗಿದೆ. ಆದರೂ ಸದ್ಯ ಏನೂ ಅವಘಡ ಸಂಭವಿಸಿಲ್ಲ. ಅಕ್ಕ ಪಕ್ಕ ಅಥವಾ ಮುಂದೆ ಹಿಂದೆ ಯಾವ ಗಾಡಿಗಳೂ ಇಲ್ಲದಿದುದರಿಂದ ಅದೃಷ್ಟವಶಾತ್​ ಈಕೆ ಪಾರಾಗಿದ್ದಾರೆ. ಇನ್ನು ಆನೆ ಬಲವುಳ್ಳ ಪ್ರಾಣಿಯಾಗಿರುವುದರಿಂದ ಅದಕ್ಕೂ ಏನು ಹೆಚ್ಚು ತೊಂದರೆಯಾಗಿರಲಾರದು ಎಂಬ ಊಹೆ.

ಪ್ರತೀ ವರ್ಷ ವನ್ಯಮೃಗಗಳ ವಲಯದಲ್ಲಿ ನೂರಾರು ಅಪಘಾತಗಳು ವಾಹನ ಸಂಚಾರದಿಂದಲೇ ಸಂಭವಿಸುತ್ತಿವೆ. ಹಾಗಾಗಿ ವಾಹನ ಸವಾರರು ನಿಧಾನವಾಗಿ ಸಂಚರಿಸಬೇಕೆಂದು ಅರಣ್ಯ ಇಲಾಖೆ ಆಗಾಗ ಎಚ್ಚರಿಸುತ್ತಲೇ ಇರುತ್ತದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:13 pm, Thu, 13 October 22

Follow Us
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್