ಬಿಕಿನಿ ಧರಿಸಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ ಮಹಿಳೆ, ವಿಡಿಯೋ ವೈರಲ್​​

ಋಷಿಕೇಶದ ಪವಿತ್ರ ಗಂಗಾ ನದಿಯಲ್ಲಿ ವಿದೇಶಿ ಮಹಿಳೆಯೊಬ್ಬರು ಬಿಕಿನಿ ಧರಿಸಿ ಸ್ನಾನ ಮಾಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ಕೆಲವರು ಇದನ್ನು ಹಿಂದೂ ಸಂಪ್ರದಾಯಗಳಿಗೆ ಅಗೌರವ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಮಹಿಳೆಗೆ ತಿಳುವಳಿಕೆ ಇಲ್ಲದಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಕಿನಿ ಧರಿಸಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ ಮಹಿಳೆ, ವಿಡಿಯೋ ವೈರಲ್​​
ವೈರಲ್​​ ವಿಡಿಯೋ ಇಲ್ಲಿದೆ ನೋಡಿ

Updated on: Nov 11, 2025 | 1:15 PM

ಋಷಿಕೇಶದ ಲಕ್ಷ್ಮಣ್ ಝೂಲಾ ಬಳಿ ಇರುವ ಪವಿತ್ರ ಗಂಗಾ ನದಿಯಲ್ಲಿ ವಿದೇಶಿ ಮಹಿಳೆಯೊಬ್ಬರು ಬಿಕಿನಿ ಧರಿಸಿ ಸ್ನಾನ ಮಾಡಿದ್ದಾರೆ.ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಕಾರಣವಾಗಿದೆ. ವಿಡಿಯೋದಲ್ಲಿ ಮಹಿಳೆ ಬಿಕಿನಿ ಮತ್ತು ಹೂವಿನ ಹಾರವನ್ನು ಧರಿಸಿ ನದಿಯಲ್ಲಿ ಈಜುವುದನ್ನು ಕಾಣಬಹುದು. ಮಹಿಳೆಯ ವರ್ತನೆಯಿಂದ ಸಂಸ್ಕೃತಿ ಹಾಗೂ ಸಂಪ್ರದಾಯಗಳಿಗೆ ಧಕ್ಕೆಯಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ವಿಡಿಯೋ ಇನ್ಸ್ಟಾಗ್ರಾಮ್​​ನಲ್ಲಿ ವೈರಲ್ಆಗಿದೆ.

ಗಂಗಾ ನದಿಯಲ್ಲಿ ಬಿಕಿನಿ ಹಾಕಿಕೊಂಡು ಸಾನ್ನ ಮಾಡಿರುವುದು ಹಿಂದೂ ಸಂಪ್ರದಾಯಗಳಿಗೆ ಧಕ್ಕೆ ತಂದಿದೆ. ರೀತಿಯ ವರ್ತನೆಗಳಿಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರ್ಮಿಕ ಹಾಗೂ ಪವಿತ್ರ ಸ್ಥಳಗಳಲ್ಲಿ ರೀತಿ ಮಾಡುವುದು ಸರಿಯಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ. ಗಂಗಾ ನದಿ ಜಗತ್ತಿನ ಬೇರೆ ಬೇರೆ ಜನರನ್ನು ಸೆಳೆಯುತ್ತಿದೆ, ಅದರಲ್ಲೂ ಭಾರತೀಯರಿಗೆ ಇದು ಪವಿತ್ರ ನದಿಯಾಗಿದೆ ಎಂದು ಹೇಳಿದ್ದಾರೆ. ವಿದೇಶಿಗರು ತಮಗೆ ಒಪ್ಪಿಗೆ ಆಗುವ ಬಟ್ಟೆಗಳನ್ನು ಧರಿಸುವುದರಲ್ಲಿ ಯಾವ ಸಮಸ್ಯೆಗಳು ಇಲ್ಲ. ಆದರೆ ಧಾರ್ಮಿಕ ಕೇಂದ್ರಗಳಲ್ಲಿ ಕೆಲವೊಂದು ವಿಚಾರಆಚಾರಗಳನ್ನು ಪಾಲಿಸಲೇಬೇಕು ಎಂದು ಸ್ಥಳೀಯರು ಹೇಳಿದ್ದಾರೆ.

ಇದನ್ನೂ ಓದಿ: ಪಾಕ್​​​ ಭಯೋತ್ಪಾದನೆಯಿಂದ ಬೇಸತ್ತು ಭಾರತಕ್ಕೆ ಬಂದ ಮಹಿಳೆಗೆ ಸಿಕ್ತು ಭಾರತೀಯ ಪೌರತ್ವ

ವೈರಲ್ಪೋಸ್ಟ್​​ ಇಲ್ಲಿದೆ ನೋಡಿ:

ನೆಟ್ಟಿಗರು ಹೇಳೋದೇನು?

ಸೋಶಿಯಲ್​​ ಮೀಡಿಯಾದಲ್ಲಿ ನೆಟ್ಟಿಗರು ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆಕೆ ಪರಿಶುದ್ಧವಾಗಿದ್ದು, ನದಿಯನ್ನು ಅಗೌರವಿಸುವ ಉದ್ದೇಶ ಹೊಂದಿಲ್ಲ ಎಂದು ಹೇಳಿದ್ದಾರೆ. ಇನ್ನು ಕೆಲವು ನೆಟ್ಟಿಗರು, ಮಹಿಳೆಗೆ ನಮ್ಮ ಸಂಸ್ಕೃತಿ ಹಾಗೂ ಇಲ್ಲಿ ಯಾವ ಬಟ್ಟೆ ಧರಿಸಬೇಕು ಎಂಬ ತಿಳಿವಳಿಕೆ ಇಲ್ಲದಿರಬಹುದು. ಉದ್ದೇಶಪೂರಕವಾಗಿ ಹೀಗೆ ಮಾಡಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇನ್ನು ಕೆಲವರು ಮಹಿಳೆಯ ಬಟ್ಟೆ ಭಾರತೀಯ ಸಂಪ್ರದಾಯ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಿದೆ. ಗಂಗಾ ಪವಿತ್ರವಾಗಿದ್ದು, ಅಲ್ಲಿಗೆ ಬರುವವರು ಗೌರವದಿಂದ ನಡೆಸಿಕೊಳ್ಳಬೇಕು ಎಂದು ಟೀಕಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us