AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಹೆಬ್ಬಾವುಗಳು ಸಬ್​ಸ್ಟೇಷನ್​ನಲ್ಲಿ ಕೆಲಸ ಹುಡುಕಿಕೊಂಡು ಬಂದಿವೆಯೇ?

Rock Python Rescue: ಇದು ಬಹುಶಃ ಬಿಎಸ್​ಎನ್​ಎಲ್​ ಆಫೀಸಿರಬೇಕು ಎಂದಿದ್ದಾರೆ ನೆಟ್ಟಿಗರು. ಸಬ್​ಸ್ಟೇಷನ್​ನಲ್ಲಿ ಅಡಗಿದ್ದ ಈ ಹಾವುಗಳನ್ನು ಮುರಾರಿ ಲಾಲ್​ ಎನ್ನುವ ವನ್ಯಪ್ರಾಣಿ ರಕ್ಷಕರು ರಕ್ಷಿಸಿದ್ದಾರೆ. ಇವರ ಈ ಅದ್ಭುತ ಕಾರ್ಯವನ್ನು ನೆಟ್ಟಿಗರು ಮನಸಾರೆ ಶ್ಲಾಘಿಸುತ್ತಿದ್ದಾರೆ. ಹಾಗೆಯೇ ನಿಮ್ಮ ಜೀವವೂ ಅಮೂಲ್ಯ, ಆದಷ್ಟು ಜೋಪಾನವಾಗಿರಿ ಎಂದು ಮುರಾರಿಯವರಿಗೆ ಎಚ್ಚರಿಸುತ್ತಿದ್ದಾರೆ.

Viral Video: ಈ ಹೆಬ್ಬಾವುಗಳು ಸಬ್​ಸ್ಟೇಷನ್​ನಲ್ಲಿ ಕೆಲಸ ಹುಡುಕಿಕೊಂಡು ಬಂದಿವೆಯೇ?
ಹೆಬ್ಬಾವುಗಳನ್ನು ರಕ್ಷಿಸುತ್ತಿರುವ ಮುರಾರಿ ಲಾಲ್
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on: Sep 29, 2023 | 11:31 AM

Share

Python: ಸಬ್‌ಸ್ಟೇಷನ್‌ನೊಳಗೆ ಎರಡು ದೊಡ್ಡ ಹೆಬ್ಬಾವುಗಳು (Rock Python) ಕಾಣಿಸಿಕೊಂಡಿದೆ. ವಿದ್ಯುತ್ ತಂತಿಗಳೊಳಗೆ ಸಿಕ್ಕಿಹಾಕಿಕೊಂಡಿದ್ದ ಈ ಹೆಬ್ಬಾವುಗಳನ್ನು ಧೈರ್ಯಶಾಲಿಯೊಬ್ಬರ ಸೂಕ್ತ ಮಾರ್ಗದರ್ಶನದಲ್ಲಿ ತಂಡವೊಂದು ಕಾರ್ಯಾಚರಣೆಯ ಮೂಲಕ ರಕ್ಷಿಸಿದೆ. ಒಂದು ಹೆಬ್ಬಾವು ಸಬ್​ಸ್ಟೇಷನ್​ನ ವಿದ್ಯುತ್​ ತಂತಿಗಳ ಮೇಲೆ ಇತ್ತು. ಇನ್ನೊಂದು ಲೈವ್​ ವೈರ್​​ಗಳೊಳಗೆ ಇತ್ತು. ವಿದ್ಯುತ್ ತಂತಿಗಳಿಂದ ಹಾವುಗಳು ಅಪಾಯಕ್ಕೆ ಈಡಾಗುವ ಮೊದಲೇ ರಕ್ಷಣಾ ತಂಡವು ಇವುಗಳನ್ನು ರಕ್ಷಿಸಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು,  ನೆಟ್ಟಿಗರು ರಕ್ಷಣಾ ತಂಡವನ್ನು ಶ್ಲಾಘಿಸುತ್ತಿದ್ದಾರೆ.

ಇದನ್ನೂ ಓದಿ : Viral Video: ವಾಟ್​ ಝುಮ್ಕಾ; ಜೋಡಿಯ ಜಬರ್​ದಸ್ತ್ ನೃತ್ಯ, ಪವರ್​ ಪ್ಯಾಕ್ಡ್ ಡ್ಯಾನ್ಸ್​​ ಎಂದ ನೆಟ್ಟಿಗರು

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಪ್ರಾಣಿ ರಕ್ಷಕ ಮತ್ತು ಸಾಮಾಜಿಕ ಕಾರ್ಯಕರ್ತ ಮುರಾರಿ ಲಾಲ್ ಈ ಹಾವನ್ನು ರಕ್ಷಿಸಿದ್ದಾರೆ. ಈ ಸಮಯದಲ್ಲಿ ಒಂದು ಹೆಬ್ಬಾವು ಇವರ ಹೆಬ್ಬೆರಳು ಕಚ್ಚಿರುವುದನ್ನು ನೋಡಬಹುದು. ಈ ವಿಡಿಯೋ ನೋಡಿದ ನೆಟ್ಟಿಗರು, ಇದು ಅದ್ಭುತವಾದ ಕಾರ್ಯ. ಆದರೆ ಜೀವಕ್ಕೆ ಅಪಾಯ ತಂದುಕೊಳ್ಳಬೇಡಿ ಎಂದಿದ್ದಾರೆ.

ಹೆಬ್ಬಾವುಗಳ ಕಾರ್ಯಾಚರಣೆ

ಈ ವಿಡಿಯೋ ಅನ್ನು ಈತನಕ ಸುಮಾರು 7 ಮಿಲಿಯನ್​ ಜನರು ನೋಡಿದ್ದಾರೆ. 5.8 ಲಕ್ಷ ಜನರು ಲೈಕ್ ಮಾಡಿದ್ದಾರೆ. ನಿಮ್ಮ ಈ ಪ್ರಾಣಿಪ್ರೇಮವನ್ನು ಹೊಗಳಲು ಶಬ್ದಗಳೇ ಹೊಮ್ಮುತ್ತಿಲ್ಲ. ನಿಜಕ್ಕೂ ಇದು ಅದ್ಭುತವಾದ ಕಾರ್ಯಾಚರಣೆ ಎಂದಿದ್ದಾರೆ ಅನೇಕರು. ಈ ಕೆಲಸವನ್ನು ಎಲ್ಲರೂ ಮಾಡಲು ಸಾಧ್ಯವಿಲ್ಲ. ಧೈರ್ಯಶಾಲಿಗಳು ಮಾತ್ರ ಇದನ್ನು ನಿಭಾಯಿಸಲು ಸಾಧ್ಯ ಎಂದಿದ್ದಾರೆ ಒಬ್ಬರು. ಜಾಗ್ರತೆಯಿಂದ ಇಂಥ ಕೆಲಸಗಳಲ್ಲಿ ತೊಡಗಿಕೊಳ್ಳಿ, ನಿಮ್ಮ ಜೀವವೂ ಅಮೂಲ್ಯ ಎಂದಿದ್ದಾರೆ ಕೆಲವರು.

ಇದನ್ನೂ ಓದಿ : Viral Video: ಉತ್ತರ ಪ್ರದೇಶ; ಮಥುರಾ ರೈಲು ಹಳಿಬಿಟ್ಟು ಪ್ಲ್ಯಾಟ್​ಫಾರ್ಮ್​ ಏರಿದ್ದಕ್ಕೆ ಕಾರಣ ಇಲ್ಲಿದೆ

ಇದು ಬಿಎಸ್​​ಎನ್​ಲ್​ ಆಫೀಸಿರಬೇಕು ಎಂದಿದ್ದಾರೆ ಕೆಲವರು. ಯಾಕೆ ನೀವು ಹೊಸ ಉದ್ಯೋಗಿಗಳಿಗೆ ಕೆಲಸದಿಂದ ತೆಗೆಯುತ್ತಿದ್ದೀರಿ ಎಂದು ಕೇಳಿದ್ದಾರೆ ಒಬ್ಬರು. ಅವರು ರಿಪೇರಿ ಮಾಡಿದ ಮೇಲೆ ನೀವು ಅವರಿಗೆ ಸಂಬಳ ಕೊಡದೇ ಹಾಗೆ ಹೊರಹಾಕುವುದು ಸರಿಯೇ? ಎಂದಿದ್ದಾರೆ ಇನ್ನೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು