AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಟ್ರಕ್ಕೊಂದರಿಂದ ನೇತಾಡುತ್ತಿದ್ದ ಹಗ್ಗ ಬೈಕ್ ಸವಾರನ ಕುತ್ತಿಗೆಗೆ ಸುತ್ತಿಕೊಂಡು ನೆಲಕ್ಕೆ ಬೀಳಿಸಿದರೂ ಸವಾರ ಅಪಾಯದಿಂದ ಪಾರು!

ಮುತ್ತು ನೆಲಕ್ಕೆ ಬಿದ್ದಿದ್ದನ್ನು ಗಮನಿಸಿದ ಸುತ್ತಮುತ್ತಲಿನ ಜನ ಅವನ ನೆರವಿಗೆ ಧಾವಿಸಿದ್ದಾರೆ. ಏನು ನಡೆಯಿತು ಅಂತ ಅರ್ಥಮಾಡಿಕೊಳ್ಳಲು ಮುತ್ತುಗೆ ಒಂದೆರಡು ನಿಮಿಷ ಬೇಕಾಗಿದೆ.

ಚಲಿಸುತ್ತಿದ್ದ ಟ್ರಕ್ಕೊಂದರಿಂದ ನೇತಾಡುತ್ತಿದ್ದ ಹಗ್ಗ ಬೈಕ್ ಸವಾರನ ಕುತ್ತಿಗೆಗೆ ಸುತ್ತಿಕೊಂಡು ನೆಲಕ್ಕೆ ಬೀಳಿಸಿದರೂ ಸವಾರ ಅಪಾಯದಿಂದ ಪಾರು!
ಅಪಘಾತ ದೃಶ್ಯ- ಸಿಸಿಟಿವಿ ಫುಟೇಜ್ ಸ್ಕ್ರೀನ್ ಗ್ರ್ಯಾಬ್
TV9 Web
| Edited By: |

Updated on: Dec 15, 2022 | 12:51 PM

Share

ವೇಗವಾಗಿ ಚಲಿಸುತ್ತಿದ್ದ ಟ್ರಕ್ಕೊಂದರಿಂದ ನೇತಾಡುತ್ತಿದ್ದ ಹಗ್ಗ (rope) ದ್ವಿಚಕ್ರ ವಾಹನ ಸವಾರನ ಕುತ್ತಿಗೆಗೆ ಸುತ್ತಿ ಅವನನ್ನು ದೊಪ್ಪನೆ ಹಿಂಬದಿಗೆ ಬೀಳಿಸಿದ ಒಂದು ಆಕಸ್ಮಿಕ ಅಪಘಾತ ತಮಿಳುನಾಡು ರಾಜ್ಯದ ತೂತ್ತುಕುಡಿಯಲ್ಲಿ (Thoothukudi) ಸಂಭವಿಸಿದೆ. ಅಪಘಾತದ ಪೂರ್ತಿ ಸನ್ನಿವೇಶ ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿದೆ. ಬೈಕ್ ಸವಾರ ಪವಾಡಸದೃಶ (miraculously) ರೀತಿಯಲ್ಲಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.

ತೂತ್ತುಕುಡಿ ಜಿಲ್ಲೆಯ ಸಿವೈಕುಂಟಂ ಪಟ್ಟಣದ ಮುತ್ತು ಎಂದು ಗುರುತಿಸಲಾಗಿರುವ ಮುತ್ತು ದಿನನಿತ್ಯದಂತೆ ಕೆಲಸಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಎರಳ್ ಪ್ರದೇಶವನ್ನು ದಾಟಿತ್ತಿದ್ದಾಗ ಹಗ್ಗ ಅವನ ಕುತ್ತಿಗೆಗೆ ಬಿದ್ದಿದೆ.

ಮುತ್ತು ನೆಲಕ್ಕೆ ಬಿದ್ದಿದ್ದನ್ನು ಗಮನಿಸಿದ ಸುತ್ತಮುತ್ತಲಿನ ಜನ ಅವನ ನೆರವಿಗೆ ಧಾವಿಸಿದ್ದಾರೆ. ಏನು ನಡೆಯಿತು ಅಂತ ಅರ್ಥಮಾಡಿಕೊಳ್ಳಲು ಮುತ್ತುಗೆ ಒಂದೆರಡು ನಿಮಿಷ ಬೇಕಾಗಿದೆ.

ಅಸಲಿಗೆ ಸಿಸಿಟಿವಿ ಫುಟೇಜ್ ನೋಡಿದ ನಂತರವೇ ಏನು ಸಂಭವಿಸಿತು ಅನ್ನೋದು ಗೊತ್ತಾಗಿದೆ. ಮುತ್ತು ಎರಳ್ ಪ್ರದೇಶವನ್ನು ದಾಟುವಾಗ ಅವನ ಎದುರಿನಿಂದ ರಸಗೊಬ್ಬರ ಲೋಡ್ ಆಗಿದ್ದ ಟ್ರಕ್ ಬಂದಿದೆ. ಮೂಟೆಗಳನ್ನು ಲೋಡ್ ಮಾಡಲು ಬಳಸುವ ಹಗ್ಗವೊಂದು ಕಿತ್ತುಕೊಂಡು ಲಾರಿಯ ಬಲಭಾಗದಲ್ಲಿ ನೇತಾಡುತ್ತಿದೆ. ಗಾಳಿಯಲ್ಲಿ ತೂರಾಡುತ್ತಿದ್ದ ಅದು ಲಾರಿಯ ಸಮೀಪದಿಂದ ಪಾಸ್ ಆಗುತ್ತಿದ್ದ ಮುತ್ತುನ ಕುತ್ತಿಗೆಯನ್ನು ಸುತ್ತಿಕೊಂಡು ಅವನು ಸಾಗುತ್ತಿದ್ದ ವಿರುದ್ಧ ದಿಕ್ಕಿಗೆ ಎಳೆದಿದೆ. ಅವನು ಬೈಕ್ ಮೇಲಿಂದ ಗಾಳಿಯಲ್ಲಿ ಹಾರಿ ನೆಲಕ್ಕೆ ಬಿದ್ದಿದ್ದಾನೆ.

ಜನ ಮುತ್ತುನ ಸಹಾಯಕ್ಕೆ ಓಡಿ ಅವನ ಕುತ್ತಿಗೆಗೆ ಹಗ್ಗ ಸುತ್ತಿಕೊಂಡಿರದಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಅವನು ಚಿಕ್ಕಪುಟ್ಟ ಗಾಯಗಳಿಂದ ಪಾರಾಗಿದ್ದಾನೆ. ಎರಳ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ