AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಟ್ರಕ್ಕೊಂದರಿಂದ ನೇತಾಡುತ್ತಿದ್ದ ಹಗ್ಗ ಬೈಕ್ ಸವಾರನ ಕುತ್ತಿಗೆಗೆ ಸುತ್ತಿಕೊಂಡು ನೆಲಕ್ಕೆ ಬೀಳಿಸಿದರೂ ಸವಾರ ಅಪಾಯದಿಂದ ಪಾರು!

ಮುತ್ತು ನೆಲಕ್ಕೆ ಬಿದ್ದಿದ್ದನ್ನು ಗಮನಿಸಿದ ಸುತ್ತಮುತ್ತಲಿನ ಜನ ಅವನ ನೆರವಿಗೆ ಧಾವಿಸಿದ್ದಾರೆ. ಏನು ನಡೆಯಿತು ಅಂತ ಅರ್ಥಮಾಡಿಕೊಳ್ಳಲು ಮುತ್ತುಗೆ ಒಂದೆರಡು ನಿಮಿಷ ಬೇಕಾಗಿದೆ.

ಚಲಿಸುತ್ತಿದ್ದ ಟ್ರಕ್ಕೊಂದರಿಂದ ನೇತಾಡುತ್ತಿದ್ದ ಹಗ್ಗ ಬೈಕ್ ಸವಾರನ ಕುತ್ತಿಗೆಗೆ ಸುತ್ತಿಕೊಂಡು ನೆಲಕ್ಕೆ ಬೀಳಿಸಿದರೂ ಸವಾರ ಅಪಾಯದಿಂದ ಪಾರು!
ಅಪಘಾತ ದೃಶ್ಯ- ಸಿಸಿಟಿವಿ ಫುಟೇಜ್ ಸ್ಕ್ರೀನ್ ಗ್ರ್ಯಾಬ್
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Dec 15, 2022 | 12:51 PM

ವೇಗವಾಗಿ ಚಲಿಸುತ್ತಿದ್ದ ಟ್ರಕ್ಕೊಂದರಿಂದ ನೇತಾಡುತ್ತಿದ್ದ ಹಗ್ಗ (rope) ದ್ವಿಚಕ್ರ ವಾಹನ ಸವಾರನ ಕುತ್ತಿಗೆಗೆ ಸುತ್ತಿ ಅವನನ್ನು ದೊಪ್ಪನೆ ಹಿಂಬದಿಗೆ ಬೀಳಿಸಿದ ಒಂದು ಆಕಸ್ಮಿಕ ಅಪಘಾತ ತಮಿಳುನಾಡು ರಾಜ್ಯದ ತೂತ್ತುಕುಡಿಯಲ್ಲಿ (Thoothukudi) ಸಂಭವಿಸಿದೆ. ಅಪಘಾತದ ಪೂರ್ತಿ ಸನ್ನಿವೇಶ ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿದೆ. ಬೈಕ್ ಸವಾರ ಪವಾಡಸದೃಶ (miraculously) ರೀತಿಯಲ್ಲಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.

ತೂತ್ತುಕುಡಿ ಜಿಲ್ಲೆಯ ಸಿವೈಕುಂಟಂ ಪಟ್ಟಣದ ಮುತ್ತು ಎಂದು ಗುರುತಿಸಲಾಗಿರುವ ಮುತ್ತು ದಿನನಿತ್ಯದಂತೆ ಕೆಲಸಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಎರಳ್ ಪ್ರದೇಶವನ್ನು ದಾಟಿತ್ತಿದ್ದಾಗ ಹಗ್ಗ ಅವನ ಕುತ್ತಿಗೆಗೆ ಬಿದ್ದಿದೆ.

ಮುತ್ತು ನೆಲಕ್ಕೆ ಬಿದ್ದಿದ್ದನ್ನು ಗಮನಿಸಿದ ಸುತ್ತಮುತ್ತಲಿನ ಜನ ಅವನ ನೆರವಿಗೆ ಧಾವಿಸಿದ್ದಾರೆ. ಏನು ನಡೆಯಿತು ಅಂತ ಅರ್ಥಮಾಡಿಕೊಳ್ಳಲು ಮುತ್ತುಗೆ ಒಂದೆರಡು ನಿಮಿಷ ಬೇಕಾಗಿದೆ.

ಅಸಲಿಗೆ ಸಿಸಿಟಿವಿ ಫುಟೇಜ್ ನೋಡಿದ ನಂತರವೇ ಏನು ಸಂಭವಿಸಿತು ಅನ್ನೋದು ಗೊತ್ತಾಗಿದೆ. ಮುತ್ತು ಎರಳ್ ಪ್ರದೇಶವನ್ನು ದಾಟುವಾಗ ಅವನ ಎದುರಿನಿಂದ ರಸಗೊಬ್ಬರ ಲೋಡ್ ಆಗಿದ್ದ ಟ್ರಕ್ ಬಂದಿದೆ. ಮೂಟೆಗಳನ್ನು ಲೋಡ್ ಮಾಡಲು ಬಳಸುವ ಹಗ್ಗವೊಂದು ಕಿತ್ತುಕೊಂಡು ಲಾರಿಯ ಬಲಭಾಗದಲ್ಲಿ ನೇತಾಡುತ್ತಿದೆ. ಗಾಳಿಯಲ್ಲಿ ತೂರಾಡುತ್ತಿದ್ದ ಅದು ಲಾರಿಯ ಸಮೀಪದಿಂದ ಪಾಸ್ ಆಗುತ್ತಿದ್ದ ಮುತ್ತುನ ಕುತ್ತಿಗೆಯನ್ನು ಸುತ್ತಿಕೊಂಡು ಅವನು ಸಾಗುತ್ತಿದ್ದ ವಿರುದ್ಧ ದಿಕ್ಕಿಗೆ ಎಳೆದಿದೆ. ಅವನು ಬೈಕ್ ಮೇಲಿಂದ ಗಾಳಿಯಲ್ಲಿ ಹಾರಿ ನೆಲಕ್ಕೆ ಬಿದ್ದಿದ್ದಾನೆ.

ಜನ ಮುತ್ತುನ ಸಹಾಯಕ್ಕೆ ಓಡಿ ಅವನ ಕುತ್ತಿಗೆಗೆ ಹಗ್ಗ ಸುತ್ತಿಕೊಂಡಿರದಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಅವನು ಚಿಕ್ಕಪುಟ್ಟ ಗಾಯಗಳಿಂದ ಪಾರಾಗಿದ್ದಾನೆ. ಎರಳ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​