AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕ್ಷಣ! ರೈಲುಪಾಲಾಗಿಬಿಡುತ್ತಿದ್ದಳು ಹುಡುಗಿ, ಸದ್ಯ ಆರ್​ಪಿಎಫ್​ ಸಿಬ್ಬಂದಿ ರಕ್ಷಿಸಿದರು

Kerala : ಕೇರಳದ ತಿರೂರು ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಅಕಸ್ಮಾತ್ ಅಲ್ಲಿ ಯಾರೂ ಇರದಿದ್ದಲ್ಲಿ ಈಕೆ ಖಂಡಿತ ರೈಲಿನ ಗಾಲಿಗೆ ಸಿಲುಕಿಕೊಳ್ಳುತ್ತಿದ್ದಳು. ಆರ್​ಪಿಎಫ್​ ಹೆಡ್​ ಕಾನ್ಸ್​ಟೇಬಲ್​ಗೆ ನೆಟ್ಟಿಗರು ಧನ್ಯವಾದ ಹೇಳುತ್ತಿದ್ದಾರೆ.

ಒಂದೇ ಕ್ಷಣ! ರೈಲುಪಾಲಾಗಿಬಿಡುತ್ತಿದ್ದಳು ಹುಡುಗಿ, ಸದ್ಯ ಆರ್​ಪಿಎಫ್​ ಸಿಬ್ಬಂದಿ ರಕ್ಷಿಸಿದರು
RPF officers quick thinking helps to save a girls life in Kerala
TV9 Web
| Edited By: ಶ್ರೀದೇವಿ ಕಳಸದ|

Updated on: Nov 12, 2022 | 5:03 PM

Share

Viral Video : ಚಲಿಸುತ್ತಿರುವ ರೈಲನ್ನು ಏರಲು ಹೋಗುತ್ತಿದ್ದ ಈ ಅಪ್ರಾಪ್ತೆ ಪ್ಲ್ಯಾಟ್​ಫಾರ್ಮ್​ನ ತುದಿಗೆ  ಬಿದ್ದಿದ್ದಾಳೆ. ಅಲ್ಲಿಯೇ ನಿಂತಿದ್ದ ರೈಲ್ವೆ ರಕ್ಷಣಾ ಪಡೆಯ ಹೆಡ್​ ಕಾನ್​ಸ್ಟೇಬಲ್​ ಒಬ್ಬರು ಎಚ್ಚೆತ್ತುಕೊಂಡು ತಕ್ಷಣವೇ ಅವಳನ್ನು ರಕ್ಷಿಸಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಈ ಘಟನೆ ನಡೆದಿರುವುದು ಕೇರಳದಲ್ಲಿ. ಈ ವಿಡಿಯೋ ಅನ್ನು RPF India ದ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಈ ಹುಡುಗಿ ಚಲಿಸುತ್ತಿರುವ ರೈಲನ್ನು ಏರಲು ಹೋದಾಗ ನಿಯಂತ್ರಣವನ್ನು ಕಳೆದುಕೊಂಡಿದ್ದಾಳೆ. ತಕ್ಷಣವೇ ಹೆಡ್​ಕಾನ್ಸ್​ಟೇಬಲ್​ ಅವಳೆಡೆ ಧಾವಿಸದೇ ಇದ್ದಲ್ಲಿ ಆಕೆ ರೈಲುಪಾಲಾಗುವ ಸಾಧ್ಯತೆ ಖಂಡಿತ ಇತ್ತು. ಅದೃಷ್ಟವಶಾತ್ ಆಕೆ ಬದುಕುಳಿದಿದ್ದಾಳೆ. ‘ಹೆಡ್​ ಕಾನ್ಸ್​ಟೇಬಲ್​ ಸತೀಶ್​ ತುಂಬಾ ತ್ವರಿತವಾಗಿ ಇವಳನ್ನು ರಕ್ಷಿಸಿದ್ದಾರೆ. ರೈಲಿನ ಚಕ್ರಗಳಿಗೆ ಪಾಲಾಗದಂತೆ ರಕ್ಷಿಸಿದ್ದಾರೆ’ ಎಂದು ವಿಡಿಯೋಗೆ ಒಕ್ಕಣೆ ಬರೆಯಲಾಗಿದೆ.

ಕೇರಳದ ತಿರೂರು ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಈ ತನಕ 3,500ಕ್ಕೂ ಹೆಚ್ಚು ಜನರು ವಿಡಿಯೋ ನೋಡಿದ್ದಾರೆ. ಅನೇಕರು ರಕ್ಷಣಾ ಕಾರ್ಯವನ್ನು ಶ್ಲಾಘಿಸಿದ್ದಾರೆ. ‘ರೈಲು ನಿಲ್ದಾಣವನ್ನು ರೈಲು ಪ್ರವೇಶಿಸುತ್ತಿರುವಾಗ ಆರ್​ಪಿಎಫ್​ನವರು ಯಾಕೆ ಹೀಗೆ ಸೂಕ್ಷ್ಮವಾಗಿ ಗಮನಿಸುತ್ತಾರೆ, ರೈಲಿನ ಹತ್ತಿರ ಬಂದು ನಿಲ್ಲುತ್ತಾರೆ ಎನ್ನುವುದು ನನಗೀಗ ಅರ್ಥವಾಯಿತು’ ಎಂದಿದ್ದಾರೆ ಒಬ್ಬರು. ‘ಸದ್ಯ ಬದುಕಿದಳು ಆ ಹುಡುಗಿ. ರಕ್ಷಿಸಿದವರಿಗೆ ಧನ್ಯವಾದ’ ಎಂದಿದ್ದಾರೆ ಇನ್ನೊಬ್ಬರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು