AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕ್ಷಣ! ರೈಲುಪಾಲಾಗಿಬಿಡುತ್ತಿದ್ದಳು ಹುಡುಗಿ, ಸದ್ಯ ಆರ್​ಪಿಎಫ್​ ಸಿಬ್ಬಂದಿ ರಕ್ಷಿಸಿದರು

Kerala : ಕೇರಳದ ತಿರೂರು ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಅಕಸ್ಮಾತ್ ಅಲ್ಲಿ ಯಾರೂ ಇರದಿದ್ದಲ್ಲಿ ಈಕೆ ಖಂಡಿತ ರೈಲಿನ ಗಾಲಿಗೆ ಸಿಲುಕಿಕೊಳ್ಳುತ್ತಿದ್ದಳು. ಆರ್​ಪಿಎಫ್​ ಹೆಡ್​ ಕಾನ್ಸ್​ಟೇಬಲ್​ಗೆ ನೆಟ್ಟಿಗರು ಧನ್ಯವಾದ ಹೇಳುತ್ತಿದ್ದಾರೆ.

ಒಂದೇ ಕ್ಷಣ! ರೈಲುಪಾಲಾಗಿಬಿಡುತ್ತಿದ್ದಳು ಹುಡುಗಿ, ಸದ್ಯ ಆರ್​ಪಿಎಫ್​ ಸಿಬ್ಬಂದಿ ರಕ್ಷಿಸಿದರು
RPF officers quick thinking helps to save a girls life in Kerala
TV9 Web
| Edited By: |

Updated on: Nov 12, 2022 | 5:03 PM

Share

Viral Video : ಚಲಿಸುತ್ತಿರುವ ರೈಲನ್ನು ಏರಲು ಹೋಗುತ್ತಿದ್ದ ಈ ಅಪ್ರಾಪ್ತೆ ಪ್ಲ್ಯಾಟ್​ಫಾರ್ಮ್​ನ ತುದಿಗೆ  ಬಿದ್ದಿದ್ದಾಳೆ. ಅಲ್ಲಿಯೇ ನಿಂತಿದ್ದ ರೈಲ್ವೆ ರಕ್ಷಣಾ ಪಡೆಯ ಹೆಡ್​ ಕಾನ್​ಸ್ಟೇಬಲ್​ ಒಬ್ಬರು ಎಚ್ಚೆತ್ತುಕೊಂಡು ತಕ್ಷಣವೇ ಅವಳನ್ನು ರಕ್ಷಿಸಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಈ ಘಟನೆ ನಡೆದಿರುವುದು ಕೇರಳದಲ್ಲಿ. ಈ ವಿಡಿಯೋ ಅನ್ನು RPF India ದ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಈ ಹುಡುಗಿ ಚಲಿಸುತ್ತಿರುವ ರೈಲನ್ನು ಏರಲು ಹೋದಾಗ ನಿಯಂತ್ರಣವನ್ನು ಕಳೆದುಕೊಂಡಿದ್ದಾಳೆ. ತಕ್ಷಣವೇ ಹೆಡ್​ಕಾನ್ಸ್​ಟೇಬಲ್​ ಅವಳೆಡೆ ಧಾವಿಸದೇ ಇದ್ದಲ್ಲಿ ಆಕೆ ರೈಲುಪಾಲಾಗುವ ಸಾಧ್ಯತೆ ಖಂಡಿತ ಇತ್ತು. ಅದೃಷ್ಟವಶಾತ್ ಆಕೆ ಬದುಕುಳಿದಿದ್ದಾಳೆ. ‘ಹೆಡ್​ ಕಾನ್ಸ್​ಟೇಬಲ್​ ಸತೀಶ್​ ತುಂಬಾ ತ್ವರಿತವಾಗಿ ಇವಳನ್ನು ರಕ್ಷಿಸಿದ್ದಾರೆ. ರೈಲಿನ ಚಕ್ರಗಳಿಗೆ ಪಾಲಾಗದಂತೆ ರಕ್ಷಿಸಿದ್ದಾರೆ’ ಎಂದು ವಿಡಿಯೋಗೆ ಒಕ್ಕಣೆ ಬರೆಯಲಾಗಿದೆ.

ಕೇರಳದ ತಿರೂರು ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಈ ತನಕ 3,500ಕ್ಕೂ ಹೆಚ್ಚು ಜನರು ವಿಡಿಯೋ ನೋಡಿದ್ದಾರೆ. ಅನೇಕರು ರಕ್ಷಣಾ ಕಾರ್ಯವನ್ನು ಶ್ಲಾಘಿಸಿದ್ದಾರೆ. ‘ರೈಲು ನಿಲ್ದಾಣವನ್ನು ರೈಲು ಪ್ರವೇಶಿಸುತ್ತಿರುವಾಗ ಆರ್​ಪಿಎಫ್​ನವರು ಯಾಕೆ ಹೀಗೆ ಸೂಕ್ಷ್ಮವಾಗಿ ಗಮನಿಸುತ್ತಾರೆ, ರೈಲಿನ ಹತ್ತಿರ ಬಂದು ನಿಲ್ಲುತ್ತಾರೆ ಎನ್ನುವುದು ನನಗೀಗ ಅರ್ಥವಾಯಿತು’ ಎಂದಿದ್ದಾರೆ ಒಬ್ಬರು. ‘ಸದ್ಯ ಬದುಕಿದಳು ಆ ಹುಡುಗಿ. ರಕ್ಷಿಸಿದವರಿಗೆ ಧನ್ಯವಾದ’ ಎಂದಿದ್ದಾರೆ ಇನ್ನೊಬ್ಬರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ