AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕ್ಷಣ! ರೈಲುಪಾಲಾಗಿಬಿಡುತ್ತಿದ್ದಳು ಹುಡುಗಿ, ಸದ್ಯ ಆರ್​ಪಿಎಫ್​ ಸಿಬ್ಬಂದಿ ರಕ್ಷಿಸಿದರು

Kerala : ಕೇರಳದ ತಿರೂರು ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಅಕಸ್ಮಾತ್ ಅಲ್ಲಿ ಯಾರೂ ಇರದಿದ್ದಲ್ಲಿ ಈಕೆ ಖಂಡಿತ ರೈಲಿನ ಗಾಲಿಗೆ ಸಿಲುಕಿಕೊಳ್ಳುತ್ತಿದ್ದಳು. ಆರ್​ಪಿಎಫ್​ ಹೆಡ್​ ಕಾನ್ಸ್​ಟೇಬಲ್​ಗೆ ನೆಟ್ಟಿಗರು ಧನ್ಯವಾದ ಹೇಳುತ್ತಿದ್ದಾರೆ.

ಒಂದೇ ಕ್ಷಣ! ರೈಲುಪಾಲಾಗಿಬಿಡುತ್ತಿದ್ದಳು ಹುಡುಗಿ, ಸದ್ಯ ಆರ್​ಪಿಎಫ್​ ಸಿಬ್ಬಂದಿ ರಕ್ಷಿಸಿದರು
RPF officers quick thinking helps to save a girls life in Kerala
TV9 Web
| Edited By: |

Updated on: Nov 12, 2022 | 5:03 PM

Share

Viral Video : ಚಲಿಸುತ್ತಿರುವ ರೈಲನ್ನು ಏರಲು ಹೋಗುತ್ತಿದ್ದ ಈ ಅಪ್ರಾಪ್ತೆ ಪ್ಲ್ಯಾಟ್​ಫಾರ್ಮ್​ನ ತುದಿಗೆ  ಬಿದ್ದಿದ್ದಾಳೆ. ಅಲ್ಲಿಯೇ ನಿಂತಿದ್ದ ರೈಲ್ವೆ ರಕ್ಷಣಾ ಪಡೆಯ ಹೆಡ್​ ಕಾನ್​ಸ್ಟೇಬಲ್​ ಒಬ್ಬರು ಎಚ್ಚೆತ್ತುಕೊಂಡು ತಕ್ಷಣವೇ ಅವಳನ್ನು ರಕ್ಷಿಸಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಈ ಘಟನೆ ನಡೆದಿರುವುದು ಕೇರಳದಲ್ಲಿ. ಈ ವಿಡಿಯೋ ಅನ್ನು RPF India ದ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಈ ಹುಡುಗಿ ಚಲಿಸುತ್ತಿರುವ ರೈಲನ್ನು ಏರಲು ಹೋದಾಗ ನಿಯಂತ್ರಣವನ್ನು ಕಳೆದುಕೊಂಡಿದ್ದಾಳೆ. ತಕ್ಷಣವೇ ಹೆಡ್​ಕಾನ್ಸ್​ಟೇಬಲ್​ ಅವಳೆಡೆ ಧಾವಿಸದೇ ಇದ್ದಲ್ಲಿ ಆಕೆ ರೈಲುಪಾಲಾಗುವ ಸಾಧ್ಯತೆ ಖಂಡಿತ ಇತ್ತು. ಅದೃಷ್ಟವಶಾತ್ ಆಕೆ ಬದುಕುಳಿದಿದ್ದಾಳೆ. ‘ಹೆಡ್​ ಕಾನ್ಸ್​ಟೇಬಲ್​ ಸತೀಶ್​ ತುಂಬಾ ತ್ವರಿತವಾಗಿ ಇವಳನ್ನು ರಕ್ಷಿಸಿದ್ದಾರೆ. ರೈಲಿನ ಚಕ್ರಗಳಿಗೆ ಪಾಲಾಗದಂತೆ ರಕ್ಷಿಸಿದ್ದಾರೆ’ ಎಂದು ವಿಡಿಯೋಗೆ ಒಕ್ಕಣೆ ಬರೆಯಲಾಗಿದೆ.

ಕೇರಳದ ತಿರೂರು ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಈ ತನಕ 3,500ಕ್ಕೂ ಹೆಚ್ಚು ಜನರು ವಿಡಿಯೋ ನೋಡಿದ್ದಾರೆ. ಅನೇಕರು ರಕ್ಷಣಾ ಕಾರ್ಯವನ್ನು ಶ್ಲಾಘಿಸಿದ್ದಾರೆ. ‘ರೈಲು ನಿಲ್ದಾಣವನ್ನು ರೈಲು ಪ್ರವೇಶಿಸುತ್ತಿರುವಾಗ ಆರ್​ಪಿಎಫ್​ನವರು ಯಾಕೆ ಹೀಗೆ ಸೂಕ್ಷ್ಮವಾಗಿ ಗಮನಿಸುತ್ತಾರೆ, ರೈಲಿನ ಹತ್ತಿರ ಬಂದು ನಿಲ್ಲುತ್ತಾರೆ ಎನ್ನುವುದು ನನಗೀಗ ಅರ್ಥವಾಯಿತು’ ಎಂದಿದ್ದಾರೆ ಒಬ್ಬರು. ‘ಸದ್ಯ ಬದುಕಿದಳು ಆ ಹುಡುಗಿ. ರಕ್ಷಿಸಿದವರಿಗೆ ಧನ್ಯವಾದ’ ಎಂದಿದ್ದಾರೆ ಇನ್ನೊಬ್ಬರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್