AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ ಮೇಲಿನ ಯುದ್ಧ ಖಂಡಿಸಿ ನೇರ ಪ್ರಸಾರದಲ್ಲಿ ರಾಜೀನಾಮೆ ನೀಡಿದ ರಷ್ಯಾದ ಟಿವಿ ಚಾನೆಲ್​ ಸಿಬ್ಬಂದಿ ವರ್ಗ: ಪ್ರಸಾರ ಸ್ಥಗಿತ

ರಷ್ಯಾದ ಟಿವಿ ಚಾನೆಲ್​ವೊಂದರ ಸಿಬ್ಬಂದಿ ವರ್ಗ ನೇರಪ್ರಸಾರದಲ್ಲಿ ಉಕ್ರೇನ್​ ಮೇಲೆ ಯುದ್ಧವನ್ನು ನಿಲ್ಲಿಸಿ ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ.

ಉಕ್ರೇನ್​ ಮೇಲಿನ ಯುದ್ಧ ಖಂಡಿಸಿ ನೇರ ಪ್ರಸಾರದಲ್ಲಿ ರಾಜೀನಾಮೆ ನೀಡಿದ ರಷ್ಯಾದ ಟಿವಿ ಚಾನೆಲ್​ ಸಿಬ್ಬಂದಿ ವರ್ಗ: ಪ್ರಸಾರ ಸ್ಥಗಿತ
ನೇರಪ್ರಸಾರದಲ್ಲಿ ರಾಜೀನಾಮೆ ನೀಡಿದ ಸಿಬ್ಬಂದಿ
TV9 Web
| Edited By: |

Updated on:Mar 05, 2022 | 9:50 AM

Share

ಉಕ್ರೇನ್​  ಮೇಲೆ ರಷ್ಯಾ ಯುದ್ಧವನ್ನು (Ukraine- Russia War) ಮುಂದುವರೆಸಿದೆ. ಸತತ 10ನೇ ದಿನಕ್ಕೆ ಯುದ್ಧ ಕಾಲಿರಿಸಿದೆ. ಈ ನಡುವೆ ರಷ್ಯಾದ ಟಿವಿ ಚಾನೆಲ್​ವೊಂದರ ಸಿಬ್ಬಂದಿ ವರ್ಗ ನೇರಪ್ರಸಾರದಲ್ಲಿ ಉಕ್ರೇನ್​ ಮೇಲೆ ಯುದ್ಧ ಬೇಡ ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ. ರಷ್ಯಾದ ಟಿವಿ ರೇನ್ (TV Rain)​ ಎನ್ನುವ ಚಾನೆಲ್​ ನ ಸಿಬ್ಬಂದಿ ನೇರಪ್ರಸಾರದಲ್ಲಿ ರಾಜೀನಾಮೆ ನೀಡಿದ ನಂತರ ಮಾಧ್ಯಮ ಪ್ರಸಾರವನ್ನು ಸ್ಥಗಿತಗೊಳಿಸಲಾಗಿದೆ.  ಸಿಬ್ಬಂದಿ ಸ್ಟುಡಿಯೋದಿಂದ ಹೊರ ಹೊರಟ ನಂತರ ಸ್ವಾನ್​ ಲೇಕ್ (Swan Lake)​ ಬಾಲೆಟ್​ ಎನ್ನುವ ವಿಡಿಯೋವನ್ನು ಪ್ರಸಾರ ಮಾಡಲಾಗಿದೆ. ಈ ವಿಡಿಯೋವನ್ನು 1991 ರಲ್ಲಿ ಸೋವಿಯತ್ ಯೂನಿಯನ್ ಪತನವಾದಾಗ ರಷ್ಯಾದಲ್ಲಿ ಸರ್ಕಾರಿ ಟಿವಿ ಚಾನೆಲ್‌ಗಳಲ್ಲಿ ತೋರಿಸಲಾಗಿತ್ತು. ಇದೀಗ ಉಕ್ರೇನ್​ ವಿರುದ್ಧದ ಯುದ್ಧವನ್ನು ಖಂಡಿಸಿ, ವಿಡಿಯೋ ಪ್ರಸಾರ ಮಾಡಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಜಗತ್ತಿನಾದ್ಯಂತ ವಿಡಿಯೋ ನೋಡಿದವರು ಅಚ್ಚರಿಗೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಚಾನೆಲ್​ನ ಸಿಇಒ ಈ ರೀತಿಯ ಯುದ್ಧವನ್ನು ನೋಡಿದ ಬಳಿಕ ಕೆಲಸ ಮಾಡಲು  ಶಕ್ತಿ ಬೇಕು ಅದನ್ನು ಮತ್ತೆ ಪಡೆದುಕೊಳ್ಳಬೇಕಿದೆ. ಮುಂದಿನ ದಿನಗಳಲ್ಲಿ ಕೆಲಸಕ್ಕೆ ವಾಪಸ್ಸಾಗುವ ಭರವಸೆಯಿದೆ ಎಂದಿದ್ದಾರೆ. ಅದಕ್ಕೂ ಮೊದಲು, ಉಕ್ರೇನ್‌ನಲ್ಲಿನ ಯುದ್ಧದ ಕವರೇಜ್‌ನ ಮಾಡುವಂತೆ ಸರ್ಕಾರದ ಒತ್ತಡ ಹೇರಿದ ಕಾರಣ ರಷ್ಯಾದ ಮತ್ತೊಂದು  ಮಾಧ್ಯಮ ಔಟ್‌ಲೆಟ್, ಎಖೋ ಮಾಸ್ಕ್ವಿ ರೇಡಿಯೊ ಸ್ಟೇಷನ್ ಅನ್ನು ಮಂಗಳವಾರ ಪ್ರಸಾರ ಮಾಡಲಾಗಿತ್ತು.

ಇದನ್ನೂ ಓದಿ:

Ukraine Crisis: 9,000 ರಷ್ಯನ್ ಸೈನಿಕರನ್ನು ಕೊಂದಿರುವುದಾಗಿ ಹೇಳಿಕೊಂಡ ಉಕ್ರೇನ್; ಬೆಳವಣಿಗೆಯ 10 ಮುಖ್ಯಾಂಶಗಳು ಇಲ್ಲಿವೆ

Published On - 9:44 am, Sat, 5 March 22

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ