AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ ಮೇಲಿನ ಯುದ್ಧ ಖಂಡಿಸಿ ನೇರ ಪ್ರಸಾರದಲ್ಲಿ ರಾಜೀನಾಮೆ ನೀಡಿದ ರಷ್ಯಾದ ಟಿವಿ ಚಾನೆಲ್​ ಸಿಬ್ಬಂದಿ ವರ್ಗ: ಪ್ರಸಾರ ಸ್ಥಗಿತ

ರಷ್ಯಾದ ಟಿವಿ ಚಾನೆಲ್​ವೊಂದರ ಸಿಬ್ಬಂದಿ ವರ್ಗ ನೇರಪ್ರಸಾರದಲ್ಲಿ ಉಕ್ರೇನ್​ ಮೇಲೆ ಯುದ್ಧವನ್ನು ನಿಲ್ಲಿಸಿ ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ.

ಉಕ್ರೇನ್​ ಮೇಲಿನ ಯುದ್ಧ ಖಂಡಿಸಿ ನೇರ ಪ್ರಸಾರದಲ್ಲಿ ರಾಜೀನಾಮೆ ನೀಡಿದ ರಷ್ಯಾದ ಟಿವಿ ಚಾನೆಲ್​ ಸಿಬ್ಬಂದಿ ವರ್ಗ: ಪ್ರಸಾರ ಸ್ಥಗಿತ
ನೇರಪ್ರಸಾರದಲ್ಲಿ ರಾಜೀನಾಮೆ ನೀಡಿದ ಸಿಬ್ಬಂದಿ
TV9 Web
| Updated By: Pavitra Bhat Jigalemane|

Updated on:Mar 05, 2022 | 9:50 AM

Share

ಉಕ್ರೇನ್​  ಮೇಲೆ ರಷ್ಯಾ ಯುದ್ಧವನ್ನು (Ukraine- Russia War) ಮುಂದುವರೆಸಿದೆ. ಸತತ 10ನೇ ದಿನಕ್ಕೆ ಯುದ್ಧ ಕಾಲಿರಿಸಿದೆ. ಈ ನಡುವೆ ರಷ್ಯಾದ ಟಿವಿ ಚಾನೆಲ್​ವೊಂದರ ಸಿಬ್ಬಂದಿ ವರ್ಗ ನೇರಪ್ರಸಾರದಲ್ಲಿ ಉಕ್ರೇನ್​ ಮೇಲೆ ಯುದ್ಧ ಬೇಡ ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ. ರಷ್ಯಾದ ಟಿವಿ ರೇನ್ (TV Rain)​ ಎನ್ನುವ ಚಾನೆಲ್​ ನ ಸಿಬ್ಬಂದಿ ನೇರಪ್ರಸಾರದಲ್ಲಿ ರಾಜೀನಾಮೆ ನೀಡಿದ ನಂತರ ಮಾಧ್ಯಮ ಪ್ರಸಾರವನ್ನು ಸ್ಥಗಿತಗೊಳಿಸಲಾಗಿದೆ.  ಸಿಬ್ಬಂದಿ ಸ್ಟುಡಿಯೋದಿಂದ ಹೊರ ಹೊರಟ ನಂತರ ಸ್ವಾನ್​ ಲೇಕ್ (Swan Lake)​ ಬಾಲೆಟ್​ ಎನ್ನುವ ವಿಡಿಯೋವನ್ನು ಪ್ರಸಾರ ಮಾಡಲಾಗಿದೆ. ಈ ವಿಡಿಯೋವನ್ನು 1991 ರಲ್ಲಿ ಸೋವಿಯತ್ ಯೂನಿಯನ್ ಪತನವಾದಾಗ ರಷ್ಯಾದಲ್ಲಿ ಸರ್ಕಾರಿ ಟಿವಿ ಚಾನೆಲ್‌ಗಳಲ್ಲಿ ತೋರಿಸಲಾಗಿತ್ತು. ಇದೀಗ ಉಕ್ರೇನ್​ ವಿರುದ್ಧದ ಯುದ್ಧವನ್ನು ಖಂಡಿಸಿ, ವಿಡಿಯೋ ಪ್ರಸಾರ ಮಾಡಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಜಗತ್ತಿನಾದ್ಯಂತ ವಿಡಿಯೋ ನೋಡಿದವರು ಅಚ್ಚರಿಗೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಚಾನೆಲ್​ನ ಸಿಇಒ ಈ ರೀತಿಯ ಯುದ್ಧವನ್ನು ನೋಡಿದ ಬಳಿಕ ಕೆಲಸ ಮಾಡಲು  ಶಕ್ತಿ ಬೇಕು ಅದನ್ನು ಮತ್ತೆ ಪಡೆದುಕೊಳ್ಳಬೇಕಿದೆ. ಮುಂದಿನ ದಿನಗಳಲ್ಲಿ ಕೆಲಸಕ್ಕೆ ವಾಪಸ್ಸಾಗುವ ಭರವಸೆಯಿದೆ ಎಂದಿದ್ದಾರೆ. ಅದಕ್ಕೂ ಮೊದಲು, ಉಕ್ರೇನ್‌ನಲ್ಲಿನ ಯುದ್ಧದ ಕವರೇಜ್‌ನ ಮಾಡುವಂತೆ ಸರ್ಕಾರದ ಒತ್ತಡ ಹೇರಿದ ಕಾರಣ ರಷ್ಯಾದ ಮತ್ತೊಂದು  ಮಾಧ್ಯಮ ಔಟ್‌ಲೆಟ್, ಎಖೋ ಮಾಸ್ಕ್ವಿ ರೇಡಿಯೊ ಸ್ಟೇಷನ್ ಅನ್ನು ಮಂಗಳವಾರ ಪ್ರಸಾರ ಮಾಡಲಾಗಿತ್ತು.

ಇದನ್ನೂ ಓದಿ:

Ukraine Crisis: 9,000 ರಷ್ಯನ್ ಸೈನಿಕರನ್ನು ಕೊಂದಿರುವುದಾಗಿ ಹೇಳಿಕೊಂಡ ಉಕ್ರೇನ್; ಬೆಳವಣಿಗೆಯ 10 ಮುಖ್ಯಾಂಶಗಳು ಇಲ್ಲಿವೆ

Published On - 9:44 am, Sat, 5 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?