AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ ಮೇಲಿನ ಯುದ್ಧ ಖಂಡಿಸಿ ನೇರ ಪ್ರಸಾರದಲ್ಲಿ ರಾಜೀನಾಮೆ ನೀಡಿದ ರಷ್ಯಾದ ಟಿವಿ ಚಾನೆಲ್​ ಸಿಬ್ಬಂದಿ ವರ್ಗ: ಪ್ರಸಾರ ಸ್ಥಗಿತ

ರಷ್ಯಾದ ಟಿವಿ ಚಾನೆಲ್​ವೊಂದರ ಸಿಬ್ಬಂದಿ ವರ್ಗ ನೇರಪ್ರಸಾರದಲ್ಲಿ ಉಕ್ರೇನ್​ ಮೇಲೆ ಯುದ್ಧವನ್ನು ನಿಲ್ಲಿಸಿ ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ.

ಉಕ್ರೇನ್​ ಮೇಲಿನ ಯುದ್ಧ ಖಂಡಿಸಿ ನೇರ ಪ್ರಸಾರದಲ್ಲಿ ರಾಜೀನಾಮೆ ನೀಡಿದ ರಷ್ಯಾದ ಟಿವಿ ಚಾನೆಲ್​ ಸಿಬ್ಬಂದಿ ವರ್ಗ: ಪ್ರಸಾರ ಸ್ಥಗಿತ
ನೇರಪ್ರಸಾರದಲ್ಲಿ ರಾಜೀನಾಮೆ ನೀಡಿದ ಸಿಬ್ಬಂದಿ
TV9 Web
| Edited By: |

Updated on:Mar 05, 2022 | 9:50 AM

Share

ಉಕ್ರೇನ್​  ಮೇಲೆ ರಷ್ಯಾ ಯುದ್ಧವನ್ನು (Ukraine- Russia War) ಮುಂದುವರೆಸಿದೆ. ಸತತ 10ನೇ ದಿನಕ್ಕೆ ಯುದ್ಧ ಕಾಲಿರಿಸಿದೆ. ಈ ನಡುವೆ ರಷ್ಯಾದ ಟಿವಿ ಚಾನೆಲ್​ವೊಂದರ ಸಿಬ್ಬಂದಿ ವರ್ಗ ನೇರಪ್ರಸಾರದಲ್ಲಿ ಉಕ್ರೇನ್​ ಮೇಲೆ ಯುದ್ಧ ಬೇಡ ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ. ರಷ್ಯಾದ ಟಿವಿ ರೇನ್ (TV Rain)​ ಎನ್ನುವ ಚಾನೆಲ್​ ನ ಸಿಬ್ಬಂದಿ ನೇರಪ್ರಸಾರದಲ್ಲಿ ರಾಜೀನಾಮೆ ನೀಡಿದ ನಂತರ ಮಾಧ್ಯಮ ಪ್ರಸಾರವನ್ನು ಸ್ಥಗಿತಗೊಳಿಸಲಾಗಿದೆ.  ಸಿಬ್ಬಂದಿ ಸ್ಟುಡಿಯೋದಿಂದ ಹೊರ ಹೊರಟ ನಂತರ ಸ್ವಾನ್​ ಲೇಕ್ (Swan Lake)​ ಬಾಲೆಟ್​ ಎನ್ನುವ ವಿಡಿಯೋವನ್ನು ಪ್ರಸಾರ ಮಾಡಲಾಗಿದೆ. ಈ ವಿಡಿಯೋವನ್ನು 1991 ರಲ್ಲಿ ಸೋವಿಯತ್ ಯೂನಿಯನ್ ಪತನವಾದಾಗ ರಷ್ಯಾದಲ್ಲಿ ಸರ್ಕಾರಿ ಟಿವಿ ಚಾನೆಲ್‌ಗಳಲ್ಲಿ ತೋರಿಸಲಾಗಿತ್ತು. ಇದೀಗ ಉಕ್ರೇನ್​ ವಿರುದ್ಧದ ಯುದ್ಧವನ್ನು ಖಂಡಿಸಿ, ವಿಡಿಯೋ ಪ್ರಸಾರ ಮಾಡಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಜಗತ್ತಿನಾದ್ಯಂತ ವಿಡಿಯೋ ನೋಡಿದವರು ಅಚ್ಚರಿಗೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಚಾನೆಲ್​ನ ಸಿಇಒ ಈ ರೀತಿಯ ಯುದ್ಧವನ್ನು ನೋಡಿದ ಬಳಿಕ ಕೆಲಸ ಮಾಡಲು  ಶಕ್ತಿ ಬೇಕು ಅದನ್ನು ಮತ್ತೆ ಪಡೆದುಕೊಳ್ಳಬೇಕಿದೆ. ಮುಂದಿನ ದಿನಗಳಲ್ಲಿ ಕೆಲಸಕ್ಕೆ ವಾಪಸ್ಸಾಗುವ ಭರವಸೆಯಿದೆ ಎಂದಿದ್ದಾರೆ. ಅದಕ್ಕೂ ಮೊದಲು, ಉಕ್ರೇನ್‌ನಲ್ಲಿನ ಯುದ್ಧದ ಕವರೇಜ್‌ನ ಮಾಡುವಂತೆ ಸರ್ಕಾರದ ಒತ್ತಡ ಹೇರಿದ ಕಾರಣ ರಷ್ಯಾದ ಮತ್ತೊಂದು  ಮಾಧ್ಯಮ ಔಟ್‌ಲೆಟ್, ಎಖೋ ಮಾಸ್ಕ್ವಿ ರೇಡಿಯೊ ಸ್ಟೇಷನ್ ಅನ್ನು ಮಂಗಳವಾರ ಪ್ರಸಾರ ಮಾಡಲಾಗಿತ್ತು.

ಇದನ್ನೂ ಓದಿ:

Ukraine Crisis: 9,000 ರಷ್ಯನ್ ಸೈನಿಕರನ್ನು ಕೊಂದಿರುವುದಾಗಿ ಹೇಳಿಕೊಂಡ ಉಕ್ರೇನ್; ಬೆಳವಣಿಗೆಯ 10 ಮುಖ್ಯಾಂಶಗಳು ಇಲ್ಲಿವೆ

Published On - 9:44 am, Sat, 5 March 22

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್