Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗರ್ಲ್‌ಫ್ರೆಂಡ್‌ಗಾಗಿ ಕಂತೆ ಕಂತೆ ನೋಟಿನ ಕಾರ್ಪೆಟ್‌ ಹಾಸಿದ ವ್ಯಕ್ತಿ, ಎಲ್ಲವೂ ದುಡ್ಡಿನ ಮಹಿಮೆ

ತುಂಬಾ ಸಮಯಗಳ ಬಳಿಕ ಭೇಟಿಯಾಗುತ್ತಿದ್ದೇವೆ ಎಂದಾಗ ಹೆಚ್ಚಿನವರು ತಮ್ಮ ಗೆಳತಿ ಹೂಗುಚ್ಛ ನೀಡುವ ಮೂಲಕವೋ ಅಥವಾ ಅವರ ನೆಚ್ಚಿನ ಚಾಕೊಲೇಟ್‌ಗಳನ್ನು ನೀಡುವ ಮೂಲಕ ಮುದ್ದಾಗಿ ಸ್ವಾಗತಿಸುತ್ತಾರೆ. ಆದರೆ ಇಲ್ಲೊಬ್ಬ ಉದ್ಯಮಿ ಹೆಲಿಕಾಪ್ಟರ್‌ನಿಂದ ಧರೆಗಿಳಿದ ತಮ್ಮ ಗೆಳತಿಗೆ ಕಂತೆ ಕಂತೆ ನೋಟಿನ ಕಾರ್ಪೆಟ್‌ ಅನ್ನು ಹಾಸಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral Video: ಗರ್ಲ್‌ಫ್ರೆಂಡ್‌ಗಾಗಿ ಕಂತೆ ಕಂತೆ ನೋಟಿನ ಕಾರ್ಪೆಟ್‌ ಹಾಸಿದ ವ್ಯಕ್ತಿ, ಎಲ್ಲವೂ ದುಡ್ಡಿನ ಮಹಿಮೆ
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 27, 2024 | 2:11 PM

ಹುಡುಗರು ತಮ್ಮ ಗರ್ಲ್‌ಫ್ರೆಂಡ್‌ ಅನ್ನು ಖುಷಿಪಡಿಸಲು ಏನೇನೋ ಸರ್ಕಸ್‌ ಮಾಡುತ್ತಿರುತ್ತಾರೆ. ಕೆಲವೊಬ್ಬರು ದುಬಾರಿ ಉಡುಗೊರೆಗಳನ್ನು ನೀಡಿದರೆ, ಇನ್ನೂ ಕೆಲವರು ಹೊಗಳಿಕೆಯ ಮಾತುಗಳನ್ನಾಡುವ ಮೂಲಕ ತಮ್ಮ ಗೆಳತಿಯನ್ನು ಖುಷಿಪಡಿಸುತ್ತಾರೆ. ಆದರೆ ಇಲ್ಲೊಬ್ಬ ಭೂಪ ತನ್ನ ಗೆಳತಿಯನ್ನು ಖುಷಿ ಪಡಿಸಲು ಕಂತೆ ಕಂತೆ ನೋಟುಗಳ ಕಾರ್ಪೆಟ್‌ ಅನ್ನು ಹಾಸಿದ್ದಾನೆ. ಹೌದು ಸಾಮಾನ್ಯವಾಗಿ ಪ್ರೀತಿ ಪಾತ್ರರನ್ನು ಸ್ವಾಗತಿಸಲು ಹೂವಿನ ಕಾರ್ಪೆಟ್‌ ಹಾಸಿರುವುದನ್ನು ನೋಡಿರುತ್ತೀರಿ, ಆದರೆ ಈ ಉದ್ಯಮಿ ತನ್ನ ಗೆಳತಿ ಹೆಲಿಕಾಪ್ಟರ್‌ನಿಂದ ಇಳಿಯುತ್ತಿದ್ದಂತೆ ಆಕೆಯ ಸ್ವಾಗತಕ್ಕೆ ನೋಟುಗಳ ಕಾರ್ಪೆಟ್‌ ಅನ್ನೇ ಹಾಸಿದ್ದಾನೆ.

ರಷ್ಯಾದ ಉದ್ಯಮಿ ಸೆರ್ಗೆಯ್‌ ಕೊಸೆಂಕೊ ಎಂಬವನು ತನ್ನ ಗರ್ಲ್‌ಫ್ರೆಂಡ್‌ ಅನ್ನು ಸ್ವಾಗತಿಸಲು ಕಂತೆ ಕಂತೆ ನೋಟುಗಳ ಕಾರ್ಪೆಟ್‌ ಅನ್ನು ಹಾಸಿದ್ದು, ಈ ಹಳೆಯ ವಿಡಿಯೋ ಇದೀಗ ಮತ್ತೊಮ್ಮೆ ವೈರಲ್‌ ಆಗುತ್ತಿದೆ.

@mr.thank.you ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿರುವ ವಿಡಿಯೋದಲ್ಲಿ ಸೆರ್ಗೆಯ್‌ ಕೊಸೆಂಕೊ ತನ್ನ ಗೆಳತಿಗಾಗಿ ನೋಟಿನ ಕಾರ್ಪೆಟ್‌ ಹಾಸಿರುವುದನ್ನು ಕಾಣಬಹುದು. ಗೆಳತಿ ಹೆಲಿಕಾಪ್ಟರ್‌ನಿಂದ ಇಳಿಯುತ್ತಿದ್ದಂತೆ ಕೊಸೆಂಕೊ, ಕಂತೆ ಕಂತೆ ನೋಟುಗಳ ಮೇಲೆ ಆಕೆಯ ಕೈ ಹಿಡಿದು ನಡೆಸಿಕೊಂಡು ಬಂದಿದ್ದಾನೆ.

ಇದನ್ನೂ ಓದಿ: ಜೋರು ಮಳೆಯಲ್ಲಿ ರೀಲ್ಸ್‌ ಮಾಡುವಾಗಲೇ ಬಡಿದ ಸಿಡಿಲು! ಮುಂದೇನಾಯ್ತು ನೋಡಿ?

ಕೆಲ ಸಮಯಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 39.4 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದ್ದು, ಎಲ್ಲವೂ ದುಡ್ಡಿನ ಮಹಿಮೆ ಎಂದು ನೆಟ್ಟಿಗರು ಈ ವಿಡಿಯೋ ನೋಡಿ ಶಾಕ್‌ ಆಗಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು