AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮನೀರಿನಲ್ಲಿ ಮಿಂದೆದ್ದು ಕಾಫಿ ಕುಡಿಯುತ್ತಿರುವ ಯುವತಿಯ ವಿಡಿಯೋ ವೈರಲ್

Freezing water : ಈ ರಷ್ಯನ್ ಬಾಲೆಯೊಬ್ಬಳು ಕೊಳದಲ್ಲಿ ಮಿಂದು ಕಾಫಿ ಕುಡಿದಾಗ ತಾಪಮಾನ ಎಷ್ಟಿತ್ತು ನೋಡಿ. ಮಿಲಿಯನ್ಗಟ್ಟಲೆ ಜನ ಈ ವಿಡಿಯೋ ನೋಡಿದ್ದಾರೆ. ವಿಡಿಯೋ ಮಾಡಿದ ನಂತರ ಬದುಕಿದ್ದಾಳಲ್ಲ? ಎಂದಿದ್ದಾರೆ ಕೆಲವರು.

ಹಿಮನೀರಿನಲ್ಲಿ ಮಿಂದೆದ್ದು ಕಾಫಿ ಕುಡಿಯುತ್ತಿರುವ ಯುವತಿಯ ವಿಡಿಯೋ ವೈರಲ್
ಹಿಮಸ್ನಾನದ ನಂತರ ಕಾಫೀ ಕುಡಿಯುತ್ತಿರುವ ರಷ್ಯನ್​ ಮಹಿಳೆ
TV9 Web
| Edited By: ಶ್ರೀದೇವಿ ಕಳಸದ|

Updated on:Dec 30, 2022 | 11:00 AM

Share

Viral Video : ಹಿಮಪಾತವಾಗುತ್ತಿರುವ ಅನೇಕ ಪ್ರದೇಶಗಳ ಪರಿಸ್ಥಿತಿ ಹೇಗಿದೆ, ಅಲ್ಲಿಯ ಜನಜೀವನ ಏನೆಲ್ಲ ಸಂಕಷ್ಟಗಳನ್ನು ಎದುರಿಸುತ್ತಿದೆ ಎಂಬುದನ್ನು ದಿನವೂ ನೋಡುತ್ತಲೇ ಇದ್ದೀರಿ. ಎಲ್ಲವೂ ಎಲ್ಲಕಡೆಗೂ ಒಂದೇ ರೀತಿ ಇರಲು ಹೇಗೆ ಸಾಧ್ಯ? ಈ ವಿಡಿಯೋ ನೋಡಿ. ರಷ್ಯಾದ ಈ ಯುವತಿ ಹಿಮಗಟ್ಟಿದ ಕೊಳದಲ್ಲಿ ಮಿಂದು  ಮುಳುಗು ಹೊಡೆದು ಬಿಸಿಬಿಸಿ ಕಾಫಿ ಹೀರಿದ್ದಾಳೆ. ಹೀಗವಳು ಮುಳುಗು ಹೊಡೆದಾಗ ಅಲ್ಲಿಯ ತಾಪಮಾನ -27 ಡಿ.ಸೆ. ಇತ್ತು.

ಕಾಫಿ ಸಿಪ್​ನ ನಂತರ ತನ್ನ ಮೊಬೈಲಿನಲ್ಲಿ ತಾಪಮಾನವನ್ನು ತೋರಿಸುತ್ತಾಳೆ. ಮಾಡ್ಕೋದ ಬಳಿ ಯಾವುದೋ ಪ್ರದೇಶದಲ್ಲಿ ಈ ವಿಡಿಯೊ ಚಿತ್ರೀಕರಿಸಲಾಗಿದೆ. ಟ್ವೀಟರ್​ನಲ್ಲಿ ಪೋಸ್ಟ್ ಮಾಡಲಾದ ಈ ವಿಡಿಯೋ ಅನ್ನು ಈತನಕ 1.8 ಮಿಲಿಯನ್​ ಜನರು ನೋಡಿದ್ದಾರೆ. 10,600 ಜನರು ಇಷ್ಟಪಟ್ಟಿದ್ದಾರೆ. ಸಾವಿರಾರು ಜನರು ರೀಟ್ವೀಟ್ ಮಾಡಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಹಿಮವ ಸೀಳಿ ಸಾಗುವಾ; ನಗುನಗುತ್ತಲೇ ದಾರಿ ಮಾಡಿಕೊಳ್ಳುತ್ತಿರುವ ಭಾರತೀಯ ಯೋಧ

ನಾನು ಕೂಡ ಈ ರೀತಿ ಮಾಡಿದ್ದೇನೆ. ಸುಮಾರು ಏಳೆಂಟು ನಿಮಿಷಗಳ ಕಾಲ ನೀರಿನೊಳಗೆ ಇದ್ದೆ. ಇದು ಅದ್ಭುತವಾದ ಅನುಭವ ಎಂದು ಒಬ್ಬರು ಹೇಳಿದ್ದಾರೆ. ಯಾಕೆ ಇಂಥ ಹುಚ್ಚುತನಕ್ಕೆ ಬೀಳುತ್ತಾರೆ ಜನ? ಎಂದು ಮತ್ತೊಬ್ಬರು ಕೇಳಿದ್ದಾರೆ. ವಿಡಿಯೋ ಮಾಡಿದ ನಂತರ ಆಕೆ ಬದುಕಿದ್ದಾಳೆ ಎಂದು ಭಾವಿಸುತ್ತೇನೆ ಎಂದಿದ್ದಾರೆ ಕೆಲವರು. ಯಾರೋ ಒಬ್ಬರು ಹೀಗೆ ಮಾಡಲು ಹೋಗಿ ತೀರಿಹೋದರಂತೆ, ನ್ಯೂಸ್​​ನಲ್ಲಿ ನೋಡಿದೆ. ನೀವು ಅದೃಷ್ಟವಂತರು ಎಂದಿದ್ದಾರೆ ಮಗದೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:54 am, Fri, 30 December 22

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ