Video: ಹಿಮಾಲಯ ಟ್ರೆಕ್ಕಿಂಗ್ ವೇಳೆ ಪ್ರವಾಸಿಗರಿಗೆ ಸ್ವಚ್ಛತೆಯ ಪಾಠ ಮಾಡಿದ ರಷ್ಯನ್ ಮಹಿಳೆ

ಕಸದ ಹಾಕಬಾರದೆಂಬ ಬಗ್ಗೆ ಯಾವ ಜಾಗೃತಿ, ಯಾವ ಅಭಿಮಾನ ಮಾಡಿದ್ರು ಭಾರತದ ಜನ ಬದಾಲಾಗುವಂತೆ ಕಾಣುತ್ತಿಲ್ಲ. ವಿದೇಶಿಗರು ಈ ಬಗ್ಗೆ ಪಾಠ ಮಾಡುವ ಹಂತಕ್ಕೆ ಬಂದು ತಲುಪಿದ್ದೇವೆ. ವಿದೇಶಿಗರೊಬ್ಬರು ಹಿಮಾಲಯ ಟ್ರೆಕ್ಕಿಂಗ್ ವೇಳೆ ಸ್ವಚ್ಛತೆ ಪಾಠ ಮಾಡಿದ್ದಾರೆ. ರಷ್ಯನ್ ಮಹಿಳೆಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Video: ಹಿಮಾಲಯ ಟ್ರೆಕ್ಕಿಂಗ್ ವೇಳೆ ಪ್ರವಾಸಿಗರಿಗೆ ಸ್ವಚ್ಛತೆಯ ಪಾಠ ಮಾಡಿದ ರಷ್ಯನ್ ಮಹಿಳೆ
ರಷ್ಯನ್ ಮಹಿಳೆ ತಾನ್ಯಾ
Image Credit source: Instagram

Updated on: Dec 11, 2025 | 4:45 PM

ಭಾರತದಲ್ಲಿ ಕಸದ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಇದು ಮುಗಿಯದ ಗೋಳು ಎನ್ನುವಂತಾಗಿದೆ. ಹೌದು, ಪ್ರವಾಸಿ ತಾಣ, ಮನೆ, ಧಾರ್ಮಿಕ ಕೇಂದ್ರ ಹೀಗೆ ಎಲ್ಲೆಂದರಲ್ಲಿ ಕಸ ಹಾಕುವುದು ಮಾತ್ರ ನಿಲ್ಲುತ್ತಿಲ್ಲ. ಆದರೆ ಇದೀಗ ನಮ್ಮ ಸಮಸ್ಯೆಗಳನ್ನು ವಿದೇಶಿಗರು ತೋರಿಸುವ ಮಟ್ಟಿಗೆ ನಾವು ಬಂದು ತಲುಪಿದೆ. ಹಿಮಾಲಯ ಟ್ರಕ್ಕಿಂಗ್‌ಗೆ (Himalayan trekking) ಸ್ನೇಹಿತರ ಜತೆಗೆ ಹೋಗಿದ್ದ ರಷ್ಯನ್ ಮಹಿಳೆಯೊಬ್ಬರು (Russian woman) ಕಸವನ್ನು ಹೆಕ್ಕುತ್ತಾ ಪ್ರವಾಸಿಗರ ಬಳಿ ಇಲ್ಲಿನ ಸ್ವಚ್ಛತೆಯನ್ನು ಕಾಪಾಡುವಂತೆ ಒತ್ತಾಯಿಸುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ನಿಜಕ್ಕೂ ಇದು ಬೇಸರ ಸಂಗತಿ ಎಂದು ಕಾಮೆಂಟ್ ಮಾಡಿದ್ದಾರೆ.

ತಾನ್ಯಾ (tanya_in_india) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಹಿಮಾಲಯನ್ ಟ್ರೆಕ್ಕಿಂಗ್ ವೇಳೆ ರಷ್ಯನ್ ಮಹಿಳೆ ತನ್ನ ಕೈಯಲ್ಲಿ ಕಸದ ಚೀಲವನ್ನು ಹಿಡಿದುಕೊಂಡಿರುವುದನ್ನು ಕಾಣಬಹುದು. ಆ ಬಳಿಕ ಅಲ್ಲಿಂದ ಪ್ರವಾಸಿಗರನ್ನು ಉದ್ದೇಶಿಸಿ ಸ್ವಚ್ಛತೆಯ ಪಾಠ ಮಾಡುತ್ತಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋದಲ್ಲಿ ನನ್ನ ಹೆಸರು ತಾನ್ಯಾ. ನಾನು ರಷ್ಯಾದವಳು, ನಾನು ಇಂದು ಬೆಳಿಗ್ಗೆಯಿಂದ ಚಂದ್ರಶಿಲಾಕ್ಕೆ ಚಾರಣ ಹೋಗಿದ್ದೆ. ಇದು ಅದ್ಭುತ ಸ್ಥಳ. ನಾನು ಈ ಸ್ಥಳ ಹಾಗೂಪ್ರಕೃತಿಯನ್ನು ಪ್ರೀತಿಸುತ್ತೇನೆ. ನಾನು ಈ ದೇಶವನ್ನು ಪ್ರೀತಿಸುತ್ತೇನೆ ಹಾಗೂ ಇಲ್ಲಿ ಪ್ರಯಾಣಿಸಲು ಇಷ್ಟಪಡುತ್ತೇನೆ. ಆದರೆ ನನಗೆ ದುಃಖವನ್ನುಂಟುಮಾಡುವ ಒಂದು ವಿಷಯವೆಂದರೆ ಕಸ. ನಾನು ಪ್ರಯಾಣದ ವೇಳೆ ಕಸ ಹೆಕ್ಕುವ ಮೂಲಕ ಸಣ್ಣ ಕೆಲಸಗಳನ್ನು ಮಾಡುತ್ತೇವೆ. ನಾನು ಎಲ್ಲವನ್ನೂ ಸ್ವಚ್ಛಗೊಳಿಸಲು ಸಾಧ್ಯವಿಲ್ಲ. ಆದರೆ ಪ್ರಕೃತಿಯನ್ನು ನಮ್ಮ ಕೈಲಾದ ಮಟ್ಟಿಗೆ ಸ್ವಚ್ಛವಾಗಿಟ್ಟುಕೊಳ್ಳಬಹುದು. ಹೀಗೆ ಮಾಡಿದ್ರೆ ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿದ್ದು ಉತ್ತಮವಾಗಿರುತ್ತದೆ ಎಂದು
ನಾನು ಭಾವಿಸುತ್ತೇನೆ ಎಂದಿರುವುದನ್ನು ನೋಡಬಹುದು.

ಇದನ್ನೂ ಓದಿ: ಬೆಂಗಳೂರಿನ ವಿಮಾನ ನಿಲ್ದಾಣದ ಸೌಂದರ್ಯಕ್ಕೆ ಫಿದಾ ಆದ ಡಚ್ ಮಹಿಳೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಿಮ್ಮ ಈ ಪ್ರಯತ್ನಕ್ಕೆ ಧನ್ಯವಾದಗಳು ಎಂದಿದ್ದಾರೆ. ಮತ್ತೊಬ್ಬರು, ಒಂದಲ್ಲ ಒಂದು ದಿನ ಈ ಜನರು ಸ್ವಲ್ಪ ನಾಗರಿಕ ಪ್ರಜ್ಞೆಯನ್ನು ಕಲಿಯುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Follow Us