AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

viral video: ಮಹಾರಾಷ್ಟ್ರದಲ್ಲಿ ಮಿಸಲ್ ಪಾವ್​ ಸವಿದ ಸಚಿನ್​ ತೆಂಡೂಲ್ಕರ್: ವೀಡಿಯೋ ವೈರಲ್​

ಭಾರತೀಯ ಕ್ರಿಕೆಟ್​ ತಂಡದ ಮಾಜಿ ನಾಯಕ ಸಚಿನ್​ ತೆಂಡೂಲ್ಕರ್​ ಮಹಾರಾಷ್ಟ್ರದ ಮಿಸಲ್​ ಪಾವ್​ ಅನ್ನು ತಿಂದ ವೀಡಿಯೋ ಹಂಚಿಕೊಂಡಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

viral video: ಮಹಾರಾಷ್ಟ್ರದಲ್ಲಿ ಮಿಸಲ್ ಪಾವ್​ ಸವಿದ ಸಚಿನ್​ ತೆಂಡೂಲ್ಕರ್: ವೀಡಿಯೋ ವೈರಲ್​
ಸಚಿನ್​ ತೆಂಡೂಲ್ಕರ್
TV9 Web
| Edited By: |

Updated on: Dec 14, 2021 | 2:48 PM

Share

ಮಹಾರಾಷ್ಟ್ರ: ಭಾರತೀಯ ಕ್ರಿಕೆಟ್​ ತಂಡದ ಮಾಜಿ ನಾಯಕ ಸಚಿನ್​ ತೆಂಡೂಲ್ಕರ್​ ಮಹಾರಾಷ್ಟ್ರದ ಮಿಸಲ್​ ಪಾವ್​ ಅನ್ನು ತಿಂದ ವೀಡಿಯೋ ಹಂಚಿಕೊಂಡಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಮಹಾರಾಷ್ಟ್ರದ ಪ್ರಸಿದ್ಧ ತಿನಿಸುಗಳಲ್ಲಿ ಮಿಸಲ್​ ಪಾವ್ ಕೂಡ ಒಂದು. ಅದನ್ನು ಬಾಯಿಚಪ್ಪರಿಸಿ ತಿನ್ನುವ ವೀಡಿಯೋವನ್ನು ಸಚಿನ್​ ಶೇರ್​ ಮಾಡಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್​ ಹಾಗೂ ಟ್ವಿಟರ್​ ಎರಡರಲ್ಲೂ ವಿಡಿಯೋ ಹಂಚಿಕೊಂಡಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡ 25 ಸೆಕೆಂಡ್​ಗಳ ಸಚಿನ್​ ಮಿಸಲ್​​ ಪಾವ್​ ಸವಿಯುತ್ತಿರುವ ವೀಡಿಯೋ 5.5 ಮಿಲಿಯನ್​ ವೀಕ್ಷಣೆ ಪಡೆದುಕೊಂಡಿದೆ. ಅದೇ ರೀತಿ ಟ್ವಿಟರ್​ನಲ್ಲಿ 3 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

ವೈರಲ್​ ಆಗಿರುವ ವೀಡಿಯೋದಲ್ಲಿ ಸಚಿನ್​ ಮೊದಲು ಮಿಸಲ್​ ಗೆ ನಂಬೆ ರಸವನ್ನು ಹಾಕಿಕೊಳ್ಳುತ್ತಾರೆ ಬಳಿಕ ಪಾವ್​ ಅಥವಾ ಬ್ರೆಡ್​ನ ತುಂಡನ್ನು ಹಾಕಿಕೊಂಡು ತಿನ್ನುತ್ತಾರೆ. ಸಚಿನ್ ಮಿಸಲ್​ ಪಾವ್​ ಅನ್ನು ಖುಷಿಯಿಂದ ತಿನ್ನುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಸಚಿನ್​ ಮಿಸಲ್​​ ಪಾವ್​ ತನಗೆ ಬರ್ಮೀಸ್​ ಖಾವೋ ಸೂಯಿಯನ್ನು (ಬರ್ಮೀಸ್​ ಖಾವೋ ಸೂಯಿ ಎಂದರೆ ನೂಡಲ್ಸ್ ಸೂಪ್​. ಇದನ್ನು ಮೊಟ್ಟೆ ಮತ್ತು ಚಿಕನ್​ನಿಂದಲೂ ಮಾಡುತ್ತಾರೆ)ನೆನಪಿಸುತ್ತದೆ ಎಂದಿದ್ದಾರೆ. ಅದೇ ರೀತಿ ಮಿಸಲ್​ ಪಾವ್​ ಕಿ ಕುಚ್​ ಬಾತ್ ಹೈ ಅಲಗ್ ಹೈ ಎಂದು ಖುಷಿ ವ್ಯಕ್ತಪಡಿಸಿದ್ದಾರೆ. ಸಚಿನ್ ಭಾನುವಾರ ಮಹಾರಾಷ್ಟ್ರಕ್ಕೆ ತೆರಳಿದ್ದ ವೇಳೆ ಮಿಸಲ್​ ಪಾವ್​ ಅನ್ನು ಸವಿದಿದ್ದಾರೆ ಅದರ ಮಿಸಲ್​​ ಪಾವ್​ರುಚಿಯನ್ನು ವಿವರಿಸುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಮದುವೆ ಮಂಟಪದಲ್ಲಿ ತಮಾಷೆ ಮಾಡಿದ ವರನ ಸ್ನೇಹಿತರಿಗೆ ಸರಿಯಾದ ಉತ್ತರ ಕೊಟ್ಟ ವಧು; ವಿಡಿಯೋ ನೋಡಿ

Viral video: ಗಂಭೀರ ಸ್ಥಿತಿಯಲ್ಲಿದ್ದ ಕೋತಿಗೆ ಉಸಿರು ನೀಡಿ ಪ್ರಾಣ ಉಳಿಸಿದ ಕಾರು ಚಾಲಕ; ವಿಡಿಯೋ ವೈರಲ್

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು