AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್ ತೆಂಡೂಲ್ಕರ್ ಹೊಸ ಫ್ರೆಂಡ್ ಸ್ಪೈಕ್ ಜೊತೆ ಆಟವಾಡುತ್ತಿರುವ ವಿಡಿಯೋ ನೋಡಿ

ಸ್ನೇಹಿತರೇ.. ಸ್ಪೈಕ್​ರನ್ನು ನಾನು ಹೇಗೆ ಭೇಟಿಯಾದೆ ಎಂದು ನಿಮ್ಮ ತಿಳಿದಿದೆಯೇ? ಎಂದು ಸಚಿನ್ ತಮ್ಮ ವಿಡಿಯೋ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ಸಚಿನ್ ತೆಂಡೂಲ್ಕರ್ ಹೊಸ ಫ್ರೆಂಡ್ ಸ್ಪೈಕ್ ಜೊತೆ ಆಟವಾಡುತ್ತಿರುವ ವಿಡಿಯೋ ನೋಡಿ
ಸಚಿನ್ ತೆಂಡೂಲ್ಕರ್ ಹೊಸ ಫ್ರೆಂಡ್ ಸ್ಪೈಕ್ ಜೊತೆ ಆಟವಾಡುತ್ತಿರುವ ವಿಡಿಯೋ ನೋಡಿ
TV9 Web
| Edited By: |

Updated on: Aug 01, 2021 | 10:36 AM

Share

ಕ್ರಿಕೇಟಿಗ ಸಚಿನ್ ಅವರು ಹೊಸ ಫ್ರೆಂಡ್ರನ್ನು ಪರಿಚಯಿಸಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸಚಿನ್ ಅವರು (Sachin Tendulkar)  ಸ್ಪೈಕ್​ರನ್ನು ಪರಿಚಯಿಸಿದ್ದಾರೆ. ಸ್ಪೈಕ್ ಎಂಬ ಹೆಸರಿನ ಪುಟ್ಟ ನಾಯಿ ಮರಿಯೊಂದಿಗೆ ಕಳೆದ ಕ್ಷಣಗಳನ್ನು ಸಚಿನ್ ಪೋಸ್ಟ್ ಮಾಡಿದ್ದಾರೆ. ಸಚಿನ್ ಅಭಿಮಾನಿಗಳು ವಿಡಿಯೋ(Video Viral) ಇಷ್ಟಪಟ್ಟಿದ್ದು ತಮ್ಮ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ.

ಸ್ನೇಹಿತರೇ.. ಸ್ಪೈಕ್​ರನ್ನು ನಾನು ಹೇಗೆ ಭೇಟಿಯಾದೆ ಎಂದು ನಿಮ್ಮ ತಿಳಿದಿದೆಯೇ? ಎಂದು ಸಚಿನ್ ತಮ್ಮ ವಿಡಿಯೋ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ. ನನ್ನ ಫಾರ್ಮ್​​ಹೌಸ್​ನ ಕೆಲವು ಮಕ್ಕಳು ಮಾರುಕಟ್ಟೆಗೆ ಹೋದಾಗ ಈ ಪುಟ್ಟ ನಾಯಿ ಮರಿಯನ್ನು ನೋಡಿದ್ದಾರೆ. ತಾಯಿ ಇಲ್ಲದೆ ಅನಾಥವಾಗಿದ್ದ ನಾಯಿ ಮರಿ ನೋಡಿದ ಮಕ್ಕಳು ಫಾರ್ಮ್​​ಹೌಸ್​ಗೆ ಕರೆತಂದಿದ್ದಾರೆ ಎಂದು ಸಚಿನ್ ಹೇಳಿದ್ದಾರೆ.

ನಾಯಿ ಮರಿಯನ್ನು ನೋಡಿದ ತಕ್ಷಣ ನನಗೆ ಇಷ್ಟವಾಯಿತು. ನಮ್ಮ ತೋಟದ ಮನೆಯಲ್ಲಿಯೇ ಸಾಕೋಣ ಎಂದು ನಾನು ಹೇಳಿದೆ. ಈ ನಾಯಿಮರಿ ಯಾವುದೇ ಬೇರೆ ಜಾತಿಯ ತಳಿಯಲ್ಲ. ಪಕ್ಕಾ ಭಾರತೀಯ ದೇಸಿ ತಳಿ ಎಂದು ಹೇಳಿದ್ದಾರೆ.

ಸ್ಪೈಕ್ ತುಂಬಾ ಮುದ್ದಾಗಿದೆ ಮತ್ತು ಸುಂದರವಾಗಿ ಬೆಳೆಯುತ್ತಿದೆ. ಸ್ಪೈಕ್​ಗೆ ಬೇಕಾದದ್ದು ಆಶ್ರಯ, ಪ್ರೀತಿ ಮತ್ತು ಕಾಳಜಿ ಅಷ್ಟೆ ಎಂದು ಅವರು ಹೇಳಿದ್ದಾರೆ.

ಸ್ಪೈಕ್ ನಮ್ಮ ಹೃಯವನ್ನು ಗೆದ್ದಿದೆ. ನಮ್ಮ ಈ ಜೀವನದಲ್ಲಿ ಖುಷಿ ತಂದಿದೆ ಎಂದು ಸಚಿನ್ ಹೇಳಿದ್ದಾರೆ. ವಿಡಿಯೋ ಕ್ಲಿಪ್​ನಲ್ಲಿ ಗಮನಿಸುವಂತೆ ಸ್ಪೈಕ್ ಎಲ್ಲೆಡೆ ಓಡಾಡುತ್ತಿರುವುದನ್ನು ನೋಡಬಹುದು. ಜನರೊಂದಿಗೆ ಹೆಚ್ಚು ಸಮಯ ಕಳೆಯತ್ತಿರುವುದನ್ನು ಗಮನಿಸಬಹುದು.

ಸಚಿನ್ ಹಂಚಿಕೊಂಡ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆಯೇ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

2011ರಲ್ಲಿ ವಿಶ್ವಕಪ್​ ಗೆದ್ದಿದ್ದು ಟೀಮ್ ಇಂಡಿಯಾ ಮಾತ್ರ ಅಲ್ಲ, ಇಡೀ ಭಾರತವೇ ಅದನ್ನು ಗೆದ್ದಿತು: ಸಚಿನ್​ ತೆಂಡೂಲ್ಕರ್

‘ಸಚಿನ್​ ಶೇಕ್ ಹ್ಯಾಂಡ್ ಕೊಟ್ಟಾಗ ಇನ್ಮುಂದೆ ಸ್ನಾನವೇ ಮಾಡೋದು ಬೇಡ ಅಂತಾ ಅಂದುಕೊಂಡಿದ್ದೆ’

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!