AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವೆಲ್ಲರೂ ಇವರಿಂದ ಕಲಿಯುವುದಿದೆ’ ಎಂದು ಸ್ಪೂರ್ತಿ ತುಂಬುವ ವಿಡಿಯೋ ಹಂಚಿಕೊಂಡ ಸಚಿನ್ ತೆಂಡೂಲ್ಕರ್

Sachin Tendulkar: ಸಚಿನ್ ಅವರು ಹರ್ಷದ್ ಅವರನ್ನು ಪರಿಚಯಿಸುವ ಮೂಲಕ ಅವರ ಸಾಧನೆಯ ಬಗ್ಗೆ ವಿವರಿಸಿದ್ದಾರೆ. ಹರ್ಷದ್ ಅವರು ತಮ್ಮ ಸ್ನೇಹಿತರೊಡನೆ ಕೇರಂ ಆಡುತ್ತಿರುವ ದೃಶ್ಯವನ್ನು ಹಂಚಿಕೊಂಡ ಸಚಿನ್ ಒಂದೊಳ್ಳೆಯ ಸಂದೇಶವನ್ನು ಸಾರಿದ್ದಾರೆ

'ನಾವೆಲ್ಲರೂ ಇವರಿಂದ ಕಲಿಯುವುದಿದೆ' ಎಂದು ಸ್ಪೂರ್ತಿ ತುಂಬುವ ವಿಡಿಯೋ ಹಂಚಿಕೊಂಡ ಸಚಿನ್ ತೆಂಡೂಲ್ಕರ್
ಸ್ಪೂರ್ತಿ ತುಂಬುವ ವಿಡಿಯೋ ಹಂಚಿಕೊಂಡ ಸಚಿನ್ ತೆಂಡೂಲ್ಕರ್
TV9 Web
| Edited By: |

Updated on: Jul 27, 2021 | 1:07 PM

Share

ಕ್ರಿಕೇಟರ್ ಸಚಿನ್ ತೆಂಡೂಲ್ಕರ್( Sachin Tendulkar) ಮಂಗಳವಾರ ಸ್ಪೂರ್ತಿ ತುಂಬುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿದ ಅಭಿಮಾನಿಗಳು ವಿಡಿಯೋವನ್ನು ಮೆಚ್ಚಿಕೊಂಡಿದ್ದು ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಕೈಗಳಿಲ್ಲದ ಯುವಕ ಕಾಲಿನಲ್ಲಿಯೇ ಕೇರಂ (Carrom) ಆಟ ಆಡುತ್ತಿರುವ ವಿಡಿಯೋವನ್ನು ಸಚಿನ್ ಅವರು ಹಂಚಿಕೊಂಡಿದ್ದು, ವಿಡಿಯೋ ಎಲ್ಲರಿಗೂ ಸ್ಪೂರ್ತಿ ತುಂಬುವಂತಿದೆ.

ಇಲ್ಲಿರುವ ಹರ್ಷದ್ ಸಾಧ್ಯವಾಗದ ಕೆಲವನ್ನು ಸಾಧಿಸಿ ತೋರಿಸಿದ್ದಾರೆ. ಸಚಿನ್ ಅವರು ಹರ್ಷದ್ ಅವರನ್ನು ಪರಿಚಯಿಸುವ ಮೂಲಕ ಅವರ ಸಾಧನೆಯ ಬಗ್ಗೆ ವಿವರಿಸಿದ್ದಾರೆ. ಹರ್ಷದ್ ಅವರು ತಮ್ಮ ಸ್ನೇಹಿತರೊಡನೆ ಕೇರಂ ಆಡುತ್ತಿರುವ ದೃಶ್ಯವನ್ನು ಹಂಚಿಕೊಂಡ ಸಚಿನ್ ಒಂದೊಳ್ಳೆಯ ಸಂದೇಶವನ್ನು ಸಾರಿದ್ದಾರೆ. ಅಸಾಧ್ಯ ಎಂಬ ಮಾತು ಅವರ ನಿರ್ಧಾರದಲ್ಲಿದೆ ಎಂದು ಹೇಳುವ ಮೂಲಕ ವಿಡಿಯೋ ಹಂಚಿಕೊಳ್ಳಲಾಗಿದೆ.

ಇವರ ಮನಸ್ಥಿತಿ ಎಲ್ಲರಿಗೆ ಸ್ಪೂರ್ತಿ ತುಂಬವಂತಿದೆ. ಯಾವುದೂ ಕೂಡಾ ಅಸಾಧ್ಯವಾದುದಲ್ಲ. ಇವರಿಂದ ನಾವು ಕಲಿಯುವುದು ತುಂಬಾ ಇದೆ ಎಂದು ಸಚಿನ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋವನ್ನು ಸಚಿನ್ ಹಂಚಿಕೊಂಡ ಬಳಿಕ 86,000 ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 12,000 ಕ್ಕೂ ಹೆಚ್ಚು ಲೈಕ್ಸ್​ಗಳು ಲಭ್ಯವಾಗಿವೆ. ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು, ಅನಿಸಿಕೆಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಸೂಪರ್ ವಿಡಿಯೋ! ಯಾವುದೋ ಒಂದು ಸಾಧನೆಯತ್ತ ಸಾಗಲು ಮನಸ್ಥಿತಿ ಮುಖ್ಯ. ಧೈರ್ಯ ಮತ್ತು ಬುದ್ಧಿವಂತಿಕೆಯ ಜತೆಗೆ ಶ್ರಮವಹಿಸಿದರೆ ಅಸಾಧ್ಯವಾದುದನ್ನೂ ಸಾಧಿಸಬಹುದು ಎಂದು ನೆಟ್ಟಿಗರೋರ್ವರು ಹೇಳಿದ್ದಾರೆ. ಜೀವನದಲ್ಲಿ ಸ್ಪೂರ್ತಿ ತುಂಬುವ ವಿಡಿಯೋವಿದು ಎಂದು ಮತ್ತೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ:

2011ರಲ್ಲಿ ವಿಶ್ವಕಪ್​ ಗೆದ್ದಿದ್ದು ಟೀಮ್ ಇಂಡಿಯಾ ಮಾತ್ರ ಅಲ್ಲ, ಇಡೀ ಭಾರತವೇ ಅದನ್ನು ಗೆದ್ದಿತು: ಸಚಿನ್​ ತೆಂಡೂಲ್ಕರ್

ಕೈಗಳಿಲ್ಲದ ಯುವಕ ಕಾಲಿನಲ್ಲಿಯೇ ಕೇರಂ ಆಟ ಆಡ್ತಾರೆ! ನೆಟ್ಟಿಗರ ಹೃದಯ ಗೆದ್ದ ವಿಡಿಯೋ ವೈರಲ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ