AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವೆಲ್ಲರೂ ಇವರಿಂದ ಕಲಿಯುವುದಿದೆ’ ಎಂದು ಸ್ಪೂರ್ತಿ ತುಂಬುವ ವಿಡಿಯೋ ಹಂಚಿಕೊಂಡ ಸಚಿನ್ ತೆಂಡೂಲ್ಕರ್

Sachin Tendulkar: ಸಚಿನ್ ಅವರು ಹರ್ಷದ್ ಅವರನ್ನು ಪರಿಚಯಿಸುವ ಮೂಲಕ ಅವರ ಸಾಧನೆಯ ಬಗ್ಗೆ ವಿವರಿಸಿದ್ದಾರೆ. ಹರ್ಷದ್ ಅವರು ತಮ್ಮ ಸ್ನೇಹಿತರೊಡನೆ ಕೇರಂ ಆಡುತ್ತಿರುವ ದೃಶ್ಯವನ್ನು ಹಂಚಿಕೊಂಡ ಸಚಿನ್ ಒಂದೊಳ್ಳೆಯ ಸಂದೇಶವನ್ನು ಸಾರಿದ್ದಾರೆ

'ನಾವೆಲ್ಲರೂ ಇವರಿಂದ ಕಲಿಯುವುದಿದೆ' ಎಂದು ಸ್ಪೂರ್ತಿ ತುಂಬುವ ವಿಡಿಯೋ ಹಂಚಿಕೊಂಡ ಸಚಿನ್ ತೆಂಡೂಲ್ಕರ್
ಸ್ಪೂರ್ತಿ ತುಂಬುವ ವಿಡಿಯೋ ಹಂಚಿಕೊಂಡ ಸಚಿನ್ ತೆಂಡೂಲ್ಕರ್
TV9 Web
| Edited By: |

Updated on: Jul 27, 2021 | 1:07 PM

Share

ಕ್ರಿಕೇಟರ್ ಸಚಿನ್ ತೆಂಡೂಲ್ಕರ್( Sachin Tendulkar) ಮಂಗಳವಾರ ಸ್ಪೂರ್ತಿ ತುಂಬುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿದ ಅಭಿಮಾನಿಗಳು ವಿಡಿಯೋವನ್ನು ಮೆಚ್ಚಿಕೊಂಡಿದ್ದು ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಕೈಗಳಿಲ್ಲದ ಯುವಕ ಕಾಲಿನಲ್ಲಿಯೇ ಕೇರಂ (Carrom) ಆಟ ಆಡುತ್ತಿರುವ ವಿಡಿಯೋವನ್ನು ಸಚಿನ್ ಅವರು ಹಂಚಿಕೊಂಡಿದ್ದು, ವಿಡಿಯೋ ಎಲ್ಲರಿಗೂ ಸ್ಪೂರ್ತಿ ತುಂಬುವಂತಿದೆ.

ಇಲ್ಲಿರುವ ಹರ್ಷದ್ ಸಾಧ್ಯವಾಗದ ಕೆಲವನ್ನು ಸಾಧಿಸಿ ತೋರಿಸಿದ್ದಾರೆ. ಸಚಿನ್ ಅವರು ಹರ್ಷದ್ ಅವರನ್ನು ಪರಿಚಯಿಸುವ ಮೂಲಕ ಅವರ ಸಾಧನೆಯ ಬಗ್ಗೆ ವಿವರಿಸಿದ್ದಾರೆ. ಹರ್ಷದ್ ಅವರು ತಮ್ಮ ಸ್ನೇಹಿತರೊಡನೆ ಕೇರಂ ಆಡುತ್ತಿರುವ ದೃಶ್ಯವನ್ನು ಹಂಚಿಕೊಂಡ ಸಚಿನ್ ಒಂದೊಳ್ಳೆಯ ಸಂದೇಶವನ್ನು ಸಾರಿದ್ದಾರೆ. ಅಸಾಧ್ಯ ಎಂಬ ಮಾತು ಅವರ ನಿರ್ಧಾರದಲ್ಲಿದೆ ಎಂದು ಹೇಳುವ ಮೂಲಕ ವಿಡಿಯೋ ಹಂಚಿಕೊಳ್ಳಲಾಗಿದೆ.

ಇವರ ಮನಸ್ಥಿತಿ ಎಲ್ಲರಿಗೆ ಸ್ಪೂರ್ತಿ ತುಂಬವಂತಿದೆ. ಯಾವುದೂ ಕೂಡಾ ಅಸಾಧ್ಯವಾದುದಲ್ಲ. ಇವರಿಂದ ನಾವು ಕಲಿಯುವುದು ತುಂಬಾ ಇದೆ ಎಂದು ಸಚಿನ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋವನ್ನು ಸಚಿನ್ ಹಂಚಿಕೊಂಡ ಬಳಿಕ 86,000 ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 12,000 ಕ್ಕೂ ಹೆಚ್ಚು ಲೈಕ್ಸ್​ಗಳು ಲಭ್ಯವಾಗಿವೆ. ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು, ಅನಿಸಿಕೆಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಸೂಪರ್ ವಿಡಿಯೋ! ಯಾವುದೋ ಒಂದು ಸಾಧನೆಯತ್ತ ಸಾಗಲು ಮನಸ್ಥಿತಿ ಮುಖ್ಯ. ಧೈರ್ಯ ಮತ್ತು ಬುದ್ಧಿವಂತಿಕೆಯ ಜತೆಗೆ ಶ್ರಮವಹಿಸಿದರೆ ಅಸಾಧ್ಯವಾದುದನ್ನೂ ಸಾಧಿಸಬಹುದು ಎಂದು ನೆಟ್ಟಿಗರೋರ್ವರು ಹೇಳಿದ್ದಾರೆ. ಜೀವನದಲ್ಲಿ ಸ್ಪೂರ್ತಿ ತುಂಬುವ ವಿಡಿಯೋವಿದು ಎಂದು ಮತ್ತೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ:

2011ರಲ್ಲಿ ವಿಶ್ವಕಪ್​ ಗೆದ್ದಿದ್ದು ಟೀಮ್ ಇಂಡಿಯಾ ಮಾತ್ರ ಅಲ್ಲ, ಇಡೀ ಭಾರತವೇ ಅದನ್ನು ಗೆದ್ದಿತು: ಸಚಿನ್​ ತೆಂಡೂಲ್ಕರ್

ಕೈಗಳಿಲ್ಲದ ಯುವಕ ಕಾಲಿನಲ್ಲಿಯೇ ಕೇರಂ ಆಟ ಆಡ್ತಾರೆ! ನೆಟ್ಟಿಗರ ಹೃದಯ ಗೆದ್ದ ವಿಡಿಯೋ ವೈರಲ್

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್