AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಚಿರತೆಯೊಂದಿಗೆ ಸೆಲ್ಫೀ ತೆಗೆದುಕೊಂಡ ಗೈಡ್​, ಕೋಪಗೊಂಡ ನೆಟ್ಟಿಗರು

Selfie with Leopard : ಎಂಥ ಅಪಾಯಕಾರಿ ವಿಡಿಯೋ ಇದು ಅಂತ ಕೆಲವರು, ಈತನ ಶೌರ್ಯ ಮೆಚ್ಚಲೇಬೇಕು ಅಂತ ಇನ್ನೂ ಕೆಲವರು. ಏನಂತೀರಿ ನೀವಿದಕ್ಕೆ?

Viral Video : ಚಿರತೆಯೊಂದಿಗೆ ಸೆಲ್ಫೀ ತೆಗೆದುಕೊಂಡ ಗೈಡ್​, ಕೋಪಗೊಂಡ ನೆಟ್ಟಿಗರು
ಚಿರತೆಯೊಂದಿಗೆ ಸೆಲ್ಫೀ ತೆಗೆದುಕೊಳ್ಳುತ್ತಿರುವ ಸಫಾರಿ ಗೈಡ್
Follow us
TV9 Web
| Updated By: ಶ್ರೀದೇವಿ ಕಳಸದ

Updated on: Sep 24, 2022 | 10:20 AM

Viral Video : ಅಳಿವಿನಂಚಿನಲ್ಲಿರುವ ಚಿರತೆಗಳ ವಿಷಯ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ  ಚರ್ಚೆಯಲ್ಲಿದೆ. ಹೀಗಿರುವಾಗಲೇ ಚಿರತೆಯ ವಿಡಿಯೋ ಒಂದು ನೆಟ್ಟಿಗರ ಗಮನ ಸೆಳೆದಿದೆ. ಐಎಫ್‌ಎಸ್ ಅಧಿಕಾರಿ ಕ್ಲೆಮೆಂಟ್ ಬೆನ್ ಟ್ವಿಟರ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಾಹನ ಕಾಡಿನಲ್ಲಿ ಸಫಾರಿಗೆ ಹೊರಟಿದೆ. ಇದರ ತುಂಬಾ ಪ್ರವಾಸಿಗರಿದ್ಧಾರೆ. ಮಧ್ಯೆ  ಚಿರತೆಯೊಂದು ಅಡ್ಡ ಬರುತ್ತದೆ. ಕೆಲ ಸೆಕೆಂಡುಗಳಲ್ಲಿ ವಾಹನದ ಮೇಲೆ ಹಾರುತ್ತದೆ ಚಿರತೆ. ಪ್ರವಾಸಿಗರು ಭಯಭೀತರಾಗುತ್ತಾರೆ. ಸನ್​ ರೂಫ್​ನಿಂದ ಇಣುಕಿದಾಗಲಂತೂ ಜೀವವೇ ಬಾಯಿಗೆ ಬಂದಂತಾಗುತ್ತದೆ. ಅಂಥದ್ದರಲ್ಲಿ ಸಫಾರಿ ಗೈಡ್​ ಎದ್ದುನಿಂತು ಚಿರತೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲಾರಂಭಿಸುತ್ತಾನೆ.

ನೋಡಿದ ಯಾರಿಗೂ ಇದು ಎಂಥ ಅಪಾಯಕಾರಿ ಸ್ಥಿತಿ ಅನ್ನಿಸದೇ ಇರದು. ಇನ್ನು ಹೀಗೆ ವಾಹನಗಳನ್ನು ಏರಿದ ಚಿರತೆಗಳು ಕೆಳಗಿಳಿಯಲು ಸಾಮಾನ್ಯವಾಗಿ ಸಾಕಷ್ಟು ಸಮಯವನ್ನು ತೆಗೆದುಕೊಳ್ಳುತ್ತವೆ. ಆದರೆ ಇಲ್ಲಿ ಈ ಚಿರತೆ ಎಷ್ಟು ಸಮಯ ತೆಗೆದುಕೊಂಡಿತು ಎನ್ನುವುದು ತಿಳಿದುಬಂದಿಲ್ಲ. ಸೆಲ್ಫೀ ತೆಗೆದುಕೊಂಡ ನಂತರ ಈ ವಿಡಿಯೋ ಥಟ್ಟನೆ ಮುಗಿದುಬಿಡುತ್ತದೆ.  78,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು ಅನೇಕ ರೀತಿಯ ಪ್ರತಿಕ್ರಿಯೆಗಳನ್ನು ಈ ವಿಡಿಯೋ ಪಡೆದಿದೆ.

ಸಫಾರಿ ಗೈಡ್​ನ ಶೌರ್ಯಕ್ಕೆ ನೆಟ್ಟಿಗರು ಬೆರಗಾಗಿದ್ದಾರಾದರೂ ಬಹಳಷ್ಟು ಜನರು ಈ ನಡೆ ಅಪಾಯಕಾರಿ ಎಂದಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ